AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ… ಸಾರ್ವಜನಿಕ ಸ್ಥಳದಲ್ಲಿ ಪ್ರಪೋಸ್ ಮಾಡುವಾಗ ಹೀಗೂ ಆದಿತು!

ಪ್ರೇಮಿಯೊಬ್ಬನು ತನ್ನ ಗೆಳತಿಗೆ ಪ್ರಪೋಸ್ ಮಾಡುವಾಗ ವ್ಯಕ್ತಿಯೊಬ್ಬರು ಅಡ್ಡಿಪಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಎಚ್ಚರ... ಸಾರ್ವಜನಿಕ ಸ್ಥಳದಲ್ಲಿ ಪ್ರಪೋಸ್ ಮಾಡುವಾಗ ಹೀಗೂ ಆದಿತು!
ಪ್ರಪೋಸ್ ಮಾಡುವಾಗ ಪ್ರೇಮಿಗಳಿಗೆ ಅಡ್ಡಿಪಡಿಸಿದ ಸಿಬ್ಬಂದಿ
TV9 Web
| Edited By: Rakesh Nayak Manchi|

Updated on:Jun 06, 2022 | 3:23 PM

Share

ಪ್ರೇಮಿಗಳು ತಮ್ಮ ಪ್ರೀತಿಪಾತ್ರರಿಗೆ ವಿಶೇಷ ಸ್ಥಳದಲ್ಲಿ ವಿಶೇಷವಾಗಿ ಪ್ರಪೋಸ್ ಮಾಡಲು ಬಯಸುತ್ತಾರೆ. ಅದರಂತೆ ಪ್ರೇಮಿಯೋರ್ವ ತನ್ನ ಗೆಳತಿಗೆ ಬೆಸ್ಟ್ ಪ್ಲೇಸ್​ನಲ್ಲಿ ಪ್ರಪೋಸ್ (Propose) ಮಾಡಲು ಮುಂದಾಗಿದ್ದಾನೆ. ಈ ವೇಳೆ ವೇಗವಾಗಿ ಓಡಿಬಂದ ವ್ಯಕ್ತಿಯೊಬ್ಬ  ಉಂಗುರ ತೊಡಿಸಲು ಅಡ್ಡಿಪಡಿಸಿದ್ದಾನೆ. ಇದರ ವಿಡಿಯೋ (Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗುತ್ತಿದೆ.

ಇದನ್ನೂ ಓದಿ: Viral Video: ಮನೆಮನೆಗೆ ಹಾರಿಕೊಂಡು ಹೋದ ನವಿಲಿನ ವಿಡಿಯೋ ಪರಿಸರ ದಿನದಂದು ವೈರಲ್

ವೈರಲ್ ವಿಡಿಯೋ ನೋಡಿದಂತೆ, ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ವೇದಿಕೆಯಂತಿರುವ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಮೊಣಕಾಲಿನಲ್ಲಿ ಕುಳಿತುಕೊಂಡು ತನ್ನ ಗೆಳತಿಗೆ ಉಂಗುರು ಹಾಕಲು ಮುಂದಾಗಿದ್ದಾನೆ. ಈ ವೇಳೆ ಸ್ವಲ್ಪ ದೂರದಲ್ಲೇ ಇದ್ದ ಪಾರ್ಕ್​ ಸಿಬ್ಬಂದಿ ಓಡಿ ಬಂದು ಉಂಗುರವನ್ನು ಕಿತ್ತುಕೊಂಡು ಕೆಳಗೆ ಬಂದಿದ್ದಾರೆ. ಅಲ್ಲದೆ ಅಲ್ಲಿಂದ ಕೆಳಗೆ ಇಳಿಯುವಂತೆ ಪ್ರೇಮಿಗಳಿಗೆ ನಾಜೂಕಾಗಿ ಸೂಚಿಸಿರುವುದು ಬಹಳ ಚೆನ್ನಾಗಿತ್ತು. ಸಿಬ್ಬಂದಿಯ ಈ ನಡೆಯಿಂದ ಬೆರಗಾದ ಪ್ರೇಮಿಗಳು ಅಚ್ಚರಿಯಂತೆ ನೋಡಿಕೊಂಡು ಕೆಳಗೆ ಇಳಿದಿದ್ದಾರೆ. ಈ ವೇಳೆ ಸಿಬ್ಬಂದಿ ಉಂಗುರವನ್ನು ಮರಳಿ ನೀಡಿದ್ದಾರೆ.

ಇದನ್ನೂ ಓದಿ: Trending News: ಅಪರೂಪದ ಮರಿಗೆ ಜನ್ಮ ನೀಡಿದ ಆಮೆ, ಎಲ್ಲಿ ಗೊತ್ತಾ?

ಖುಷಿಯ ಸಂದರ್ಭದಲ್ಲಿ ಯಾರಾದರೂ ಅಡ್ಡಿಪಡಿಸಿದಾಗ ಸಂತೋಷ ಕಿತ್ತುಕೊಂಡಂತ್ತಾಗುತ್ತದೆ. ಅದರಂತೆ ಸಿಬ್ಬಂದಿಯು ಉಂಗುರ ಕಿತ್ತು ಕೆಳಗಿಳಿಯುವಂತೆ ಸೂಚಿಸಿರುವುದು ಪ್ರೇಮಿಗಳ ಪ್ರಪೋಸ್ ಮಾಡುವ ಮೂಡ್​ ಹಾಳು ಮಾಡಿರುವ ಸಾಧ್ಯತೆಯೂ ಇದೆ. ವೈರಲ್ ಕ್ಲಿಪ್ ಅನ್ನು ಮೂಲತಃ ರೆಡ್ಡಿಟರ್ ವಾಸ್ಗೆಟ್ಲಾನ್ ಅವರು ಪೋಸ್ಟ್ ಮಾಡಿದ್ದಾರೆ.

“ಸಿಬ್ಬಂದಿಯು ನನ್ನ ಉತ್ತಮ ಸ್ನೇಹಿತರ ಕ್ಷಣವನ್ನು ನಾಶಮಾಡಿದ್ದಾರೆ. ಅವರು ಮುಂಚಿತವಾಗಿ ಅನುಮತಿ ಕೇಳಿದ್ದರು” ಎಂದು ಬಳಕೆದಾರರು ಪೋಸ್ಟ್‌ನಲ್ಲಿ ಬರೆದಿದ್ದಾರೆ.

ವಿಡಿಯೋ ವೀಕ್ಷಿಸಿ: 

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Mon, 6 June 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ