AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್ ​​ಕೊಡುವಂತೆ ಕಿರುಕುಳ ನೀಡಿದ ಆರೋಪದಡಿ ಟಿಟಿಇ ಅಮಾನತು

ಟಿಕೆಟ್​​​​ ಚೆಕ್ಕಿಂಗ್​​ ಸಮಯದಲ್ಲಿ ಮಹಿಳಾ ಪ್ರಯಾಣಿಕೆ ಹಾಗೂ ರೈಲ್ವೆ ಟಿಕೆಟ್ ಪರೀಕ್ಷಕ(ಟಿಟಿಇ) ಇಬ್ಬರ ನಡುವೆ ಮಾತಿನ ಚಕಾಮಕಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಟಿಕೆಟ್ ​​ಕೊಡುವಂತೆ ಕಿರುಕುಳ ನೀಡಿದ ಆರೋಪದಡಿ ಟಿಟಿಇ ಅಮಾನತು
ಅಕ್ಷತಾ ವರ್ಕಾಡಿ
|

Updated on:Mar 15, 2023 | 7:00 PM

Share

ಬೆಂಗಳೂರು: ಟಿಕೆಟ್​​​​ ಚೆಕ್ಕಿಂಗ್​​ ಸಮಯದಲ್ಲಿ ಮಹಿಳಾ ಪ್ರಯಾಣಿಕೆ ಹಾಗೂ ರೈಲ್ವೆ ಟಿಕೆಟ್ ಪರೀಕ್ಷಕ(ಟಿಟಿಇ) ಇಬ್ಬರ ನಡುವೆ ಮಾತಿನ ಚಕಾಮಕಿ ನಡೆದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ. ಬೆಂಗಳೂರಿನ ಕೆಆರ್ ಪುರಂ ರೈಲು ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕೆ ತನ್ನ ಮೇಲೆ ಟಿಟಿಇ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಅಳುತ್ತಿರುವುದನ್ನು ಕಾಣಬಹುದು. ಜೊತೆಗೆ ಬೇರೆ ಪ್ರಯಾಣಿಕರು ಪೊಲೀಸರಿಗೆ ಕರೆ ಮಾಡಿ ಎಂದು ಆಕೆಯಲ್ಲಿ ಹೇಳುವುದನ್ನು ವಿಡಿಯೋದಲ್ಲಿ ಕಾಣಬಹುದು. ಇಬ್ಬರ ನಡುವೆ ತೀವ್ರ ವಾಗ್ವಾದ ನಡೆದಿದ್ದು, ಸಾಕಷ್ಟು ಜನರು ಆಕೆಯ ಸಹಾಯಕ್ಕೆ ಬಂದಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಆ ವಿಡಿಯೋ ಇಲ್ಲಿದೆ ನೋಡಿ.

ಟಿಟಿಇ ಕುಡಿದ ಮತ್ತಿನಲ್ಲಿದ್ದು, ಜೊತೆಗೆ ಟಿಕೆಟ್ ​​ ಕೊಡುವಂತೆ ಕಿರುಕುಳ ನೀಡಿದ ಆರೋಪದ ಮೇಲೆ ಆತನನ್ನು ನೈಋತ್ಯ ರೈಲ್ವೆ ಇಲಾಖೆ ಅಮಾನತುಗೊಳಿಸಿದೆ ಎಂದು ಎನ್​​ಡಿಟಿವಿ ವರದಿ ಮಾಡಿದೆ.

ಇದನ್ನು ಓದಿ: ಜೈಲಿನಲ್ಲಿ ಮೂರು ಹೊತ್ತು ಊಟ ಸಿಗುತ್ತೇ ಎಂದು ಈತ ಮಾಡಿದ ಕೆಲಸ ಏನು ಗೊತ್ತಾ?

ವಿಡಿಯೋದಲ್ಲಿ ಮಹಿಳೆಗೆ ಜನರು ರೈಲ್ವೆ ಪರೀಕ್ಷಕ ವಿರುದ್ಧ ಬೆಂಬಲಿಸುತ್ತಿರುವುದು ಕಂಡುಬಂದಿದೆ. ಜೊತೆಗೆ ನನ್ನನ್ನು ಯಾಕೆ ಎಳೆಯುತ್ತಿದ್ದೀರಿ, ನನ್ನೊಂದಿಗೆ ನಿಧಾನವಾಗಿ ಮಾತನಾಡಿ. ನಾನು ಟಿಕೆಟ್ ಕಾಯ್ದಿರಿಸಿದ್ದರಿಂದ ನಾನು ಇಲ್ಲಿದ್ದೇನೆ, ಎಂದು ಮಹಿಳೆ ಟಿಟಿಇಗೆ ಹೇಳುತ್ತಾಳೆ. ಟಿಕೆಟ್ ಚೆಕ್ ಮಾಡುವುದು ನನ್ನ ಕೆಲಸ. ಕೆಲ ಹೊತ್ತಿನಿಂದ ಅದನ್ನೇ ಕೇಳುತ್ತಿದ್ದೇನೆ ಎಂದು ಟಿಟಿಇ ಹೇಳುವುದು ವೀಡಿಯೊದಲ್ಲಿ ಕೇಳಿಬರುತ್ತದೆ. ತಾನು ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದಾಗ, ಟಿಟಿಇ ತಾನು ಹೆದರುವುದಿಲ್ಲ ಎಂದು ಹೇಳುತ್ತಾರೆ. ನನಗೂ ಅವಳ ಪರಿಚಯವಿಲ್ಲ ಆದರೆ ಅವಳು ಒಬ್ಬಂಟಿಯಾಗಿ ಪ್ರಯಾಣಿಸುತ್ತಿದ್ದಾಳೆ. ಟಿಟಿಇ ಆಕೆಯೊಂದಿಗೆ ಕೆಟ್ಟದಾಗಿ ವರ್ತಿಸುತ್ತಿದ್ದಾನೆ ಎಂದು ಸಹ-ಪ್ರಯಾಣಿಕರೊಬ್ಬರು ವೀಡಿಯೊದಲ್ಲಿ ಹೇಳುತ್ತಿರುವುದನ್ನು ಕಾಣಬಹುದು.

ಈ ಸುದ್ದಿಯನ್ನು ಇಂಗ್ಲೀಷ್​​​ನಲ್ಲಿ ಓದಲು ಇಲ್ಲಿ ಕ್ಲಿಕ್​ ಮಾಡಿ: 

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 7:00 pm, Wed, 15 March 23

Follow Us
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ತಮ್ಮ ವಿವಾಹದ ಬಳಿಕ ಮತ್ತೊದು ಮದುವೆಗೆ ಹಾಜರಿ ಹಾಕಿದ ವಿಜಯ್-ರಶ್ಮಿಕಾ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್