AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಲ್ಲಿ ಜನರು ಶವಗಳನ್ನು ಸುಡುವುದಿಲ್ಲ, ಕಾಡಿನಲ್ಲಿ ಕೊಳೆಯಲು ಬಿಡ್ತಾರೆ, ಕಾರಣ ವಿಚಿತ್ರ

ಇಂಡೋನೇಷ್ಯಾದ ಬಾಲಿಯಯ ದ್ವೀಪದಲ್ಲಿರುವ ಈ ಗ್ರಾಮದಲ್ಲಿ ಆಚರಣೆಗಳು ತುಂಬಾ ವಿಚಿತ್ರ, ಇಲ್ಲಿ ಯಾರಾದರೂ ಸತ್ತರೆ ಅವರನ್ನು ಸುಡುವುದಾಗಲಿ, ಹೂಳುವುದಾಗಲಿ ಮಾಡುವುದಿಲ್ಲ ಬದಲಾಗಿ ಅವುಗಳನ್ನು ಕಾಡಿನಲ್ಲಿ ಕೊಳೆಯಲು ಬಿಡುತ್ತಾರೆ. ಈ ಆಚರಣೆ ಹಿಂದಿರುವ ನಂಬಿಕೆ ಏನು ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಇಲ್ಲಿ ಜನರು ಶವಗಳನ್ನು ಸುಡುವುದಿಲ್ಲ, ಕಾಡಿನಲ್ಲಿ ಕೊಳೆಯಲು ಬಿಡ್ತಾರೆ, ಕಾರಣ ವಿಚಿತ್ರ
ನಯನಾ ರಾಜೀವ್
|

Updated on: May 10, 2024 | 10:50 AM

Share

ಪ್ರಪಂಚದ ಒಂದೊಂದು ಕಡೆ ಒಂದೊಂದು ರೀತಿಯಾಗಿ ಶವಗಳ ಅಂತ್ಯಸಂಸ್ಕಾರ ನಡೆಯುತ್ತೆ. ಕೆಲವು ಕಡೆ ಶವವನ್ನು ಸುಟ್ಟರೆ ಇನ್ನೂ ಕೆಲವು ಕಡೆ ಹೂಳುತ್ತಾರೆ. ಆದರೆ ವಿಚಿತ್ರ ಸಂಗತಿ ಎಂದರೆ ಇಂಡೋನೇಷ್ಯಾದ ಬಾಲಿ(Bali)ಯಲ್ಲಿ ಶವವನ್ನು ಹೂಳುವುದೂ ಇಲ್ಲ, ಸುಡುವುದೂ ಇಲ್ಲ ಬದಲಾಗಿ ಶವವನ್ನು ಕಾಡಿನಲ್ಲಿಯೇ ಕೊಳೆಯಲು ಬಿಡುತ್ತಾರೆ.

ಇಂಡೋನೇಷ್ಯಾದ ಬಾಲಿ ದ್ವೀಪದಲ್ಲಿ ಟ್ರುನಿಯನ್​ ಎಂಬ ಹೆಸರಿನ ಗ್ರಾಮವಿದೆ. ಇಲ್ಲಿ ವಾಸಿಸುವ ಜನರು ಬಲಿ, ಬಲಿಯಾಗ, ಬಲಿ ಮುಲಾ ಎಂದು ಕರೆಯಲಾಗುತ್ತದೆ. ಇಲ್ಲಿನ ಜನರು ಹೊಸ ಸಂಪ್ರದಾಯಕ್ಕೆ ಕಟ್ಟುಬಿದ್ದಿಲ್ಲ, ತಮ್ಮದೇ ಆದ ನಿಯಮಗಳನ್ನು ಅನುಸರಿಸುತ್ತಾರೆ. ಪಾರ್ಸಿ ಜನಾಂಗವು ತಮ್ಮ ಪ್ರೀತಿಪಾತ್ರರ ಶವವನ್ನು ಪಕ್ಷಿ, ಪ್ರಾಣಿಗಳಿಗೆ ತಿನ್ನಲು ಬಿಡುತ್ತಾರೆ ಎಂಬುದನ್ನು ನೀವು ಕೇಳಿರಬೇಕು.

ಆದರೆ ಇದು ಸಂಪೂರ್ಣ ವಿರುದ್ಧವಾಗಿದ್ದು, ಮೃತದೇಹಗಳನ್ನು ರಣಹದ್ದುಗಳು, ಕಾಗೆಗಳು ತಿನ್ನದಂತೆ ಬಿದಿರಿನ ಪಂಜರಗಳಲ್ಲಿ ಇರಿಸಲಾಗುತ್ತದೆ. ಏಕೆಂದರೆ ಯಾವುದೇ ಜೀವಿ ಈ ಮೃತದೇಹವನ್ನು ತಿಂದರೆ ಸತ್ತವರಿಗೆ ಅವಮಾನವಾಗುತ್ತೆ ಎಂಬುದು ಅವರ ನಂಬಿಕೆ.

ಅಮ್ಯೂಸಿಂಗ್​ ಪ್ಲಾನೆಟ್​ ವರದಿ ಪ್ರಕಾರ, ಮೃತದೇಹದಿಂದ ಮಾಂಸವನ್ನು ತೆಗೆದ ನಂತರ ಈ ಜನರು ತಲೆಬುರುಡೆ ಮತ್ತು ಇತರೆ ಮೂಳೆಗಳನ್ನು ಹೊರತೆಗೆದು ಒಂದು ಕಡೆ ಅಲಂಕರಿಸುತ್ತಾರೆ.

ಮತ್ತಷ್ಟು ಓದಿ: Viral Video: ಬಾಲ್ಯದಲ್ಲಿ ಶಾಲೆಗೆ ಕರೆದುಕೊಂಡು ಹೋಗುತ್ತಿದ್ದ ಆಟೋ ಡ್ರೈವರ್​​ಗೆ ಸರ್ಪ್ರೈಸ್ ಗಿಫ್ಟ್ ಕೊಟ್ಟ ಯುವತಿ

ಆದರೆ ತುಂಬಾ ವರ್ಷದ ಹಳೆಯ ಆಲದಮರವಿದೆ ಇಲ್ಲಿ ದೇಹದ ದುರ್ವಾಸನೆ ಬರುವುದಿಲ್ಲ, ಟ್ರೂನಿಯನ್ ಸ್ಮಶಾನಕ್ಕೆ ಬರುವ ಹಲವು ಮಂದಿ ಅದರ ಬಗ್ಗೆ ತಿಳಿದು ಆಶ್ಚರ್ಯಪಡುತ್ತಾರೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಇಲ್ಲಿ ಸಮಾಧಿ ಮಾಡಲಾಗುವುದಿಲ್ಲ ಟ್ರುನಿಯನ್ ಗ್ರಾಮದ ಬಳಿ ಮೂರು ಸ್ಮಶಾನಗಳಿವೆ,ಇಲ್ಲಿ ನೈಸರ್ಗಿಕವಾಗಿ ಸಾವನ್ನಪ್ಪಿದ್ದವರ ಶವಗಳನ್ನು ಮಾತ್ರ ಇಡಲಾಗಿದೆ. ಅಪಘಾತ ಅಥವಾ ಆತ್ಮಹತ್ಯೆಯಲ್ಲಿ ಮರಣ ಹೊಂದಿದವರನ್ನು ಸಮಾಧಿ ಮಾಡಲು ಅರ್ಹರೆಂದು ಪರಿಗಣಿಸಲಾಗುವುದಿಲ್ಲ. ಅವರನ್ನು ಬೇರೆ ಕಡೆ ಸಮಾಧಿ ಮಾಡಲಾಗುತ್ತದೆ. ಮಕ್ಕಳನ್ನು ಅಲ್ಲಿಗೆ ಕರೆದೊಯ್ಯುವುದಿಲ್ಲ, ವಿವಾಹಿತರ ಶವಗಳನ್ನು ಮಾತ್ರ ಇಲ್ಲಿ ಇರಿಸಲಾಗುತ್ತದೆ.

ಬಾಲಿಯಲ್ಲಿ ಜ್ವಾಲಾಮುಖಿ ಹೆಚ್ಚು ಹಾಗಾಗಿ ಸತ್ತವರ ದೇಹವನ್ನು ಭೂಮಿಗೆ ಕೊಟ್ಟರೆ ದೇವತೆಗಳು ಕೋಪಗೊಳ್ಳುವುದಿಲ್ಲ ಎಂಬುದು ನಂಬಿಕೆ. ಕೆಲವು ಮೃತದೇಹಗಳಿಗೆ ಸ್ಥಳಾವಕಾಶವಿಲ್ಲದಿದ್ದರೆ ಹಲವು ದಿನಗಳ ಕಾಲ ಅವುಗಳನ್ನು ಮನೆಯಲ್ಲಿಯೇ ಇರಿಸಿಕೊಳ್ಳಲಾಗುತ್ತದೆ. ಮೃತ ದೇಹಗಳು ಕೊಳೆಯುವುದನ್ನು ತಡೆಯಲು ಫಾರ್ಮಾಲ್ಡಿಹೈಡ್​ನಲ್ಲಿ ಸುತ್ತಿಡಲಾಗುತ್ತದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ