AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಕುಸಿದ ಮನೆ; ಕಳೆದ 1 ವರ್ಷದಿಂದ ಶೌಚಾಲಯದಲ್ಲೇ ಜೀವನ ಕಳೆಯುತ್ತಿರುವ ವೃದ್ಧೆ

ಮಕ್ಕಳ ಮದುವೆಯ ಬಳಿಕ ಒಬ್ಬಂಟಿಯಾಗಿ ಮಣ್ಣಿನ ಮನೆಯಲ್ಲಿ ವಾಸವಾಗಿದ್ದಾರೆ. ಆದರೆ ಕಳೆದ ವರ್ಷ ಸುರಿದ ಮಳೆಯಿಂದಾಗಿ ಮನೆ ಕೊಚ್ಚಿ ಹೋಗಿದ್ದು, ಅಸಹಾಯಕ ಸ್ಥಿತಿಯಲ್ಲಿ ವೃದ್ಧೆ ಪಂಚಾಯಿತಿ ಮೆಟ್ಟಿಲೇರಿದ್ದಾರೆ. ಆದರೆ ಏನು ಪ್ರಯೋಜನವಾಗದ ಕಾರಣ ಶೌಚಾಲಯದಲ್ಲೇ ಜೀವನ ಸಾಗಿಸುತ್ತಿದ್ದಾರೆ.

ಮಳೆಗೆ ಕುಸಿದ ಮನೆ; ಕಳೆದ 1 ವರ್ಷದಿಂದ ಶೌಚಾಲಯದಲ್ಲೇ ಜೀವನ ಕಳೆಯುತ್ತಿರುವ ವೃದ್ಧೆ
ಶೌಚಾಲಯದಲ್ಲೇ ಜೀವನ ಕಳೆಯುತ್ತಿರುವ ವೃದ್ಧೆ
ಅಕ್ಷತಾ ವರ್ಕಾಡಿ
|

Updated on: Apr 11, 2024 | 3:16 PM

Share

ಪಶ್ಚಿಮ ಬಂಗಾಳ: ಕಳೆದ ವರ್ಷ ಜೋರಾಗಿ ಸುರಿದ ಮಳೆದಿಂದಾಗಿ ಮಣ್ಣಿನ ಮನೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಈ ಬಗ್ಗೆ ಸ್ಥಳೀಯ ಪಂಚಾಯತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಏನು ಪ್ರಯೋಜನವಾಗಿಲ್ಲದ ಕಾರಣ ವೃದ್ಧೆಯೊಬ್ಬಳು ಕಳೆದ ಒಂದು ವರ್ಷದದಿಂದ ಶೌಚಾಲಯವನ್ನೇ ಆಶ್ರಯ ತಾಣವನ್ನಾಗಿ ಮಾಡಿಕೊಂಡಿದ್ದಾರೆ. 4 ಅಡಿ ಅಗಲ ಹಾಗೂ 3 ಅಡಿ ಉದ್ದದ ಶೌಚಾಲಯದಲ್ಲೇ ಜೀವನ ನಡೆಸುತ್ತಿದ್ದಾರೆ.

ಪಶ್ಚಿಮ ಬಂಗಾಳದ ಸುಂದ್ರಾಡಿ ಗ್ರಾಮದ ನಿವಾಸಿ ಮಿಥಿಲಾ ಮಹತೋ(66) ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೆ ಇಬ್ಬರು ಮಕ್ಕಳಿಗೂ ಮದುವೆಯಾಗಿದೆ. ಮಕ್ಕಳ ಮದುವೆಯ ಬಳಿಕ ಒಬ್ಬಂಟಿಯಾಗಿ ಮಣ್ಣಿನ ಮನೆಯಲ್ಲಿ ವಾಸವಾಗಿದ್ದಾರೆ. ಆದರೆ ಕಳೆದ ವರ್ಷ ಸುರಿದ ಮಳೆಯಿಂದಾಗಿ ಮನೆ ಕೊಚ್ಚಿ ಹೋಗಿದ್ದು, ಅಸಹಾಯಕ ಸ್ಥಿತಿಯಲ್ಲಿ ವೃದ್ಧೆ ಪಂಚಾಯಿತಿ ಮೆಟ್ಟಿಲೇರಿದ್ದಾರೆ. ಆದರೆ ಏನು ಪ್ರಯೋಜನವಾಗದ ಕಾರಣ ಶೌಚಾಲಯವನ್ನೇ ಜೀವನ ಸಾಗಿಸುತ್ತಿದ್ದಾರೆ. ದುರ್ಕು ಗ್ರಾಮ ಪಂಚಾಯತ್ ವೃದ್ಧೆಯ ಮನೆಯಿಂದ ಕೇವಲ 500 ಮೀಟರ್ ದೂರದಲ್ಲಿದೆ.

ಇದನ್ನೂ ಓದಿ: 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ; ಅಯೋಧ್ಯಾ ರಾಮನಿಗೆ ಸಮರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

ಇದೀಗ ಮಹಿಳೆ ಹೃದಯವಿದ್ರಾವಕ ಘಟನೆ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ದುರ್ಕು ಗ್ರಾಮ ಪಂಚಾಯತ್ ಅಧಕ್ಷ್ಯೆ ಚಂದಮೋನಿ ಕರಮುಡಿ ಪ್ರತಿಕ್ರಿಯಿಸಿದ್ದು, ನಮಗೆ ತಮ್ಮ ಬಡಾವಣೆಯಲ್ಲಿ ವೃದ್ಧೆಯೊಬ್ಬರು ಶೌಚಾಲಯದಲ್ಲಿ ವಾಸವಾಗಿರುವುದು ಗೊತ್ತಿರಲಿಲ್ಲ. ಅಗತ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದೇ ವಿಚಾರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ವಿವೇಕ ರಂಗ ಮಾತನಾಡಿ, ಬಡವರಿಗಾಗಿ ಇರುವ ಯೋಜನೆಗಳನ್ನು ಬದಿಗೊತ್ತಲಾಗುತ್ತಿದೆ. ಮೇಲಾಗಿ ಬಡವರ ಆಸರೆಗಾಗಿ ಕೇಂದ್ರ ಸರಕಾರದ ಹಣದಲ್ಲಿ ನಿರ್ಮಿಸಿರುವ ವಸತಿ ಯೋಜನೆಯಲ್ಲಿ ಫಲಾನುಭವಿಗಳ ಆಯ್ಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ. ಆ ಹಣದಲ್ಲಿ ಪಕ್ಷದ ಮುಖಂಡರ ಭವನ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ