Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ​​ಕೊಡುವಂತೆ ಕಿರುಕುಳ ನೀಡಿದ ಆರೋಪದಡಿ ಟಿಟಿಇ ಅಮಾನತು

ಟಿಕೆಟ್​​​​ ಚೆಕ್ಕಿಂಗ್​​ ಸಮಯದಲ್ಲಿ ಮಹಿಳಾ ಪ್ರಯಾಣಿಕೆ ಹಾಗೂ ರೈಲ್ವೆ ಟಿಕೆಟ್ ಪರೀಕ್ಷಕ(ಟಿಟಿಇ) ಇಬ್ಬರ ನಡುವೆ ಮಾತಿನ ಚಕಾಮಕಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಟಿಕೆಟ್ ​​ಕೊಡುವಂತೆ ಕಿರುಕುಳ ನೀಡಿದ ಆರೋಪದಡಿ ಟಿಟಿಇ ಅಮಾನತು
Follow us
ಅಕ್ಷತಾ ವರ್ಕಾಡಿ
|

Updated on:Mar 15, 2023 | 7:00 PM

ಬೆಂಗಳೂರು: ಟಿಕೆಟ್​​​​ ಚೆಕ್ಕಿಂಗ್​​ ಸಮಯದಲ್ಲಿ ಮಹಿಳಾ ಪ್ರಯಾಣಿಕೆ ಹಾಗೂ ರೈಲ್ವೆ ಟಿಕೆಟ್ ಪರೀಕ್ಷಕ(ಟಿಟಿಇ) ಇಬ್ಬರ ನಡುವೆ ಮಾತಿನ ಚಕಾಮಕಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಬೆಂಗಳೂರಿನ ಕೆಆರ್ ಪುರಂ ರೈಲು ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕೆ ತನ್ನ ಮೇಲೆ ಟಿಟಿಇ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಅಳುತ್ತಿರುವುದನ್ನು ಕಾಣಬಹುದು. ಜೊತೆಗೆ ಬೇರೆ ಪ್ರಯಾಣಿಕರು ಪೊಲೀಸರಿಗೆ ಕರೆ ಮಾಡಿ ಎಂದು ಆಕೆಯಲ್ಲಿ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಸಾಕಷ್ಟು ಜನರು ಆಕೆಯ ಸಹಾಯಕ್ಕೆ ಬಂದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆ ವಿಡಿಯೋ ಇಲ್ಲಿದೆ ನೋಡಿ.

ಟಿಟಿಇ ಕುಡಿದ ಮತ್ತಿನಲ್ಲಿದ್ದು, ಜೊತೆಗೆ ಟಿಕೆಟ್ ​​ ಕೊಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಆತನನ್ನು ನೈಋತ್ಯ ರೈಲ್ವೆ ಇಲಾಖೆ ಅಮಾನತುಗೊಳಿಸಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಇದನ್ನು ಓದಿ: ಜೈಲಿನಲ್ಲಿ ಮೂರು ಹೊತ್ತು ಊಟ ಸಿಗುತ್ತೇ ಎಂದು ಈತ ಮಾಡಿದ ಕೆಲಸ ಏನು ಗೊತ್ತಾ?

ವಿಡಿಯೋದಲ್ಲಿ ಮಹಿಳೆಗೆ ಜನರು ರೈಲ್ವೆ ಪರೀಕ್ಷಕ ವಿರುದ್ಧ ಬೆಂಬಲಿಸುತ್ತಿರುವುದು ಕಂಡುಬಂದಿದೆ. ಜೊತೆಗೆ ನನ್ನನ್ನು ಯಾಕೆ ಎಳೆಯುತ್ತಿದ್ದೀರಿ, ನನ್ನೊಂದಿಗೆ ನಿಧಾನವಾಗಿ ಮಾತನಾಡಿ. ನಾನು ಟಿಕೆಟ್ ಕಾಯ್ದಿರಿಸಿದ್ದರಿಂದ ನಾನು ಇಲ್ಲಿದ್ದೇನೆ, ಎಂದು ಮಹಿಳೆ ಟಿಟಿಇಗೆ ಹೇಳುತ್ತಾಳೆ. ಟಿಕೆಟ್ ಚೆಕ್ ಮಾಡುವುದು ನನ್ನ ಕೆಲಸ. ಕೆಲ ಹೊತ್ತಿನಿಂದ ಅದನ್ನೇ ಕೇಳುತ್ತಿದ್ದೇನೆ ಎಂದು ಟಿಟಿಇ ಹೇಳುವುದು ವೀಡಿಯೊದಲ್ಲಿ ಕೇಳಿಬರುತ್ತದೆ. ತಾನು ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದಾಗ, ಟಿಟಿಇ ತಾನು ಹೆದರುವುದಿಲ್ಲ ಎಂದು ಹೇಳುತ್ತಾರೆ. ನನಗೂ ಅವಳ ಪರಿಚಯವಿಲ್ಲ ಆದರೆ ಅವಳು ಒಬ್ಬಂಟಿಯಾಗಿ ಪ್ರಯಾಣಿಸುತ್ತಿದ್ದಾಳೆ. ಟಿಟಿಇ ಆಕೆಯೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದಾನೆ ಎಂದು ಸಹ-ಪ್ರಯಾಣಿಕರೊಬ್ಬರು ವೀಡಿಯೊದಲ್ಲಿ ಹೇಳುತ್ತಿರುವುದನ್ನು ಕಾಣಬಹುದು.

ಈ ಸುದ್ದಿಯನ್ನು ಇಂಗ್ಲೀಷ್​​​ನಲ್ಲಿ ಓದಲು ಇಲ್ಲಿ ಕ್ಲಿಕ್​ ಮಾಡಿ: 

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 7:00 pm, Wed, 15 March 23

Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು