AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಪ್ಲಾಸ್ಟಿಕ್​ ಮೀನು; ಚೆನ್ನೈನ ಸಮುದ್ರ ತೀರದಲ್ಲಿ ​ತ್ಯಾಜ್ಯದಿಂದ ಕಲಾಕೃತಿ

Beach : ತ್ಯಾಜ್ಯವನ್ನು ಸಮುದ್ರಕ್ಕೆ ಎಸೆಯುವ ಜನರಿಗೆ ಇನ್ನೂ ಹೆಚ್ಚಿನ ತಿಳಿವಳಿಕೆ ನೀಡುವಂತ ಕಾರ್ಯಕ್ರಮಗಳಾಗಬೇಕು ಎಂದಿದ್ಧಾರೆ ಅನೇಕರು. ಬೀಚ್​​ ಬಳಿಯ ಅಂಗಡಿಗಳನ್ನು ನಿಷೇಧಿಸಬೇಕು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Viral Video: ಪ್ಲಾಸ್ಟಿಕ್​ ಮೀನು; ಚೆನ್ನೈನ ಸಮುದ್ರ ತೀರದಲ್ಲಿ ​ತ್ಯಾಜ್ಯದಿಂದ ಕಲಾಕೃತಿ
ಚೆನ್ನೈನ ಬೀಚ್​ನಲ್ಲಿ ಪ್ಲಾಸ್ಟಿಕ್​ ತ್ಯಾಜ್ಯದಿಂದ ತಯಾರಿಸಿದ ಪ್ರತಿಷ್ಠಾಪನಾ ಕಲೆ
TV9 Web
| Edited By: ಶ್ರೀದೇವಿ ಕಳಸದ|

Updated on:May 23, 2023 | 2:16 PM

Share

Chennai : ಸಮುದ್ರವೆಂದಮೇಲೆ ಕೊಟ್ಟಿದ್ದನ್ನೆಲ್ಲ ಬಾಯಿತೆರೆದು ಎಳೆದುಕೊಳ್ಳುತ್ತದೆ. ಆದರೆ ಅದರಿಂದ ತೊಂದರೆಯಾಗುವುದು? ಅದರಲ್ಲೂ ಪ್ಲಾಸ್ಟಿಕ್​ ಎಂಬ ವಿಷದಕೂಪದ ಬಗ್ಗೆ ಕೇಳಬೇಕೆ? ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಚೆನ್ನೈನ ಅಧಿಕಾರಿಗಳು ಸಮುದ್ರದೊಳಗಿನ ಪ್ಲಾಸ್ಟಿಕ್​ ತ್ಯಾಜ್ಯದಿಂದ ಮೀನಿನ ರೂಪು ಕೊಟ್ಟು ಕಲಾತ್ಮಕಗೊಳಿಸಿದ್ದಾರೆ. ಪ್ಲಾಸ್ಟಿಕ್​ ಮಾಲಿನ್ಯದಿಂದ ಪರಿಸರದ ಮೇಲೆ ಉಂಟಾಗುತ್ತಿರುವ ಹಾನಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶ ಈ ಪ್ಲಾಸ್ಟಿಕ್​ ಮೀನಿನ ಇನ್​ಸ್ಟಾಲ್ಲೇಷನ್​.

ಮೆಗಾ ಬೀಚ್​ ಕ್ಲೀನ್​ ಅಪ್​ ಪ್ರೋಗ್ರಾಮ್​ನಡಿ ಬೆಸೆಂಟ್​ನಗರದ ಬೀಚಿನಲ್ಲಿ ಹೀಗೊಂದು ಸೃಜನಶೀಲ ಆಲೋಚನೆ ಕಾರ್ಯಗತಗೊಂಡಿದೆ. ‘ಮೆಗಾ ಬೀಚ್ ಕ್ಲೀನ್ ಅಪ್ ಕಾರ್ಯಕ್ರಮದಡಿ ಈ ಕಲಾಕೃತಿಯನ್ನು ಸ್ಥಾಪಿಸಲಾಗಿದೆ. ಪರಿಸರ ಮಾಲಿನ್ಯದಿಂದ ಜೀವವೈವಿಧ್ಯತೆಯ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಉದ್ಧೇಶ’ ಎಂದು ಐಎಎಸ್​ ಅಧಿಕಾರಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : Viral Video: ದೇಶವಿಭಜನೆಯಲ್ಲಿ ಬೇರ್ಪಟ್ಟ ಒಡಹುಟ್ಟಿದವರು 75 ವರ್ಷಗಳ ನಂತರ ಪುನರ್ಮಿಲನಗೊಂಡಾಗ

ಸುಮಾರು 70,000 ಜನರು ಈ ವಿಡಿಯೋ ವೀಕ್ಷಿಸಿದ್ದಾರೆ. ನೂರಾರು ಜನ ರೀಟ್ವೀಟ್​ ಮಾಡಿದ್ದಾರೆ. ತ್ಯಾಜ್ಯವನ್ನು ಸಮುದ್ರಕ್ಕೆ ಎಸೆಯುವ ಜನರಿಗೆ ಇನ್ನೂ ಹೆಚ್ಚಿನ ತಿಳಿವಳಿಕೆ ನೀಡುವಂತ ಕಾರ್ಯಕ್ರಮಗಳಾಗಬೇಕು ಎಂದಿದ್ಧಾರೆ ಅನೇಕರು. ಬೀಚ್​​ ಬಳಿಯ ಅಂಗಡಿಗಳನ್ನು ನಿಷೇಧಿಸಬೇಕು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : Viral Video: ಮುಂಬೈನ ಕೊಳಗೇರಿಯ 14ರ ಬಾಲಕಿ ‘ಫಾರೆಸ್ಟ್​ ಎಸೆನ್ಷಿಯಲ್’​ ಮಾಡೆಲ್

ಅಂಗಡಿಗಳನ್ನು ನಿಷೇಧಿಸಿದರೆ ಸುತ್ತಮುತ್ತಲಿನ ಜನಜೀವನ ಹೇಗೆ ಸಾಗಬೇಕು? ಸೂಕ್ತನಿಯಮಾವಳಿಗಳನ್ನು ಕಟ್ಟುನಿಟ್ಠಾಗಿ ಪಾಲಿಸಬೇಕು. ಆ ಕುರಿತು ಸಾರ್ವಜನಿಕರಲ್ಲಿ ಹೆಚ್ಚಿಗೆ ತಿಳಿವಳಿಕೆ ಮೂಡಿಸಬೇಕು ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್​ ನ್ಯೂಸ್​​ಗಾಗಿ ಕ್ಲಿಕ್ ಮಾಡಿ  

Published On - 2:16 pm, Tue, 23 May 23

Follow Us
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್