ಮಳೆಗೆ ಕುಸಿದ ಮನೆ; ಕಳೆದ 1 ವರ್ಷದಿಂದ ಶೌಚಾಲಯದಲ್ಲೇ ಜೀವನ ಕಳೆಯುತ್ತಿರುವ ವೃದ್ಧೆ

|

Updated on: Apr 11, 2024 | 3:16 PM

ಮಕ್ಕಳ ಮದುವೆಯ ಬಳಿಕ ಒಬ್ಬಂಟಿಯಾಗಿ ಮಣ್ಣಿನ ಮನೆಯಲ್ಲಿ ವಾಸವಾಗಿದ್ದಾರೆ. ಆದರೆ ಕಳೆದ ವರ್ಷ ಸುರಿದ ಮಳೆಯಿಂದಾಗಿ ಮನೆ ಕೊಚ್ಚಿ ಹೋಗಿದ್ದು, ಅಸಹಾಯಕ ಸ್ಥಿತಿಯಲ್ಲಿ ವೃದ್ಧೆ ಪಂಚಾಯಿತಿ ಮೆಟ್ಟಿಲೇರಿದ್ದಾರೆ. ಆದರೆ ಏನು ಪ್ರಯೋಜನವಾಗದ ಕಾರಣ ಶೌಚಾಲಯದಲ್ಲೇ ಜೀವನ ಸಾಗಿಸುತ್ತಿದ್ದಾರೆ.

ಮಳೆಗೆ ಕುಸಿದ ಮನೆ; ಕಳೆದ 1 ವರ್ಷದಿಂದ ಶೌಚಾಲಯದಲ್ಲೇ ಜೀವನ ಕಳೆಯುತ್ತಿರುವ ವೃದ್ಧೆ
ಶೌಚಾಲಯದಲ್ಲೇ ಜೀವನ ಕಳೆಯುತ್ತಿರುವ ವೃದ್ಧೆ
Follow us on

ಪಶ್ಚಿಮ ಬಂಗಾಳ: ಕಳೆದ ವರ್ಷ ಜೋರಾಗಿ ಸುರಿದ ಮಳೆದಿಂದಾಗಿ ಮಣ್ಣಿನ ಮನೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಈ ಬಗ್ಗೆ ಸ್ಥಳೀಯ ಪಂಚಾಯತ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಏನು ಪ್ರಯೋಜನವಾಗಿಲ್ಲದ ಕಾರಣ ವೃದ್ಧೆಯೊಬ್ಬಳು ಕಳೆದ ಒಂದು ವರ್ಷದದಿಂದ ಶೌಚಾಲಯವನ್ನೇ ಆಶ್ರಯ ತಾಣವನ್ನಾಗಿ ಮಾಡಿಕೊಂಡಿದ್ದಾರೆ. 4 ಅಡಿ ಅಗಲ ಹಾಗೂ 3 ಅಡಿ ಉದ್ದದ ಶೌಚಾಲಯದಲ್ಲೇ ಜೀವನ ನಡೆಸುತ್ತಿದ್ದಾರೆ.

ಪಶ್ಚಿಮ ಬಂಗಾಳದ ಸುಂದ್ರಾಡಿ ಗ್ರಾಮದ ನಿವಾಸಿ ಮಿಥಿಲಾ ಮಹತೋ(66) ಅವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಆದರೆ ಇಬ್ಬರು ಮಕ್ಕಳಿಗೂ ಮದುವೆಯಾಗಿದೆ. ಮಕ್ಕಳ ಮದುವೆಯ ಬಳಿಕ ಒಬ್ಬಂಟಿಯಾಗಿ ಮಣ್ಣಿನ ಮನೆಯಲ್ಲಿ ವಾಸವಾಗಿದ್ದಾರೆ. ಆದರೆ ಕಳೆದ ವರ್ಷ ಸುರಿದ ಮಳೆಯಿಂದಾಗಿ ಮನೆ ಕೊಚ್ಚಿ ಹೋಗಿದ್ದು, ಅಸಹಾಯಕ ಸ್ಥಿತಿಯಲ್ಲಿ ವೃದ್ಧೆ ಪಂಚಾಯಿತಿ ಮೆಟ್ಟಿಲೇರಿದ್ದಾರೆ. ಆದರೆ ಏನು ಪ್ರಯೋಜನವಾಗದ ಕಾರಣ ಶೌಚಾಲಯವನ್ನೇ ಜೀವನ ಸಾಗಿಸುತ್ತಿದ್ದಾರೆ. ದುರ್ಕು ಗ್ರಾಮ ಪಂಚಾಯತ್ ವೃದ್ಧೆಯ ಮನೆಯಿಂದ ಕೇವಲ 500 ಮೀಟರ್ ದೂರದಲ್ಲಿದೆ.

ಇದನ್ನೂ ಓದಿ: 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ; ಅಯೋಧ್ಯಾ ರಾಮನಿಗೆ ಸಮರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

ಇದೀಗ ಮಹಿಳೆ ಹೃದಯವಿದ್ರಾವಕ ಘಟನೆ ಎಲ್ಲೆಡೆ ವೈರಲ್​​ ಆಗುತ್ತಿದ್ದಂತೆ ದುರ್ಕು ಗ್ರಾಮ ಪಂಚಾಯತ್ ಅಧಕ್ಷ್ಯೆ ಚಂದಮೋನಿ ಕರಮುಡಿ ಪ್ರತಿಕ್ರಿಯಿಸಿದ್ದು, ನಮಗೆ ತಮ್ಮ ಬಡಾವಣೆಯಲ್ಲಿ ವೃದ್ಧೆಯೊಬ್ಬರು ಶೌಚಾಲಯದಲ್ಲಿ ವಾಸವಾಗಿರುವುದು ಗೊತ್ತಿರಲಿಲ್ಲ. ಅಗತ್ಯ ಕ್ರಮಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಇದೇ ವಿಚಾರವಾಗಿ ಬಿಜೆಪಿ ಜಿಲ್ಲಾಧ್ಯಕ್ಷ ವಿವೇಕ ರಂಗ ಮಾತನಾಡಿ, ಬಡವರಿಗಾಗಿ ಇರುವ ಯೋಜನೆಗಳನ್ನು ಬದಿಗೊತ್ತಲಾಗುತ್ತಿದೆ. ಮೇಲಾಗಿ ಬಡವರ ಆಸರೆಗಾಗಿ ಕೇಂದ್ರ ಸರಕಾರದ ಹಣದಲ್ಲಿ ನಿರ್ಮಿಸಿರುವ ವಸತಿ ಯೋಜನೆಯಲ್ಲಿ ಫಲಾನುಭವಿಗಳ ಆಯ್ಕೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ. ಪ್ರಧಾನ್ ಮಂತ್ರಿ ಆವಾಸ್ ಯೋಜನೆಯಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ. ಆ ಹಣದಲ್ಲಿ ಪಕ್ಷದ ಮುಖಂಡರ ಭವನ ನಿರ್ಮಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: