AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಚ್ಚರ… ಸಾರ್ವಜನಿಕ ಸ್ಥಳದಲ್ಲಿ ಪ್ರಪೋಸ್ ಮಾಡುವಾಗ ಹೀಗೂ ಆದಿತು!

ಪ್ರೇಮಿಯೊಬ್ಬನು ತನ್ನ ಗೆಳತಿಗೆ ಪ್ರಪೋಸ್ ಮಾಡುವಾಗ ವ್ಯಕ್ತಿಯೊಬ್ಬರು ಅಡ್ಡಿಪಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಎಚ್ಚರ... ಸಾರ್ವಜನಿಕ ಸ್ಥಳದಲ್ಲಿ ಪ್ರಪೋಸ್ ಮಾಡುವಾಗ ಹೀಗೂ ಆದಿತು!
ಪ್ರಪೋಸ್ ಮಾಡುವಾಗ ಪ್ರೇಮಿಗಳಿಗೆ ಅಡ್ಡಿಪಡಿಸಿದ ಸಿಬ್ಬಂದಿ
TV9 Web
| Edited By: |

Updated on:Jun 06, 2022 | 3:23 PM

Share

ಪ್ರೇಮಿಗಳು ತಮ್ಮ ಪ್ರೀತಿಪಾತ್ರರಿಗೆ ವಿಶೇಷ ಸ್ಥಳದಲ್ಲಿ ವಿಶೇಷವಾಗಿ ಪ್ರಪೋಸ್ ಮಾಡಲು ಬಯಸುತ್ತಾರೆ. ಅದರಂತೆ ಪ್ರೇಮಿಯೋರ್ವ ತನ್ನ ಗೆಳತಿಗೆ ಬೆಸ್ಟ್ ಪ್ಲೇಸ್​ನಲ್ಲಿ ಪ್ರಪೋಸ್ (Propose) ಮಾಡಲು ಮುಂದಾಗಿದ್ದಾನೆ. ಈ ವೇಳೆ ವೇಗವಾಗಿ ಓಡಿಬಂದ ವ್ಯಕ್ತಿಯೊಬ್ಬ  ಉಂಗುರ ತೊಡಿಸಲು ಅಡ್ಡಿಪಡಿಸಿದ್ದಾನೆ. ಇದರ ವಿಡಿಯೋ (Video) ಸಾಮಾಜಿಕ ಜಾಲತಾಣದಲ್ಲಿ ವೈರಲ್ (Viral) ಆಗುತ್ತಿದೆ.

ಇದನ್ನೂ ಓದಿ: Viral Video: ಮನೆಮನೆಗೆ ಹಾರಿಕೊಂಡು ಹೋದ ನವಿಲಿನ ವಿಡಿಯೋ ಪರಿಸರ ದಿನದಂದು ವೈರಲ್

ವೈರಲ್ ವಿಡಿಯೋ ನೋಡಿದಂತೆ, ಅಮ್ಯೂಸ್‌ಮೆಂಟ್ ಪಾರ್ಕ್‌ನಲ್ಲಿ ವೇದಿಕೆಯಂತಿರುವ ಸ್ಥಳದಲ್ಲಿ ವ್ಯಕ್ತಿಯೊಬ್ಬರು ಮೊಣಕಾಲಿನಲ್ಲಿ ಕುಳಿತುಕೊಂಡು ತನ್ನ ಗೆಳತಿಗೆ ಉಂಗುರು ಹಾಕಲು ಮುಂದಾಗಿದ್ದಾನೆ. ಈ ವೇಳೆ ಸ್ವಲ್ಪ ದೂರದಲ್ಲೇ ಇದ್ದ ಪಾರ್ಕ್​ ಸಿಬ್ಬಂದಿ ಓಡಿ ಬಂದು ಉಂಗುರವನ್ನು ಕಿತ್ತುಕೊಂಡು ಕೆಳಗೆ ಬಂದಿದ್ದಾರೆ. ಅಲ್ಲದೆ ಅಲ್ಲಿಂದ ಕೆಳಗೆ ಇಳಿಯುವಂತೆ ಪ್ರೇಮಿಗಳಿಗೆ ನಾಜೂಕಾಗಿ ಸೂಚಿಸಿರುವುದು ಬಹಳ ಚೆನ್ನಾಗಿತ್ತು. ಸಿಬ್ಬಂದಿಯ ಈ ನಡೆಯಿಂದ ಬೆರಗಾದ ಪ್ರೇಮಿಗಳು ಅಚ್ಚರಿಯಂತೆ ನೋಡಿಕೊಂಡು ಕೆಳಗೆ ಇಳಿದಿದ್ದಾರೆ. ಈ ವೇಳೆ ಸಿಬ್ಬಂದಿ ಉಂಗುರವನ್ನು ಮರಳಿ ನೀಡಿದ್ದಾರೆ.

ಇದನ್ನೂ ಓದಿ: Trending News: ಅಪರೂಪದ ಮರಿಗೆ ಜನ್ಮ ನೀಡಿದ ಆಮೆ, ಎಲ್ಲಿ ಗೊತ್ತಾ?

ಖುಷಿಯ ಸಂದರ್ಭದಲ್ಲಿ ಯಾರಾದರೂ ಅಡ್ಡಿಪಡಿಸಿದಾಗ ಸಂತೋಷ ಕಿತ್ತುಕೊಂಡಂತ್ತಾಗುತ್ತದೆ. ಅದರಂತೆ ಸಿಬ್ಬಂದಿಯು ಉಂಗುರ ಕಿತ್ತು ಕೆಳಗಿಳಿಯುವಂತೆ ಸೂಚಿಸಿರುವುದು ಪ್ರೇಮಿಗಳ ಪ್ರಪೋಸ್ ಮಾಡುವ ಮೂಡ್​ ಹಾಳು ಮಾಡಿರುವ ಸಾಧ್ಯತೆಯೂ ಇದೆ. ವೈರಲ್ ಕ್ಲಿಪ್ ಅನ್ನು ಮೂಲತಃ ರೆಡ್ಡಿಟರ್ ವಾಸ್ಗೆಟ್ಲಾನ್ ಅವರು ಪೋಸ್ಟ್ ಮಾಡಿದ್ದಾರೆ.

“ಸಿಬ್ಬಂದಿಯು ನನ್ನ ಉತ್ತಮ ಸ್ನೇಹಿತರ ಕ್ಷಣವನ್ನು ನಾಶಮಾಡಿದ್ದಾರೆ. ಅವರು ಮುಂಚಿತವಾಗಿ ಅನುಮತಿ ಕೇಳಿದ್ದರು” ಎಂದು ಬಳಕೆದಾರರು ಪೋಸ್ಟ್‌ನಲ್ಲಿ ಬರೆದಿದ್ದಾರೆ.

ವಿಡಿಯೋ ವೀಕ್ಷಿಸಿ: 

ಹೆಚ್ಚಿನ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:23 pm, Mon, 6 June 22

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ