AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ… ಸಾರ್ವಜನಿಕ ಸ್ಥಳದಲ್ಲಿ ಪ್ರಪೋಸ್ ಮಾಡುವಾಗ ಹೀಗೂ ಆದಿತು!

ಪ್ರೇಮಿಯೊಬ್ಬನು ತನ್ನ ಗೆಳತಿಗೆ ಪ್ರಪೋಸ್ ಮಾಡುವಾಗ ವ್ಯಕ್ತಿಯೊಬ್ಬರು ಅಡ್ಡಿಪಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಎಚ್ಚರ... ಸಾರ್ವಜನಿಕ ಸ್ಥಳದಲ್ಲಿ ಪ್ರಪೋಸ್ ಮಾಡುವಾಗ ಹೀಗೂ ಆದಿತು!
ಪ್ರಪೋಸ್ ಮಾಡುವಾಗ ಪ್ರೇಮಿಗಳಿಗೆ ಅಡ್ಡಿಪಡಿಸಿದ ಸಿಬ್ಬಂದಿ
TV9 Web
| Edited By: |

Updated on:Jun 06, 2022 | 3:23 PM

Share

ಪ್ರೇಮಿಗಳು ತಮ್ಮ ಪ್ರೀತಿಪಾತ್ರರಿಗೆ ವಿಶೇಷ ಸ್ಥಳದಲ್ಲಿ ವಿಶೇಷವಾಗಿ ಪ್ರಪೋಸ್ ಮಾಡಲು ಬಯಸುತ್ತಾರೆ. ಅದರಂತೆ ಪ್ರೇಮಿಯೋರ್ವ ತನ್ನ ಗೆಳತಿಗೆ ಬೆಸ್ಟ್ ಪ್ಲೇಸ್​ನಲ್ಲಿ ಪ್ರಪೋಸ್ (Propose) ಮಾಡಲು ಮುಂದಾಗಿದ್ದಾನೆ. ಈ ವೇಳೆ ವೇಗವಾಗಿ ಓಡಿಬಂದ ವ್ಯಕ್ತಿಯೊಬ್ಬ  ಉಂಗುರ ತೊಡಿಸಲು ಅಡ್ಡಿಪಡಿಸಿದ್ದಾನೆ. ಇದರ ವಿಡಿಯೋ (Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗುತ್ತಿದೆ.

ಇದನ್ನೂ ಓದಿ: Viral Video: ಮನೆಮನೆಗೆ ಹಾರಿಕೊಂಡು ಹೋದ ನವಿಲಿನ ವಿಡಿಯೋ ಪರಿಸರ ದಿನದಂದು ವೈರಲ್

ವೈರಲ್ ವಿಡಿಯೋ ನೋಡಿದಂತೆ, ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ವೇದಿಕೆಯಂತಿರುವ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಮೊಣಕಾಲಿನಲ್ಲಿ ಕುಳಿತುಕೊಂಡು ತನ್ನ ಗೆಳತಿಗೆ ಉಂಗುರು ಹಾಕಲು ಮುಂದಾಗಿದ್ದಾನೆ. ಈ ವೇಳೆ ಸ್ವಲ್ಪ ದೂರದಲ್ಲೇ ಇದ್ದ ಪಾರ್ಕ್​ ಸಿಬ್ಬಂದಿ ಓಡಿ ಬಂದು ಉಂಗುರವನ್ನು ಕಿತ್ತುಕೊಂಡು ಕೆಳಗೆ ಬಂದಿದ್ದಾರೆ. ಅಲ್ಲದೆ ಅಲ್ಲಿಂದ ಕೆಳಗೆ ಇಳಿಯುವಂತೆ ಪ್ರೇಮಿಗಳಿಗೆ ನಾಜೂಕಾಗಿ ಸೂಚಿಸಿರುವುದು ಬಹಳ ಚೆನ್ನಾಗಿತ್ತು. ಸಿಬ್ಬಂದಿಯ ಈ ನಡೆಯಿಂದ ಬೆರಗಾದ ಪ್ರೇಮಿಗಳು ಅಚ್ಚರಿಯಂತೆ ನೋಡಿಕೊಂಡು ಕೆಳಗೆ ಇಳಿದಿದ್ದಾರೆ. ಈ ವೇಳೆ ಸಿಬ್ಬಂದಿ ಉಂಗುರವನ್ನು ಮರಳಿ ನೀಡಿದ್ದಾರೆ.

ಇದನ್ನೂ ಓದಿ: Trending News: ಅಪರೂಪದ ಮರಿಗೆ ಜನ್ಮ ನೀಡಿದ ಆಮೆ, ಎಲ್ಲಿ ಗೊತ್ತಾ?

ಖುಷಿಯ ಸಂದರ್ಭದಲ್ಲಿ ಯಾರಾದರೂ ಅಡ್ಡಿಪಡಿಸಿದಾಗ ಸಂತೋಷ ಕಿತ್ತುಕೊಂಡಂತ್ತಾಗುತ್ತದೆ. ಅದರಂತೆ ಸಿಬ್ಬಂದಿಯು ಉಂಗುರ ಕಿತ್ತು ಕೆಳಗಿಳಿಯುವಂತೆ ಸೂಚಿಸಿರುವುದು ಪ್ರೇಮಿಗಳ ಪ್ರಪೋಸ್ ಮಾಡುವ ಮೂಡ್​ ಹಾಳು ಮಾಡಿರುವ ಸಾಧ್ಯತೆಯೂ ಇದೆ. ವೈರಲ್ ಕ್ಲಿಪ್ ಅನ್ನು ಮೂಲತಃ ರೆಡ್ಡಿಟರ್ ವಾಸ್ಗೆಟ್ಲಾನ್ ಅವರು ಪೋಸ್ಟ್ ಮಾಡಿದ್ದಾರೆ.

“ಸಿಬ್ಬಂದಿಯು ನನ್ನ ಉತ್ತಮ ಸ್ನೇಹಿತರ ಕ್ಷಣವನ್ನು ನಾಶಮಾಡಿದ್ದಾರೆ. ಅವರು ಮುಂಚಿತವಾಗಿ ಅನುಮತಿ ಕೇಳಿದ್ದರು” ಎಂದು ಬಳಕೆದಾರರು ಪೋಸ್ಟ್‌ನಲ್ಲಿ ಬರೆದಿದ್ದಾರೆ.

ವಿಡಿಯೋ ವೀಕ್ಷಿಸಿ: 

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Mon, 6 June 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ