AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ರೈಲಿನಲ್ಲಿ ಬಿದ್ದ ಊಟದ ಡಬ್ಬಿ, ಸ್ವಚ್ಛಗೊಳಿಸಿದ ಈ ಹುಡುಗ

Metro Delhi : ಇಂತಹ ಜವಾಬ್ದಾರಿಯುತ ಯುವಕರ ನಡೆಯೇ ನಮ್ಮ ದೇಶದ ಉಜ್ವಲ ಭವಿಷ್ಯವನ್ನು ಕಟ್ಟಿಕೊಡುತ್ತದೆ. ಪ್ರತಿಯೊಬ್ಬರಲ್ಲಿಯೂ ಇಂಥ ಪ್ರಜ್ಞೆ ಇದ್ದರೆ ದೇಶ ಸ್ವಚ್ಛವೂ ಸುಂದರವೂ ಆಗಿರುತ್ತದೆ ಎನ್ನುತ್ತಿದ್ದಾರೆ ನೆಟ್ಟಿಗರು.

ಮೆಟ್ರೋ ರೈಲಿನಲ್ಲಿ ಬಿದ್ದ ಊಟದ ಡಬ್ಬಿ, ಸ್ವಚ್ಛಗೊಳಿಸಿದ ಈ ಹುಡುಗ
Follow us
TV9 Web
| Updated By: ಶ್ರೀದೇವಿ ಕಳಸದ

Updated on:Dec 06, 2022 | 4:55 PM

Viral Video : ಮನೆಯಲ್ಲಿ ಒಂದಗಳು ನೆಲಕ್ಕೆ ಬಿದ್ದರೂ ಸ್ವಚ್ಛಗೊಳಿಸಲಾಗುತ್ತದೆ. ಹೋಟೆಲಿನಲ್ಲಿಯೂ ಸ್ವಚ್ಛ ಮಾಡುವವರು ಇರುತ್ತಾರೆ. ರಸ್ತೆಯಲ್ಲಿ ಪೌರಕಾರ್ಮಿಕರು ಇರುತ್ತಾರೆ. ಆದರೆ ಚಲಿಸುವ ಮೆಟ್ರೋದಲ್ಲಿ? ಇದೀಗ ವೈರಲ್ ಆಗಿರುವ ಈ ವಿಡಿಯೋ ಮೆಟ್ರೋ ರೈಲಿನೊಳಗಿನದು. ದೆಹಲಿಯ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಕಸ್ಮಾತ್ ಆಗಿ ಈ ಹುಡುಗನ ಬ್ಯಾಗಿನಿಂದ ಊಟದ ಡಬ್ಬಿ ಜಾರಿ ಕೆಳಗೆ ಬಿದ್ದಿದೆ. ಆಗ ಈ ಯುವಕ ತಡಮಾಡದೆ ನೆಲದ ಮೇಲೆ ಬಿದ್ದ ಆಹಾರವನ್ನು ಸ್ವಚ್ಛಗೊಳಿಸಿ ನೆಲವನ್ನ ಚೊಕ್ಕಟಗೊಳಿಸಿದ್ದಾನೆ.

ಈ ಪೋಸ್ಟ್​ ಅನ್ನು ಲಿಂಕ್​ಡಿನ್​ನಲ್ಲಿ ಅಶು ಸಿಂಗ್​ ಎನ್ನುವವರು ಹಂಚಿಕೊಂಡಿದ್ದಾರೆ. ಈ  ಹುಡುಗ ತನ್ನ ಬ್ಯಾಗಿನಿಂದ ನೀರಿನ ಬಾಟಲಿಯನ್ನು ಹೊರತೆಗೆಯುತ್ತಿದ್ದಾಗ ಊಟದ ಡಬ್ಬಿ ಹೊರಬಿದ್ದಿದೆ. ನಂತರ ಬಿದ್ದ ಆಹಾರವನ್ನೆಲ್ಲ ಸ್ವಚ್ಛಗೊಳಿಸಲು ತನ್ನ ನೋಟ್​ಬುಕ್ಕಿನ ಹಾಳೆಯನ್ನು ಉಪಯೋಗಿಸಿದ್ದಾನೆ. ಆಮೇಲೆ ತನ್ನ ಕರ್ಚೀಫಿನಿಂದ ನೆಲವನ್ನು ಒರೆಸಿ ಪೂರ್ತಿ ಸ್ವಚ್ಛಗೊಳಿಸಿದ್ದಾನೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ತನಕ 1 ಲಕ್ಷ ಜನರು ಈ ಪೋಸ್ಟ್​ ಇಷ್ಟಪಟ್ಟಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ಉತ್ತಮ ಶಿಕ್ಷಣಕ್ಕೆ ಇದೇ ನಿಜವಾದ ಉದಾಹರಣೆ ಎಂದಿದ್ದಾರೆ ಹಲವಾರು ಜನ. ಇಂತಹ ಜವಾಬ್ದಾರಿಯುತ ಯುವಕರ ನಡೆಯೇ ನಮ್ಮ ದೇಶದ ಉಜ್ವಲ ಭವಿಷ್ಯವನ್ನು ಕಟ್ಟಿಕೊಡುತ್ತದೆ ಎಂದಿದ್ದಾರೆ ಇನ್ನೂ ಕೆಲವರು. ಇಂಥ ಜವಾಬ್ದಾರಿಯುತ ನಡೆ ಪ್ರತಿಯೊಬ್ಬರಿಗೂ ಇದ್ದರೆ ದೇಶ ಸ್ವಚ್ಛವೂ ಸುಂದರವೂ ಆಗಿರುತ್ತದೆ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:24 pm, Tue, 6 December 22

ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ