AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರೋ ರೈಲಿನಲ್ಲಿ ಬಿದ್ದ ಊಟದ ಡಬ್ಬಿ, ಸ್ವಚ್ಛಗೊಳಿಸಿದ ಈ ಹುಡುಗ

Metro Delhi : ಇಂತಹ ಜವಾಬ್ದಾರಿಯುತ ಯುವಕರ ನಡೆಯೇ ನಮ್ಮ ದೇಶದ ಉಜ್ವಲ ಭವಿಷ್ಯವನ್ನು ಕಟ್ಟಿಕೊಡುತ್ತದೆ. ಪ್ರತಿಯೊಬ್ಬರಲ್ಲಿಯೂ ಇಂಥ ಪ್ರಜ್ಞೆ ಇದ್ದರೆ ದೇಶ ಸ್ವಚ್ಛವೂ ಸುಂದರವೂ ಆಗಿರುತ್ತದೆ ಎನ್ನುತ್ತಿದ್ದಾರೆ ನೆಟ್ಟಿಗರು.

ಮೆಟ್ರೋ ರೈಲಿನಲ್ಲಿ ಬಿದ್ದ ಊಟದ ಡಬ್ಬಿ, ಸ್ವಚ್ಛಗೊಳಿಸಿದ ಈ ಹುಡುಗ
TV9 Web
| Updated By: ಶ್ರೀದೇವಿ ಕಳಸದ|

Updated on:Dec 06, 2022 | 4:55 PM

Share

Viral Video : ಮನೆಯಲ್ಲಿ ಒಂದಗಳು ನೆಲಕ್ಕೆ ಬಿದ್ದರೂ ಸ್ವಚ್ಛಗೊಳಿಸಲಾಗುತ್ತದೆ. ಹೋಟೆಲಿನಲ್ಲಿಯೂ ಸ್ವಚ್ಛ ಮಾಡುವವರು ಇರುತ್ತಾರೆ. ರಸ್ತೆಯಲ್ಲಿ ಪೌರಕಾರ್ಮಿಕರು ಇರುತ್ತಾರೆ. ಆದರೆ ಚಲಿಸುವ ಮೆಟ್ರೋದಲ್ಲಿ? ಇದೀಗ ವೈರಲ್ ಆಗಿರುವ ಈ ವಿಡಿಯೋ ಮೆಟ್ರೋ ರೈಲಿನೊಳಗಿನದು. ದೆಹಲಿಯ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಅಕಸ್ಮಾತ್ ಆಗಿ ಈ ಹುಡುಗನ ಬ್ಯಾಗಿನಿಂದ ಊಟದ ಡಬ್ಬಿ ಜಾರಿ ಕೆಳಗೆ ಬಿದ್ದಿದೆ. ಆಗ ಈ ಯುವಕ ತಡಮಾಡದೆ ನೆಲದ ಮೇಲೆ ಬಿದ್ದ ಆಹಾರವನ್ನು ಸ್ವಚ್ಛಗೊಳಿಸಿ ನೆಲವನ್ನ ಚೊಕ್ಕಟಗೊಳಿಸಿದ್ದಾನೆ.

ಈ ಪೋಸ್ಟ್​ ಅನ್ನು ಲಿಂಕ್​ಡಿನ್​ನಲ್ಲಿ ಅಶು ಸಿಂಗ್​ ಎನ್ನುವವರು ಹಂಚಿಕೊಂಡಿದ್ದಾರೆ. ಈ  ಹುಡುಗ ತನ್ನ ಬ್ಯಾಗಿನಿಂದ ನೀರಿನ ಬಾಟಲಿಯನ್ನು ಹೊರತೆಗೆಯುತ್ತಿದ್ದಾಗ ಊಟದ ಡಬ್ಬಿ ಹೊರಬಿದ್ದಿದೆ. ನಂತರ ಬಿದ್ದ ಆಹಾರವನ್ನೆಲ್ಲ ಸ್ವಚ್ಛಗೊಳಿಸಲು ತನ್ನ ನೋಟ್​ಬುಕ್ಕಿನ ಹಾಳೆಯನ್ನು ಉಪಯೋಗಿಸಿದ್ದಾನೆ. ಆಮೇಲೆ ತನ್ನ ಕರ್ಚೀಫಿನಿಂದ ನೆಲವನ್ನು ಒರೆಸಿ ಪೂರ್ತಿ ಸ್ವಚ್ಛಗೊಳಿಸಿದ್ದಾನೆ.

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ತನಕ 1 ಲಕ್ಷ ಜನರು ಈ ಪೋಸ್ಟ್​ ಇಷ್ಟಪಟ್ಟಿದ್ದಾರೆ. ನೂರಾರು ಜನರು ಪ್ರತಿಕ್ರಿಯಿಸಿದ್ದಾರೆ. ಉತ್ತಮ ಶಿಕ್ಷಣಕ್ಕೆ ಇದೇ ನಿಜವಾದ ಉದಾಹರಣೆ ಎಂದಿದ್ದಾರೆ ಹಲವಾರು ಜನ. ಇಂತಹ ಜವಾಬ್ದಾರಿಯುತ ಯುವಕರ ನಡೆಯೇ ನಮ್ಮ ದೇಶದ ಉಜ್ವಲ ಭವಿಷ್ಯವನ್ನು ಕಟ್ಟಿಕೊಡುತ್ತದೆ ಎಂದಿದ್ದಾರೆ ಇನ್ನೂ ಕೆಲವರು. ಇಂಥ ಜವಾಬ್ದಾರಿಯುತ ನಡೆ ಪ್ರತಿಯೊಬ್ಬರಿಗೂ ಇದ್ದರೆ ದೇಶ ಸ್ವಚ್ಛವೂ ಸುಂದರವೂ ಆಗಿರುತ್ತದೆ ಎಂದಿದ್ದಾರೆ ಅನೇಕರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 4:24 pm, Tue, 6 December 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?