AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರಿಗೆ ಹಾರಿ ಪ್ರಾಣ ಕಳೆದುಕೊಳ್ಳಲು ಹೊರಟ ಮಹಿಳೆಯನ್ನು ಸಮಯಕ್ಕೆ ಸರಿಯಾಗಿ ರಕ್ಷಿಸಿದ ಪೊಲೀಸರು; ವಿಡಿಯೋ ನೋಡಿ

ಮಹಿಳೆಯು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ ಸೇತುವೆಯ ತುತ್ತ ತುದಿಗೆ ನಿಂತಿರುವ ದೃಶ್ಯ ಪೊಲೀಸರ ಕಣ್ಣಿಗೆ ಬೀಳುತ್ತಿದ್ದಂತೆಯೇ ತಡ ಮಾಡದೇ ಆಕೆಯ ಪ್ರಾಣವನ್ನು ಉಳಿಸಿದ್ದಾರೆ. ಈ ಘಟನೆಯ ವಿಡಿಯೋ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಬಾರೀ ಸುದ್ದಿಯಲ್ಲಿದೆ.

Viral Video: ನೀರಿಗೆ ಹಾರಿ ಪ್ರಾಣ ಕಳೆದುಕೊಳ್ಳಲು ಹೊರಟ ಮಹಿಳೆಯನ್ನು ಸಮಯಕ್ಕೆ ಸರಿಯಾಗಿ ರಕ್ಷಿಸಿದ ಪೊಲೀಸರು; ವಿಡಿಯೋ ನೋಡಿ
ನೀರಿಗೆ ಹಾರಿ ಪ್ರಾಣ ಕಳೆದುಕೊಳ್ಳಲು ಹೊರಟ ಮಹಿಳೆ
shruti hegde
|

Updated on:Jun 01, 2021 | 6:02 PM

Share

ಮಹಿಳೆಯೋರ್ವಳು ಶ್ರೀನಗರದ ಬೂದಶ ಬ್ರಿಡ್ಜ್​ನಲ್ಲಿ ನಿಂತು ನೀರಿಗೆ ಹಾರಿ ಪ್ರಾಣ ಕಳೆದುಕೊಳ್ಳಲು ಸಿದ್ಧಳಾಗಿರುತ್ತಾಳೆ. ಅವಳ ಈ ನಡತೆಯನ್ನು ಜಮ್ಮು ಮತ್ತು ಕಾಶ್ಮೀರ​ ಪೊಲೀಸ್​ ಸಿಬ್ಬಂದಿ ಹಾಗೂ ಕೇಂದ್ರ ಮೀಸಲು ಪೊಲೀಸ್​ ಪಡೆ(ಸಿಆರ್​ಪಿಎಫ್​) ಗಮನಿಸಿದ ತಕ್ಷಣವೇ ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಿಸಿದ್ದಾರೆ. ಇವರ ಸಮಯ ಪ್ರಜ್ಞೆಗೆ ನೆಟ್ಟಿಗರಿಂದ ಶ್ಲಾಘನೆ ವ್ಯಕ್ತವಾಗಿದೆ.

ಈ ಘಟನೆ ಶ್ರೀನಗರದ ಬೂದಶ ಬ್ರಿಡ್ಜ್ ಬಳಿ ನಡೆದಿದೆ. ಮಹಿಳೆಯು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿ ಸೇತುವೆಯ ತುತ್ತ ತುದಿಗೆ ನಿಂತಿರುವ ದೃಶ್ಯ ಪೊಲೀಸರ ಕಣ್ಣಿಗೆ ಬೀಳುತ್ತಿದ್ದಂತೆಯೇ ತಡ ಮಾಡದೇ ಆಕೆಯ ಪ್ರಾಣವನ್ನು ಉಳಿಸಿದ್ದಾರೆ. ಈ ಘಟನೆಯ ವಿಡಿಯೋ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ಬಾರೀ ಸುದ್ದಿಯಲ್ಲಿದೆ.

ಮಹಿಳೆ ಕೌಟುಂಬಿಕ ಸಮಸ್ಯೆಯಿಂದ ಬಳಲುತ್ತಿದ್ದಳು. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ಧರಿಸಿದ ವಿಷಯ ಬೆಳಕಿಗೆ ಬಂದಿದೆ. ಘಟನೆಯ ವಿಡಿಯೋವನ್ನು ಶ್ರೀನಗರ ಪೊಲೀಸರು ಹಂಚಿಕೊಂಡಿದ್ದು ಸಮಯಕ್ಕೆ ಸರಿಯಾಗಿ ಸ್ಥಳಕ್ಕೆ ಆಗಮಿಸಿ ಮಹಿಳೆಯ ಜೀವವನ್ನು ರಕ್ಷಿಸಿದ ಪೊಲೀಸರಿಗೆ ನೆಟ್ಟಿಗರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಅಂದು ನಾನು ನನ್ನ ಕರ್ತವ್ಯದಲ್ಲಿದ್ದೆ. ತತ್​ ಕ್ಷಣ ಮಹಿಳೆ ಸೇತುವೆಯ ಅಂಚಿನಲ್ಲಿ ನಿಂತಿರುವುದು ಕಂಡಿತು. ತಡಮಾಡದೇ ಅವಳನ್ನು ರಕ್ಷಿಸುವತ್ತ ನಮ್ಮ ನಡೆ ಸಾಗಿತು. ನನ್ನ ಸಿಬ್ಬಂದಿ ನನಗೆ ಸಹಾಯ ಮಾಡಿದರು ಎಂದು ಪೊಲೀಸ್​ ಅಧಿಕಾರಿಯೋರ್ವರು ಮಾಹಿತಿ ಹಂಚಿಕೊಂಡಿದ್ದಾರೆ.

ಮಹಿಳೆಯ ಜೀವವನ್ನು ಉಳಿಸುವಲ್ಲಿ ಯಶಸ್ವಿಯಾಗಿರುವುದು ದೊಡ್ಡ ಕೆಲಸ ಎಂದು ನೆಟ್ಟಿಗರೋರ್ವರು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇನ್ನೋರ್ವರು ತಮ್ಮ ಅನಿಸಿಕೆ ಹೇಳಿದ್ದು, ಕೊರೊನಾ ಲಾಕ್​ಡೌನ್​ ಮತ್ತು ಕೊರೊನಾ ಸೋಂಕು ಕೌಟುಂಬಗಳ ಮೇಲೆ ಪರಿಣಾಮ ಬೀರುವುದರಿಂದ ಜನರು ತೀವ್ರ ಒತ್ತಡದಲ್ಲಿದ್ದಾರೆ. ತೀವ್ರ ಆರ್ಥಿಕ ತೊಂದರೆಯೂ ಆಗಿದೆ. ಪ್ರತೀ ಸ್ಥಳೀಯ ಪ್ರದೇಶದ ಕೌನ್ಸೆಲಿಂಗ್​ ಕೇಂದ್ರಗಳನ್ನು ಸಕ್ರಿಯವಾಗಿ ತೆರೆದಿಡುವ ಅವಶ್ಯಕತೆ ಪ್ರಸ್ತುತ ಸಮಯದಲ್ಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 

ಹರಿತ ಆಯುಧದಿಂದ ಹೊಡೆದು ನಾಯಿಯನ್ನು ಕೊಂದ ವಿಡಿಯೋ ವೈರಲ್​; ವ್ಯಕ್ತಿ ಬಂಧನ

ಜೀಪಿನತ್ತ ಪೊಲೀಸರು ಎಳೆದೊಯ್ತಾ ಇದ್ರೂ.. ಚಹಾದ ಕಪ್​ ಬಿಡಲಿಲ್ವಲ್ಲಾ ಈ ಯುವಕರು! ವಿಡಿಯೋ ವೈರಲ್​

Published On - 5:17 pm, Tue, 1 June 21

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು