AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ದೈತ್ಯಗಾತ್ರದ ಕಪ್ಪೆಯನ್ನು ನುಂಗಲು ಹೋದ ಹಾವು, ಮುಂದೇನಾಯ್ತು ನೋಡಿ

ಪ್ರಕೃತಿಯ ಆಹಾರ ಸರಪಳಿಯಲ್ಲಿ ಒಂದು ಜೀವಿ ತನ್ನ ಹೊಟ್ಟೆ ಹಸಿವನ್ನು ನೀಗಿಸಿಕೊಳ್ಳಲು ಇನ್ನೊಂದು ಜೀವಿಯನ್ನು ಅವಲಂಬಿಸಿರುತ್ತವೆ. ಈ ಆಹಾರಸರಪಳಿಯಲ್ಲಿ ಹಾವು ಕಪ್ಪೆಯನ್ನು ನುಂಗಿ ಹೊಟ್ಟೆ ತುಂಬಿಸಿಕೊಂಡು ಬದುಕುತ್ತವೆ. ಆದರೆ ಇದೀಗ ವೈರಲ್ ಆಗಿರುವ ಫೋಟೋದಲ್ಲಿ ದೈತ್ಯಗಾತ್ರದ ಕಪ್ಪೆಯನ್ನು ನುಂಗಲು ಹೋಗಿ ಹಾವೊಂದು ಪಜೀತಿಗೆ ಸಿಲುಕಿಕೊಂಡಿದೆ. ಅಷ್ಟಕ್ಕೂ ಕಪ್ಪೆಯನ್ನು ಬೇಟೆಯಾಡಲು ಹೋದ ಹಾವಿಗೆ ಏನಾಯ್ತು ಗೊತ್ತಾ? ಈ ಕುರಿತಾದ ಕುತೂಹಲಕಾರಿ ಮಾಹಿತಿ ಇಲ್ಲಿದೆ

Viral : ದೈತ್ಯಗಾತ್ರದ ಕಪ್ಪೆಯನ್ನು ನುಂಗಲು ಹೋದ ಹಾವು, ಮುಂದೇನಾಯ್ತು ನೋಡಿ
ದೈತ್ಯ ಕಪ್ಪೆಯನ್ನು ನುಂಗಿದ ಹಾವುImage Credit source: Twitter
ಸಾಯಿನಂದಾ
|

Updated on: Jun 16, 2025 | 12:22 PM

Share

ಈ ಹಾವು (snake) ಗಳನ್ನು ಆಹಾರಕ್ಕಾಗಿ ಸಣ್ಣ ಪುಟ್ಟ ಜೀವಿಗಳನ್ನು ಬೇಟೆಯಾಡುವುದನ್ನು ನೋಡಿರಬಹುದು. ಸಾಮಾನ್ಯವಾಗಿ ಈ ಹಾವುಗಳು ತನ್ನ ಹೊಟ್ಟೆ ಹಸಿವನ್ನು ನೀಗಿಸಿಕೊಳ್ಳಲು ಕೋಳಿ, ಮೊಟ್ಟೆಯನ್ನು ನುಂಗುತ್ತವೆ. ಅದಲ್ಲದೇ ಈ ಹಾವುಗಳು ಕಪ್ಪೆಗಳನ್ನು ಬೇಟೆಯಾಡುವುದು ಸರ್ವೇ ಸಾಮಾನ್ಯ. ಹಾವು ಕಪ್ಪೆಯನ್ನು ನುಂಗಿದರೆ ಅಷ್ಟೇನು ಅಚ್ಚರಿ ಪಡಬೇಕಾದದ್ದು ಏನು ಇಲ್ಲ. ಆದರೆ ಹಾವೊಂದು ಕಪ್ಪೆಯನ್ನು ಬೇಟೆಯಾಡಲು ಹೋಗಿ ಸಾವನ್ನಪ್ಪಿದೆ. ಕಪ್ಪೆ (frog) ಯೂ ಹಾವಿನ ಗಂಟಲಿನಲ್ಲಿ ಸಿಲುಕಿಕೊಂಡಿದ್ದು, ನುಂಗಲು ಆಗದೇ ಉಗುಳಲು ಆಗದೇ ಹಾವಿಗೆ ಉಸಿರುಗಟ್ಟಿದೆ. ಇದಕ್ಕೆ ಸಂಬಂಧ ಪಟ್ಟ ಫೋಟೋವೊಂದು ಸೋಶಿಯಲ್ ಮೀಡಿಯಾ (social media) ದಲ್ಲಿ ವೈರಲ್ ಆಗಿದ್ದು, ಬಳಕೆದಾರರು ಈ ದೃಶ್ಯ ನೋಡಿ ಶಾಕ್ ಆಗಿದ್ದಾರೆ.

@Amazingnature ಹೆಸರಿನ ಎಕ್ಸ್ ಖಾತೆಯಲ್ಲಿ ಶೇರ್ ಮಾಡಲಾದ ಫೋಟೋದಲ್ಲಿ ಹಾವೊಂದು ದೈತ್ಯ ಗಾತ್ರದ ಕಪ್ಪೆಯನ್ನು ನುಂಗುತ್ತಿರುವುದನ್ನು ನೋಡಬಹುದು. ಕಪ್ಪೆಯೂ ದೈತ್ಯ ಗಾತ್ರದಲ್ಲಿದ್ದ ಕಾರಣ ನುಂಗಲು ಸಾಧ್ಯವಾಗಿಲ್ಲ. ಹಾವಿನ ಬಾಯಿಯಲ್ಲಿ ಸಿಲುಕಿಕೊಂಡಿದ್ದು ಹಾವು ಉಸಿರುಗಟ್ಟಿ ಸಾವನ್ನಪ್ಪಿದೆ. ಆದರೆ ಕಪ್ಪೆ ಮಾತ್ರ ಹಾವಿನ ಬಾಯಲ್ಲಿದ್ದರೂ ಜೀವಂತವಾಗಿದ್ದು ಈ ಫೋಟೋ ಮೈ ಜುಮ್ ಎನ್ನುವಂತಿದೆ.

ಇದನ್ನೂ ಓದಿ
Image
ನೀವು ಭಾವನಾತ್ಮಕ ಜೀವಿಗಳೇ, ಈ ಚಿತ್ರ ನೋಡಿ ನಿಮ್ಮ ವ್ಯಕ್ತಿತ್ವ ತಿಳಿಯಿರಿ
Image
ರೈಲಿನ ಮಹಿಳಾ ಕೋಚ್‌ನಲ್ಲಿ ಪ್ಯಾಂಟ್‌ ಜಿಪ್‌ ತೆರೆದು ನಿಂತ ಯುವಕ
Image
ರೀಲ್ಸ್‌ ಮಾಡಲು ಬಂದಾಕೆಗೆ ಜಾಡಿಸಿ ಒದ್ದ ಕುದುರೆ
Image
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ

ಇದನ್ನೂ ಓದಿ :Video: ರೀಲ್ಸ್‌ ಮಾಡಲು ಬಂದಾಕೆಗೆ ಜಾಡಿಸಿ ಒದ್ದ ಕುದುರೆ; ವಿಡಿಯೋ ವೈರಲ್‌

ವೈರಲ್ ಪೋಸ್ಟ್ ಇಲ್ಲಿದೆ

ಈ ಪೋಸ್ಟ್ ವೊಂದು 1.5 ಮಿಲಿಯನ್ ಗೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು ಬಳಕೆದಾರರು ಕಾಮೆಂಟ್ ಗಳನ್ನು ಮಾಡಿದ್ದಾರೆ. ಒಬ್ಬ ಬಳಕೆದಾರರು, ಇದರಿಂದ ನೀವು ಏನು ಪಾಠ ಕಲಿತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಮತ್ತೊಬ್ಬರು, ಕಪ್ಪೆ ದುರ್ಬಲ ಎಂದು ಎಲ್ಲರೂ ಅಂದುಕೊಳ್ಳುತ್ತಾರೆ. ಆದರೆ ಕೆಲವೊಮ್ಮೆ ಹಾವನ್ನೇ ಯಾಮಾರಿಸಿ ಬಿಡುತ್ತವೆ ಎಂದಿದ್ದಾರೆ. ಇನ್ನೊಬ್ಬರು, ನಮ್ಮ ಶಕ್ತಿ ಸಾಮರ್ಥ್ಯ ಎಷ್ಟಿದೆ ಎಂದು ನೋಡಿಕೊಂಡು ಮುಂದಿನ ಕೆಲಸಕ್ಕೆ ಕೈ ಹಾಕಬೇಕು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
VIDEO: ನನ್ನಿಂದಾನೇ ಸೋತ್ವಿ... ಕಣ್ಣೀರಿಟ್ಟ ಮಿಲ್ಲರ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್
2009ರಿಂದ ನನ್ನ ಪ್ರೋತ್ಸಾಹಿಸಿದ್ದಕ್ಕೆ ಧನ್ಯವಾದ ಎಂದ ಜಯರಾಂ ಕಾರ್ತಿಕ್