AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರು ಕುಡಿಸಿ ಒಂಟೆಯ ಜೀವ ಉಳಿಸಿದ ಚಾಲಕನ ವಿಡಿಯೋ ವೈರಲ್

ನೀರಿಲ್ಲದೆ ನಿತ್ರಾಣಗೊಂಡು ರಸ್ತೆಬದಿ ಕುಳಿತಿದ್ದ ಒಂಟೆಯನ್ನು ಚಾಲಕನೊಬ್ಬ ಗಮನಿಸಿದ್ದಾನೆ. ತಕ್ಷಣವೇ ನೀರುಣಿಸಿ ಅದರ ಜೀವ ಕಾಪಾಡಿದ್ದಾನೆ. ನೆಟ್ಟಿಗರು ಈ ಕರುಣಾಳುವನ್ನು ಪ್ರಶಂಸಿಸುತ್ತಿದ್ದಾರೆ.

Viral Video: ನೀರು ಕುಡಿಸಿ ಒಂಟೆಯ ಜೀವ ಉಳಿಸಿದ ಚಾಲಕನ ವಿಡಿಯೋ ವೈರಲ್
ವೈರಲ್​​ ವೀಡಿಯೊ
ಶ್ರೀದೇವಿ ಕಳಸದ
| Edited By: |

Updated on: Jun 13, 2023 | 4:07 PM

Share

ನೀರಿಲ್ಲದೆ ದೀರ್ಘಸಮಯದವರೆಗೆ ಜೀವಿಸುವ ಅದ್ಭುತ ಸಾಮರ್ಥ್ಯವನ್ನು ಒಂಟೆಗಳು ಹೊಂದಿವೆ. ಆದರೂ ಮರುಭೂಮಿಯ ಶಾಖ ತೀವ್ರತೆಯಿಂದ ಕೂಡಿದಾಗ ಇವುಗಳು ಪ್ರಾಣಾಪಾಯಕ್ಕೀಡಾಗುವ ಸಾಧ್ಯತೆ ಇರುತ್ತದೆ. ಆಗ ಹೀಗೆ ಯಾರಾದರೂ ದಯಾಮಯಿಗಳು ಅವುಗಳನ್ನು ಪೋಷಿಸಿದರೆ ಕೆಲಕ್ಷಣಳಲ್ಲೇ ಚೇತರಿಸಿಕೊಂಡುಬಿಡುತ್ತವೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ.

ಈ ವಿಡಿಯೋ ಅನ್ನು ಐಎಫ್ಎಸ್ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿ ಪ್ರಾಣಿದಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಇದೇ 11 ರಂದು ಹಂಚಿಕೊಂಡ ಈ ವಿಡಿಯೋ ಅನ್ನು 1.5 ಲಕ್ಷಕ್ಕಿಂತಲೂ ಹೆಚ್ಚು ಜನ ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral: ಮರಳಶಿಲ್ಪದ ಧ್ವಂಸ ಕೃತ್ಯದಲ್ಲಿ ತೊಡಗಿದ್ದ ಹದಿಹರೆಯದ ಹುಡುಗಿಯರ ಬಂಧನ

ದೇವರು ಈ ಮನುಷ್ಯನಿಗೆ ಒಳ್ಳೆಯದನ್ನು ಮಾಡಲಿ. ಮರಭೂಮಿಗರಿಗೆ ಇವನ ನಡೆ ಮಾದರಿಯಾಗಲಿ. ನಿಮ್ಮ ಸುತ್ತಮುತ್ತಲೂ ಅನೇಕ ಜೀವಿಗಳು ಹೀಗೆ ನಿರ್ಜಲೀಕರಣದಿಂದ ಬಸವಳಿಯುತ್ತಿರುತ್ತವೆ, ದಯವಿಟ್ಟು ಅವುಗಳನ್ನು ಪೋಷಿಸಿ. ಜೀವಸಂಕುಲವು ಪರಸ್ಪರರ ಸಹಾಯದಿಂದ ಅಭಿವೃದ್ಧಿ ಕಾಣುತ್ತದೆ… ಅಂತೆಲ್ಲ ಅನೇಕರು ಪ್ರತಿಕ್ರಿಯಿಸಿದ್ದಾರೆ.

ಬೇಸಿಗೆಯಲ್ಲಿ ಪ್ರತೀಜೀವಿಗೂ ನೀರು ಬಹಳೇ ಮುಖ್ಯ. ನಿಮ್ಮ ಮನೆಯಂಗಳ, ಮಹಡಿ ಮೇಲೆ ನೀರನ್ನಿಡಿ.

ಮತ್ತಷ್ಟು ವೈರಲ್​ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ