AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ನೀರು ಕುಡಿಸಿ ಒಂಟೆಯ ಜೀವ ಉಳಿಸಿದ ಚಾಲಕನ ವಿಡಿಯೋ ವೈರಲ್

ನೀರಿಲ್ಲದೆ ನಿತ್ರಾಣಗೊಂಡು ರಸ್ತೆಬದಿ ಕುಳಿತಿದ್ದ ಒಂಟೆಯನ್ನು ಚಾಲಕನೊಬ್ಬ ಗಮನಿಸಿದ್ದಾನೆ. ತಕ್ಷಣವೇ ನೀರುಣಿಸಿ ಅದರ ಜೀವ ಕಾಪಾಡಿದ್ದಾನೆ. ನೆಟ್ಟಿಗರು ಈ ಕರುಣಾಳುವನ್ನು ಪ್ರಶಂಸಿಸುತ್ತಿದ್ದಾರೆ.

Viral Video: ನೀರು ಕುಡಿಸಿ ಒಂಟೆಯ ಜೀವ ಉಳಿಸಿದ ಚಾಲಕನ ವಿಡಿಯೋ ವೈರಲ್
ವೈರಲ್​​ ವೀಡಿಯೊ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ| Edited By: |

Updated on: Jun 13, 2023 | 4:07 PM

Share

ನೀರಿಲ್ಲದೆ ದೀರ್ಘಸಮಯದವರೆಗೆ ಜೀವಿಸುವ ಅದ್ಭುತ ಸಾಮರ್ಥ್ಯವನ್ನು ಒಂಟೆಗಳು ಹೊಂದಿವೆ. ಆದರೂ ಮರುಭೂಮಿಯ ಶಾಖ ತೀವ್ರತೆಯಿಂದ ಕೂಡಿದಾಗ ಇವುಗಳು ಪ್ರಾಣಾಪಾಯಕ್ಕೀಡಾಗುವ ಸಾಧ್ಯತೆ ಇರುತ್ತದೆ. ಆಗ ಹೀಗೆ ಯಾರಾದರೂ ದಯಾಮಯಿಗಳು ಅವುಗಳನ್ನು ಪೋಷಿಸಿದರೆ ಕೆಲಕ್ಷಣಳಲ್ಲೇ ಚೇತರಿಸಿಕೊಂಡುಬಿಡುತ್ತವೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ಗಮನಿಸಿ.

ಈ ವಿಡಿಯೋ ಅನ್ನು ಐಎಫ್ಎಸ್ ಅಧಿಕಾರಿ ಸುಸಾಂತ ನಂದಾ ಟ್ವೀಟ್ ಮಾಡಿ ಪ್ರಾಣಿದಯೆಯ ಬಗ್ಗೆ ಬೆಳಕು ಚೆಲ್ಲಿದ್ದಾರೆ. ಇದೇ 11 ರಂದು ಹಂಚಿಕೊಂಡ ಈ ವಿಡಿಯೋ ಅನ್ನು 1.5 ಲಕ್ಷಕ್ಕಿಂತಲೂ ಹೆಚ್ಚು ಜನ ನೋಡಿದ್ದಾರೆ. ಅನೇಕರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral: ಮರಳಶಿಲ್ಪದ ಧ್ವಂಸ ಕೃತ್ಯದಲ್ಲಿ ತೊಡಗಿದ್ದ ಹದಿಹರೆಯದ ಹುಡುಗಿಯರ ಬಂಧನ

ದೇವರು ಈ ಮನುಷ್ಯನಿಗೆ ಒಳ್ಳೆಯದನ್ನು ಮಾಡಲಿ. ಮರಭೂಮಿಗರಿಗೆ ಇವನ ನಡೆ ಮಾದರಿಯಾಗಲಿ. ನಿಮ್ಮ ಸುತ್ತಮುತ್ತಲೂ ಅನೇಕ ಜೀವಿಗಳು ಹೀಗೆ ನಿರ್ಜಲೀಕರಣದಿಂದ ಬಸವಳಿಯುತ್ತಿರುತ್ತವೆ, ದಯವಿಟ್ಟು ಅವುಗಳನ್ನು ಪೋಷಿಸಿ. ಜೀವಸಂಕುಲವು ಪರಸ್ಪರರ ಸಹಾಯದಿಂದ ಅಭಿವೃದ್ಧಿ ಕಾಣುತ್ತದೆ… ಅಂತೆಲ್ಲ ಅನೇಕರು ಪ್ರತಿಕ್ರಿಯಿಸಿದ್ದಾರೆ.

ಬೇಸಿಗೆಯಲ್ಲಿ ಪ್ರತೀಜೀವಿಗೂ ನೀರು ಬಹಳೇ ಮುಖ್ಯ. ನಿಮ್ಮ ಮನೆಯಂಗಳ, ಮಹಡಿ ಮೇಲೆ ನೀರನ್ನಿಡಿ.

ಮತ್ತಷ್ಟು ವೈರಲ್​ ಸುದ್ದಿಗೆ ಇಲ್ಲಿ ಕ್ಲಿಕ್​ ಮಾಡಿ

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ