AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Menstrual leave: ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ ಘೋಷಿಸಿದ ಈ ವಿಶ್ವವಿದ್ಯಾನಿಲಯ

ಚಂಡೀಗಢದ ಪಂಜಾಬ್ ವಿಶ್ವವಿದ್ಯಾನಿಲಯವು ವಿದ್ಯಾರ್ಥಿನಿಯರಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನದ ರಜೆ ನೀಡಲು ಹೊಸ ನೀತಿಯನ್ನು ಜಾರಿಗೆ ತಂದಿದೆ. ವಿಶ್ವವಿದ್ಯಾಲಯದ ಆಡಳಿತವು ಈ ರಜೆಗೆ ಕೆಲವು ಷರತ್ತುಗಳನ್ನು ಸಹ ವಿಧಿಸಿದೆ.

Menstrual leave: ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ  ಘೋಷಿಸಿದ ಈ ವಿಶ್ವವಿದ್ಯಾನಿಲಯ
ವಿದ್ಯಾರ್ಥಿನಿಯರಿಗೆ ಮುಟ್ಟಿನ ರಜೆ
ಅಕ್ಷತಾ ವರ್ಕಾಡಿ
|

Updated on: Apr 12, 2024 | 5:05 PM

Share

ಚಂಡೀಗಢ: ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಹೆರಿಗೆ ಮತ್ತು ಋತುಚಕ್ರ ಅವಧಿಯ ರಜೆಯನ್ನು ಕೇರಳ ಸರ್ಕಾರ ಕಳೆದ ವರ್ಷ ಘೋಷಿಸಿತ್ತು. ಇದೀಗಾ ಚಂಡೀಗಢದ ಪಂಜಾಬ್ ವಿಶ್ವವಿದ್ಯಾನಿಲಯವು ವಿದ್ಯಾರ್ಥಿನಿಯರಿಗೆ ಋತುಚಕ್ರದ ಸಮಯದಲ್ಲಿ ಒಂದು ದಿನದ ರಜೆ ನೀಡಲು ಹೊಸ ನೀತಿಯನ್ನು ಜಾರಿಗೆ ತಂದಿದೆ. ಈ ನೀತಿಯನ್ನು 2024-25ರ ಶೈಕ್ಷಣಿಕ ಅಧಿವೇಶನದ ಮುಂಬರುವ ಸೆಮಿಸ್ಟರ್‌ಗಳಿಂದ ಜಾರಿಗೊಳಿಸಲಾಗುವುದು ಎಂದು ಪಂಜಾಬ್ ವಿಶ್ವವಿದ್ಯಾಲಯದ ಉಪಕುಲಪತಿಗಳು ಮಾಹಿತಿ ನೀಡಿದ್ದಾರೆ.

ರಜೆ ಪಡೆಯಲು ವಿದ್ಯಾರ್ಥಿಗಳು ಇಲಾಖೆ ಕಚೇರಿಯಲ್ಲಿ ನಮೂನೆಯನ್ನು ಭರ್ತಿ ಮಾಡಿ ಅಧ್ಯಕ್ಷರು ಅಥವಾ ನಿರ್ದೇಶಕರಿಂದ ಅನುಮೋದನೆ ಪಡೆಯಬೇಕು. ವಿದ್ಯಾರ್ಥಿಯ ಸ್ವಯಂ ಪ್ರಮಾಣೀಕರಣದ ಆಧಾರದ ಮೇಲೆ ರಜೆಯನ್ನು ನೀಡಲಾಗುವುದು. ಆದರೆ ಮಧ್ಯ-ಸೆಮಿಸ್ಟರ್ ಮತ್ತು ಅಂತಿಮ-ಸೆಮಿಸ್ಟರ್ ಪರೀಕ್ಷೆಗಳು, ಆಂತರಿಕ ಅಥವಾ ಬಾಹ್ಯ ಅಥವಾ ಪ್ರಾಯೋಗಿಕ ಪರೀಕ್ಷೆಗಳು ಸೇರಿದಂತೆ ಯಾವುದೇ ಪರೀಕ್ಷೆಗಳ ಸಮಸ್ಯೆದಲ್ಲಿ ಈ ರಜೆ ನೀಡಲಾಗುವುದಿಲ್ಲ.

ಇದನ್ನೂ ಓದಿ: 7 ಕೆಜಿ ಚಿನ್ನದಿಂದ ತಯಾರಿಸಿದ ರಾಮಾಯಣ ಪುಸ್ತಕ; ಅಯೋಧ್ಯಾ ರಾಮನಿಗೆ ಸಮರ್ಪಿಸಿದ ನಿವೃತ್ತ ಐಎಎಸ್ ಅಧಿಕಾರಿ

ವಿದ್ಯಾರ್ಥಿಗಳು ತಿಂಗಳಿಗೆ ಒಂದು ದಿನದ ರಜೆಗೆ ಮಾತ್ರ ಅರ್ಜಿ ಸಲ್ಲಿಸಬಹುದು ಮತ್ತು ಅದನ್ನು ಎರಡು ಅಥವಾ ಅದಕ್ಕಿಂತ ಹೆಚ್ಚು ದಿನಗಳವರೆಗೆ ತೆಗೆದುಕೊಂಡರೆ ಪರಿಗಣಿಸಲಾಗುವುದಿಲ್ಲ, ಇದಲ್ಲದೇ ಯಾವುದೇ ಪರೀಕ್ಷೆಯ ಸಮಯದಲ್ಲಿ ಈ ರಜೆಯನ್ನು ನೀಡಲಾಗುವುದಿಲ್ಲ ಎಂದು ಉಲ್ಲೇಖಿಸಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಚುನಾವಣಾ ರಾಜಕೀಯದಿಂದ ನಿವೃತ್ತಿ ಹೊಂದುವ ಮಾತಗಳನ್ನು ಆಡಿದ ಸೋಮಣ್ಣ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಮಹಾರಾಷ್ಟ್ರದಲ್ಲಿ ವ್ಯಕ್ತಿ ಮೇಲೆ 7 ಬೀದಿ ನಾಯಿಗಳ ದಾಳಿ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಸ್ಥಳಕ್ಕೆ ಕೆಟ್ಟ ಹೆಸರು ನಾವು ಬಿಡಲ್ಲ: ಎನ್ ಶ್ರೀನಿವಾಸ್, ಶಾಸಕ
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಲಿರುವ ವಕೀಲರು
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ರಾಜಣ್ಣ ಕ್ಯಾಬಿನೆಟ್​ಗೆ ವಾಪಸ್ಸಾದರೆ ನನ್ನ ಸ್ವಾಗತವಿದೆ: ಡಿಕೆ ಸುರೇಶ್
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಸಿದ್ದರಾಮಯ್ಯ ತಮ್ಮಿಂದಾದ ತಪ್ಪಿಗೆ ಬೆಲೆ ತೆರಬೇಕಾಗುತ್ತದೆ: ವಿ ಸೋಮಣ್ಣ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಮುಸುಕುಧಾರಿ​ ಬಂಧನ: ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ಚಿನ್ನಯ್ಯನ ಅಣ್ಣ ತಾನಾಸಿಯ ವಿಚಾರಣೆಯನ್ನೂ ನಡೆಸುತ್ತಿರುವ ಎಸ್ಐಟಿ
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ನನ್ನನ್ನು ಎಸ್​ಐಟಿ ವಿಚಾರಣೆಗೆ ಕರೆದರೆ ಹೋಗುತ್ತೇನೆ: ಗಿರೀಶ್ ಮಟ್ಟಣ್ಣನವರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್
ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ ರಾಸ್ ಟೇಲರ್