AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ದೈತ್ಯಾಕಾರದ ಕಾಳಿಂಗ ಸರ್ಪವನ್ನು ಸಲೀಸಾಗಿ ಕೈಯಲ್ಲೇ ಹಿಡಿದ ಉರಗ ತಜ್ಞ, ಎದೆ ನಡುಕ ಹುಟ್ಟಿಸುವ ದೃಶ್ಯ

ಹಾವುಗಳೆಂದರೆ ಎಲ್ಲರಿಗೂ ಕೂಡ ಭಯವೇ. ಈ ವಿಷಕಾರಿ ಹಾವುಗಳಿಂದ ಕ್ಷಣದಲ್ಲಿಯೇ ಪಾರಾಗಿ ಬದುಕಿ ಉಳಿದ ಘಟನೆಗಳು ವೈರಲ್ ಆಗುತ್ತಲೆ ಇರುತ್ತವೆ. ಆದರೆ, ಯಾವುದೇ ಭಯ ಆತಂಕವಿಲ್ಲದೇ ಹಾವುಗಳನ್ನು ಸಲೀಸಾಗಿ ಹಿಡಿಯುವ ಉರಗ ಪ್ರೇಮಿಗಳಿದ್ದಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು ಖ್ಯಾತ ಉರಗ ತಜ್ಞ ಆಕಾಶ್ ಜಾಧವ್ ಅವರು ದೈತ್ಯಾಕಾರದ ಕಾಳಿಂಗ ಸರ್ಪವನ್ನು ಕೈಯಲ್ಲಿ ಹಿಡಿದಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರ ಎದೆ ಝಲ್ ಎಂದಿದೆ.

Viral Video: ದೈತ್ಯಾಕಾರದ ಕಾಳಿಂಗ ಸರ್ಪವನ್ನು ಸಲೀಸಾಗಿ ಕೈಯಲ್ಲೇ ಹಿಡಿದ ಉರಗ ತಜ್ಞ, ಎದೆ ನಡುಕ  ಹುಟ್ಟಿಸುವ ದೃಶ್ಯ
ಕಾಳಿಂಗ ಸರ್ಪImage Credit source: instagram
ಸಾಯಿನಂದಾ
| Edited By: |

Updated on: Feb 20, 2024 | 7:38 PM

Share

ಉರಗ ಲೋಕದ ರಾಜನಾಗಿರುವ ಈ ಕಾಳಿಂಗ ಸರ್ಪಗಳ ಗತ್ತು, ಗಾಂಭೀರ್ಯಕ್ಕೆ ಬೇರೆ ಯಾವ ಹಾವನ್ನು ಹೋಲಿಕೆ ಮಾಡಲು ಸಾಧ್ಯವಿಲ್ಲ. ಈ ಕಾಳಿಂಗ ಸರ್ಪಗಳು ಆಕಾರ ಹಾಗೂ ಬಣ್ಣದಿಂದಲೇ ಎಲ್ಲರನ್ನು ಬೆಚ್ಚಿ ಬೀಳಿಸುತ್ತವೆ. ಅವುಗಳ ತಂಟೆಗೆ ಹೋಗದೇ ಇದ್ದರೆ ನಿರುಪದ್ರವಿಯಾಗಿ ಉಳಿಯುವ ಈ ವಿಷಕಾರಿ ಹಾವು, ತಂಟೆಗೆ ಯಾರಾದರೂ ಬಂದರೆ ಕಚ್ಚದೆ ಬಿಡುವುದೇ ಇಲ್ಲ. ಮಲೆನಾಡಿನ ಪ್ರದೇಶಗಳಲ್ಲಿ ಈ ದೈತ್ಯಾಕಾರದ ಕಾಳಿಂಗ ಸರ್ಪ ಕಾಣಸಿಗುತ್ತದೆ. ಈ ವಿಷಪೂರಿತ ಕಾಳಿಂಗ ಸರ್ಪವು ಕೆಲವೊಮ್ಮೆ ಬುಸುಗುಟ್ಟಿ ತನ್ನ ಮುಂದೆ ಇರುವ ಶತ್ರುವನ್ನು ಓಡಿಸಲು ಸಾಧ್ಯವಾಗದಿದ್ದಾಗ ಮಾತ್ರ ಕಚ್ಚಿ ಬಿಡುತ್ತದೆ.

ಕೇವಲ ಒಂದೂವರೆ ಚಮಚದಷ್ಟು ವಿಷಯನ್ನು ಶತ್ರುವಿನ ದೇಹದೊಳಕ್ಕೆ ಇಂಜೆಕ್ಟ್ ಮಾಡುತ್ತದೆ. ಈ ಹಾವಿನ ವಿಷವು ಹೆಚ್ಚಿನ ಡೋಸೇಜ್ ನಲ್ಲಿ ಒಳ ಸೇರಿದರೆ ಕೇವಲ ಮೂವತ್ತೇ ನಿಮಿಷದಲ್ಲಿ ವ್ಯಕ್ತಿ ಸಾವನ್ನಪ್ಪುತ್ತಾನೆ. ಹೀಗಾಗಿ ಈ ವಿಷಕಾರಿ ಹಾವನ್ನು ಯಾರು ಕೂಡ ಹಿಡಿಯಲು ಧೈರ್ಯ ಮಾಡುವುದಿಲ್ಲ. ಮನುಷ್ಯನ ಮೇಲೆ ದಾಳಿ ಮಾಡಿದರೆ ನಿಮಿಷಾರ್ಧದಲ್ಲೇ ಉಸಿರು ನಿಲ್ಲುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಉರಗ ಪ್ರೇಮಿ ಆಕಾಶ್ ಜಾಧವ್ ಅವರು ದೈತ್ಯಾಕಾರದ ಕಾಳಿಂಗ ಸರ್ಪವನ್ನು ಕೈಯಲ್ಲಿ ಹಿಡಿದು ನೋಡುಗರಿಗೆ ಎದೆಯಲ್ಲಿ ನಡುಕ ಹುಟ್ಟಿಸಿದ್ದಾರೆ.

ಇದನ್ನೂ ಓದಿ: ಮಡದಿಗೂ ಸಮಾನ ಗೌರವ, ವಧುವಿನ ಪಾದ ಸ್ಪರ್ಶಿಸಿದ ವರ, ನಾಚಿ ನೀರಾದ ವಧು

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಉರಗ ತಜ್ಞರಾದ ಆಕಾಶ್ ಜಾಧವ್ ಅವರು ಎರಡು ಪಟ್ಟು ದೊಡ್ಡದಾಗಿರುವ ಕಾಳಿಂಗ ಸರ್ಪವನ್ನು ಕೈಯಲ್ಲಿ ಹಿಡಿದು ಮೇಲಕ್ಕೆ ಎತ್ತುತ್ತಿರುವುದನ್ನು ಕಾಣಬಹುದು. ಯಾವುದೇ ರೀತಿಯ ಸುರಕ್ಷತಾ ಸಾಧನಗಳಿಲ್ಲದೆ ಸಂಪೂರ್ಣವಾಗಿ ಬರಿಗೈಯಲ್ಲಿ ಹಿಡಿದಿದ್ದಾರೆ.

ಈ ವಿಡಿಯೋವು ಅತೀ ಹೆಚ್ಚು ವೀಕ್ಷಣೆಯನ್ನು ಕಂಡಿದ್ದು, ನೆಟ್ಟಿಗರು ನಾನಾ ರೀತಿಯಲ್ಲಿ ಕಾಮೆಂಟ್ ಮಾಡಿದ್ದಾರೆ. ಪ್ರಾಣದ ಭಯವಿಲ್ಲದೆ ದೈತ್ಯಾಕಾರದ ಕಾಳಿಂಗ ಸರ್ಪದ ಜೊತೆಗೆ ಸರಸ ಆಡುತ್ತಿರುವ ಉರಗ ತಜ್ಞರಾದ ಆಕಾಶ್ ಜಾಧವ್ ರವರ ಧೈರ್ಯವನ್ನು ಮೆಚ್ಚಿಕೊಂಡಿದ್ದಾರೆ. ಇನ್ನು ಕೆಲವರು, ‘ ವಿಷಕಾರಿ ವನ್ಯಜೀವಿಗಳೊಂದಿಗೆ ಈ ರೀತಿಯಾಗಿ ನಡೆದುಕೊಂಡರೆ ತಮ್ಮ ಪ್ರಾಣದ ಜೊತೆಗೆ ಚೆಲ್ಲಾಟ ಆಡಿದ್ದಂತೆ ಆಗುತ್ತದೆ. ದಯವಿಟ್ಟು ಈ ರೀತಿ ಮಾಡಬೇಡಿ’ ಎಂದು ಆತಂಕವನ್ನು ವ್ಯಕ್ತಪಡಿಸುವ ಮೂಲಕ ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?