AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ರೈಲಿನಲ್ಲಿ ಬಿದ್ದ ಊಟದ ಡಬ್ಬಿ, ಸ್ವಚ್ಛಗೊಳಿಸಿದ ಈ ಹುಡುಗ

Metro Delhi : ಇಂತಹ ಜವಾಬ್ದಾರಿಯುತ ಯುವಕರ ನಡೆಯೇ ನಮ್ಮ ದೇಶದ ಉಜ್ವಲ ಭವಿಷ್ಯವನ್ನು ಕಟ್ಟಿಕೊಡುತ್ತದೆ. ಪ್ರತಿಯೊಬ್ಬರಲ್ಲಿಯೂ ಇಂಥ ಪ್ರಜ್ಞೆ ಇದ್ದರೆ ದೇಶ ಸ್ವಚ್ಛವೂ ಸುಂದರವೂ ಆಗಿರುತ್ತದೆ ಎನ್ನುತ್ತಿದ್ದಾರೆ ನೆಟ್ಟಿಗರು.

ಮೆಟ್ರೋ ರೈಲಿನಲ್ಲಿ ಬಿದ್ದ ಊಟದ ಡಬ್ಬಿ, ಸ್ವಚ್ಛಗೊಳಿಸಿದ ಈ ಹುಡುಗ
TV9 Web
| Edited By: |

Updated on:Dec 06, 2022 | 4:55 PM

Share

Viral Video : ಮನೆಯಲ್ಲಿ ಒಂದಗಳು ನೆಲಕ್ಕೆ ಬಿದ್ದರೂ ಸ್ವಚ್ಛಗೊಳಿಸಲಾಗುತ್ತದೆ. ಹೋಟೆಲಿನಲ್ಲಿಯೂ ಸ್ವಚ್ಛ ಮಾಡುವವರು ಇರುತ್ತಾರೆ. ರಸ್ತೆಯಲ್ಲಿ ಪೌರಕಾರ್ಮಿಕರು ಇರುತ್ತಾರೆ. ಆದರೆ ಚಲಿಸುವ ಮೆಟ್ರೋದಲ್ಲಿ? ಇದೀಗ ವೈರಲ್ ಆಗಿರುವ ಈ ವಿಡಿಯೋ ಮೆಟ್ರೋ ರೈಲಿನೊಳಗಿನದು. ದೆಹಲಿಯ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಕಸ್ಮಾತ್ ಆಗಿ ಈ ಹುಡುಗನ ಬ್ಯಾಗಿನಿಂದ ಊಟದ ಡಬ್ಬಿ ಜಾರಿ ಕೆಳಗೆ ಬಿದ್ದಿದೆ. ಆಗ ಈ ಯುವಕ ತಡಮಾಡದೆ ನೆಲದ ಮೇಲೆ ಬಿದ್ದ ಆಹಾರವನ್ನು ಸ್ವಚ್ಛಗೊಳಿಸಿ ನೆಲವನ್ನ ಚೊಕ್ಕಟಗೊಳಿಸಿದ್ದಾನೆ.

ಈ ಪೋಸ್ಟ್​ ಅನ್ನು ಲಿಂಕ್​ಡಿನ್​ನಲ್ಲಿ ಅಶು ಸಿಂಗ್​ ಎನ್ನುವವರು ಹಂಚಿಕೊಂಡಿದ್ದಾರೆ. ಈ  ಹುಡುಗ ತನ್ನ ಬ್ಯಾಗಿನಿಂದ ನೀರಿನ ಬಾಟಲಿಯನ್ನು ಹೊರತೆಗೆಯುತ್ತಿದ್ದಾಗ ಊಟದ ಡಬ್ಬಿ ಹೊರಬಿದ್ದಿದೆ. ನಂತರ ಬಿದ್ದ ಆಹಾರವನ್ನೆಲ್ಲ ಸ್ವಚ್ಛಗೊಳಿಸಲು ತನ್ನ ನೋಟ್​ಬುಕ್ಕಿನ ಹಾಳೆಯನ್ನು ಉಪಯೋಗಿಸಿದ್ದಾನೆ. ಆಮೇಲೆ ತನ್ನ ಕರ್ಚೀಫಿನಿಂದ ನೆಲವನ್ನು ಒರೆಸಿ ಪೂರ್ತಿ ಸ್ವಚ್ಛಗೊಳಿಸಿದ್ದಾನೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ತನಕ 1 ಲಕ್ಷ ಜನರು ಈ ಪೋಸ್ಟ್​ ಇಷ್ಟಪಟ್ಟಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ಉತ್ತಮ ಶಿಕ್ಷಣಕ್ಕೆ ಇದೇ ನಿಜವಾದ ಉದಾಹರಣೆ ಎಂದಿದ್ದಾರೆ ಹಲವಾರು ಜನ. ಇಂತಹ ಜವಾಬ್ದಾರಿಯುತ ಯುವಕರ ನಡೆಯೇ ನಮ್ಮ ದೇಶದ ಉಜ್ವಲ ಭವಿಷ್ಯವನ್ನು ಕಟ್ಟಿಕೊಡುತ್ತದೆ ಎಂದಿದ್ದಾರೆ ಇನ್ನೂ ಕೆಲವರು. ಇಂಥ ಜವಾಬ್ದಾರಿಯುತ ನಡೆ ಪ್ರತಿಯೊಬ್ಬರಿಗೂ ಇದ್ದರೆ ದೇಶ ಸ್ವಚ್ಛವೂ ಸುಂದರವೂ ಆಗಿರುತ್ತದೆ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:24 pm, Tue, 6 December 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ