AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಧಾರಾಕಾರ ಮಳೆಗೆ ಹಳ್ಳಿಗೆ ಬಂದ ಮೊಸಳೆ; ಕಾಲಿನಲ್ಲಿ ಒದ್ದು ಓಡಿಸಿದ ವ್ಯಕ್ತಿ

ವೈರಲ್​​ ಆಗಿರುವ ವಿಡಿಯೋದಲ್ಲಿ ಮೊಸಳೆ ಹಳ್ಳಿಯ ಬೀದಿಬದಿಯಲ್ಲಿ ತೆವಳುತ್ತಿದ್ದು, ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮೊಸಳೆಯನ್ನು ಕಾಲಿನಲ್ಲಿ ಒದ್ದಿದ್ದಾನೆ. ಇದರಿಂದ ಭಯಗೊಂಡ ಮೊಸಳೆ ವೇಗವಾಗಿ ತವಳುತ್ತಾ ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

Video Viral: ಧಾರಾಕಾರ ಮಳೆಗೆ ಹಳ್ಳಿಗೆ ಬಂದ ಮೊಸಳೆ; ಕಾಲಿನಲ್ಲಿ ಒದ್ದು ಓಡಿಸಿದ ವ್ಯಕ್ತಿ
ಧಾರಾಕಾರ ಮಳೆಗೆ ಹಳ್ಳಿಗೆ ಬಂದ ಮೊಸಳೆ
ಅಕ್ಷತಾ ವರ್ಕಾಡಿ
|

Updated on: Aug 07, 2024 | 5:39 PM

Share

ಉತ್ತರ ಪ್ರದೇಶ: ಧಾರಾಕಾರ ಮಳೆಯ ಪರಿಣಾಮ ಹಳ್ಳಿಯೊಳಗೆ ಮೊಸಳೆಯೊಂದು ಬಂದಿದ್ದು, ಒಂದೆಡೆ ಸ್ಥಳೀಯರು ನೋಡಿ ಬೆಚ್ಚಿ ಬಿದ್ದರೆ, ಮತ್ತೊಂದೆಡೆ ವ್ಯಕ್ತಿ ಕಾಲಿನಿಂದ ಒದ್ದು ಹಿಂಸಿಸಿದ್ದಾನೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಈ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ ನಡೆದಿದೆ.

ವರದಿಗಳ ಪ್ರಕಾರ, ಸರೀಸೃಪವು ಬುಧವಾರ ಬೆಳಗ್ಗೆ ನಂಗಲ್ ಸೋತಿ ಗ್ರಾಮದಲ್ಲಿ ಅಡ್ಡಾಡುತ್ತಿದ್ದು, ದಾರಿ ಕಾಣದೆ ಮೂರು ಗಂಟೆಗಳ ಕಾಲ ಹಳ್ಳಿಯ ಬೀದಿಗಳಲ್ಲಿ ತೆವಳುತ್ತಾ ಜನರನ್ನು ಬೆಚ್ಚಿಬೀಳಿಸಿದೆ. ಸದ್ಯ ವೈರಲ್​​ ಆಗಿರುವ ವಿಡಿಯೋದಲ್ಲಿ ಮೊಸಳೆ ಹಳ್ಳಿಯ ಬೀದಿಬದಿಯಲ್ಲಿ ತೆವಳುತ್ತಿದ್ದು, ಮೊಸಳೆಯ ಹಿಂದಿನಿಂದ ಬಂದ ವ್ಯಕ್ತಿಯೊಬ್ಬ ಮೊಸಳೆಯನ್ನು ಕಾಲಿನಲ್ಲಿ ಒದ್ದಿದ್ದಾನೆ. ಇದರಿಂದ ಭಯಗೊಂಡ ಮೊಸಳೆ ವೇಗವಾಗಿ ತವಳುತ್ತಾ ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ರೀಲ್ಸ್‌ ಮಾಡಲು ಹೋದ ಯುವಕ, ಜಲಪಾತದಿಂದ 150 ಅಡಿ ಆಳಕ್ಕೆ ಬಿದ್ದು ಸಾವು

ಮೊಸಳೆಯನ್ನು ಕಂಡ ಗ್ರಾಮಸ್ಥರು ಘಟನೆಯ ಕುರಿತು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಮಾಹಿತಿ ನೀಡಿದ ಸುಮಾರು ಎರಡು ಗಂಟೆಗಳ ನಂತರ ಅರಣ್ಯ ಇಲಾಖೆ ಗ್ರಾಮಕ್ಕೆ ಭೇಟಿ ನೀಡಿ ಮೊಸಳೆಯನ್ನು ಸೆರೆ ಹಿಡಿದಿದ್ದಾರೆ. ಸದ್ಯ ಮೊಸಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!