AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬೆಲ್ಲ ತಯಾರಿಕೆಯ ವಿಡಿಯೋ ನೋಡಿ ನೆಟ್ಟಿಗರು ಶಾಕ್​​​, ನೀವು ಒಮ್ಮೆ ನೋಡಿ

ಸಿಹಿಯನ್ನು ಯಾರು ಇಷ್ಟ ಪಡಲ್ಲ ಹೇಳಿ, ಇಷ್ಟ ಪಟ್ಟು ಸೇವಿಸುವ ಸಿಹಿ ತಿಂಡಿಗಳಲ್ಲಿ ಸಿಹಿಕಾರಕವಾಗಿ ಬೆಲ್ಲ ಅಥವಾ ಸಕ್ಕರೆಯನ್ನು ಬಳಸುತ್ತಾರೆ. ಮಧುಮೇಹಿಗಳು ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದೇ ಹೆಚ್ಚು. ಆದರೆ ಎಂದಾದರೂ ಕಾರ್ಖಾನೆಗಳಲ್ಲಿ ಬೆಲ್ಲ ಉತ್ಪಾದನೆಯ ಪ್ರಕ್ರಿಯೆಯೂ ಹೇಗಿರುತ್ತದೆ ಎಂದು ಯೋಚಿಸಿದ್ದೀರಾ. ಇದೀಗ ಕಾರ್ಖಾನೆಯಲ್ಲಿ ಬೆಲ್ಲ ಉತ್ಪಾದನೆ ಪ್ರಕ್ರಿಯೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

Viral Video: ಬೆಲ್ಲ ತಯಾರಿಕೆಯ ವಿಡಿಯೋ ನೋಡಿ ನೆಟ್ಟಿಗರು ಶಾಕ್​​​, ನೀವು ಒಮ್ಮೆ ನೋಡಿ
ಸಾಯಿನಂದಾ
| Edited By: |

Updated on:Jan 24, 2024 | 10:27 AM

Share

ಬೆಲ್ಲ ಸಿಹಿಯಾಗಿರುವುದರ ಜೊತೆಗೆ ಆರೋಗ್ಯಕ್ಕೂ ಬಹಳ ಒಳ್ಳೆಯದು. ಈ ಬೆಲ್ಲದಲ್ಲಿ ಜೀವಸತ್ವಗಳು, ಖನಿಜಗಳು, ಪ್ರೋಟೀನ್, ಕ್ಯಾಲ್ಸಿಯಂ ಮತ್ತು ಕಬ್ಬಿಣದಂತಹ ಅಗತ್ಯ ಪೋಷಕಾಂಶಗಳನ್ನು ಒಳಗೊಂಡಿದ್ದು ದಿನನಿತ್ಯದ ಆಹಾರಗಳಲ್ಲಿ ಈ ಬೆಲ್ಲವನ್ನು ಬಳಸುವವರ ಸಂಖ್ಯೆಯೂ ಹೆಚ್ಚೇ ಎನ್ನಬಹುದು. ಇತ್ತೀಚಿನ ದಿನಗಳಲ್ಲಿ ಬೆಲ್ಲವನ್ನು ಸಾಂಪ್ರದಾಯಿಕ ವಿಧಾನಗಳಿಂದ ತಯಾರಿಸುವವರ ಸಂಖ್ಯೆಯೂ ಕಡಿಮೆಯಾಗಿದ್ದು, ಯಂತ್ರಗಳ ಸಹಾಯದಿಂದ ಕಾರ್ಖಾನೆಗಳಲ್ಲಿ ದಿನಕ್ಕೆ ಬೃಹತ್ ಪ್ರಮಾಣದಲ್ಲಿ ಬೆಲ್ಲವು ಉತ್ಪಾದನೆಯಾಗುತ್ತದೆ. ಇದೀಗ ಕಾರ್ಖಾನೆಯಲ್ಲಿ ಬೆಲ್ಲ ಉತ್ಪಾದನೆಯ ಪ್ರಕ್ರಿಯೆಯ ವಿಡಿಯೋವೊಂದು ಹರಿದಾಡುತ್ತಿದ್ದು ಈ ವಿಡಿಯೋ ನೋಡಿದ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಕಾರ್ಖಾನೆಯಲ್ಲಿ ಕೆಲಸಗಾರರು ಕಬ್ಬಿನ ರಸವನ್ನು ಹೊರತೆಗೆಯಲು ಯಂತ್ರವನ್ನು ಬಳಸಿದ್ದಾರೆ. ಆ ಬಳಿಕ ಕಬ್ಬಿನ ರಸವನ್ನು ಗಟ್ಟಿಯಾಗುವವರೆಗೆ ಕುದಿಸಲಾಗಿದೆ. ಕುದಿಸಿದ ನಂತರದಲ್ಲಿ ಈ ಬೆಲ್ಲದ ಮಿಶ್ರಣವನ್ನು ನೆಲದ ಮೇಲೆ ಇಡಲಾಗಿದೆ. ಅಲ್ಲಿನ ಕೆಲಸಗಾರರು ಬೆಲ್ಲದ ಮಿಶ್ರಣವನ್ನು ಕೈಯಿಂದ ತೆಗೆದು ಅಚ್ಚು ಮಾಡುತ್ತಿದ್ದಾರೆ. ಈ ವೇಳೆಯಲ್ಲಿ ಕಾರ್ಖಾನೆಯ ಕೆಲಸಗಾರರಲ್ಲಿ ಯಾರು ಕೂಡ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಈ ಬೆಲ್ಲ ತಯಾರಿಕೆ ಪ್ರಕ್ರಿಯೆಯಲ್ಲಿ ಬಳಸಲಾದ ಪಾತ್ರೆಗಳು ಅನೈರ್ಮಲ್ಯ ಸ್ಥಿತಿಯಲ್ಲಿರುವುದನ್ನು ಕಂಡು ನೆಟ್ಟಿಗರು ಶಾಕ್ ಆಗಿದ್ದಾರೆ.

ಇದನ್ನೂ ಓದಿ:ಇದು ಎತ್ತಿನ ಗಾಡಿ ಅಲ್ಲ….. ಮತ್ತೇನು?; ವಿಡಿಯೋ ವೈರಲ್​ 

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋವೊಂದನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಶೇರ್ ಮಾಡಿದ ಕೆಲವೇ ಕ್ಷಣದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಲೈಕ್‌ ಗಳು ಬಂದಿದ್ದು, ಕಾರ್ಖಾನೆಯಲ್ಲಿ ಸ್ವಚ್ಛತೆಯ ಬಗ್ಗೆ ಗಮನ ಕೊಡದೇ ಇದ್ದಿರುವುದಕ್ಕೆ ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಈ ವಿಡಿಯೋ ನೋಡಿದ ಬಳಕೆದಾರರೊಬ್ಬರು, “ಇದು ಸಿಮೆಂಟ್ ಅನ್ನು ಬೆರೆಸಿದಂತೆ” ಎಂದು ಟೀಕಿಸಿದ್ದಾರೆ. ಮತ್ತೊಬ್ಬರು ‘ಸರ್ಕಾರ ಏನು ಮಾಡುತ್ತಿದೆ, ಇದನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಅವಕಾಶ ಕೊಟ್ಟವರು ಯಾರು’ ಎಂದು ಪ್ರಶ್ನಿಸಿದ್ದಾರೆ. ಇನ್ನೊಬ್ಬರು “ಅದು ಅಸಹ್ಯಕರವಾಗಿದೆ, ನಾನು ಅದನ್ನು ತಿಂದಿದ್ದೇನೆ ಎಂದು ನಂಬಲು ಸಾಧ್ಯವಿಲ್ಲ” ಎಂದಿದ್ದಾರೆ. ಹೀಗೆ ಈ ವಿಡಿಯೋವನ್ನು ನೋಡಿ ಬೆಲ್ಲ ಮಾಡುವ ಪ್ರಕ್ರಿಯೆಯ ಬಗ್ಗೆ ಕೆಲವರು ಟೀಕಿಸಿದರೆ, ಇನ್ನು ಕೆಲವರು ಅಲ್ಲಿನ ಸ್ವಚ್ಛಯ ಬಗ್ಗೆ ಗಮನ ಹರಿಸಿದೆ ಇದ್ದದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:55 am, Tue, 23 January 24

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಗೃಹಲಕ್ಷ್ಮಿ ಯೋಜನೆ ಹಣ ಪಡೆಯಲು ಇನ್ನು ಈ ಎಲ್ಲ ದಾಖಲೆ ಕಡ್ಡಾಯ
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!
ಬ್ಯಾಂಕ್​ಗೆ ಬೀಗ ಹಾಕಿ ರಾತ್ರಿಯಿಡೀ ಗ್ರಾಹಕರ ಪ್ರತಿಭಟನೆ!