Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಗುಂಡಿನ ದಾಳಿ ನಡೆಸಿದ ನಾಲ್ವರು ಶೂಟರ್‌ಗಳನ್ನು ಪೊರಕೆ ಹಿಡಿದು ಓಡಿಸಿದ ಮಹಿಳೆ

ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮನೆಯ ಹೊರಗೆ ನಿಂತಿದ್ದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಸದ್ದಿಗೆ ಮನೆಯೊಳಗಿದ್ದ ಮಹಿಳೆ ಪೊರಕೆಯನ್ನೇ ಆಯುಧವಾಗಿ ಹಿಡಿದುಕೊಂಡು ಬಂದಿದ್ದು, ಮಹಿಳೆಯ ಧೈರ್ಯ ಕಂಡು ಗಾಬರಿಗೊಂಡ ನಾಲ್ವರು ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Video Viral: ಗುಂಡಿನ ದಾಳಿ ನಡೆಸಿದ ನಾಲ್ವರು ಶೂಟರ್‌ಗಳನ್ನು ಪೊರಕೆ ಹಿಡಿದು ಓಡಿಸಿದ ಮಹಿಳೆ
Follow us
ಅಕ್ಷತಾ ವರ್ಕಾಡಿ
| Updated By: ಅಕ್ಷಯ್​ ಪಲ್ಲಮಜಲು​​

Updated on: May 24, 2024 | 1:15 PM

ಭಿವಾನಿ: ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮನೆಯ ಹೊರಗೆ ನಿಂತಿದ್ದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಹರಿಯಾಣದ ಭಿವಾನಿಯಲ್ಲಿ ನಡೆದಿದೆ. ಗುಂಡಿನ ದಾಳಿಯ ಸಮಯದಲ್ಲಿ, ಹೊರಗೆ ನಿಂತಿದ್ದ ವ್ಯಕ್ತಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಮನೆಯ ಹೊರಗಡೆ ಏನೋ ಶಬ್ದವಾಗುತ್ತಿರುವುದನ್ನು ಕಂಡ ಮಹಿಳೆ ಪೊರಕೆಯನ್ನೇ ಆಯುಧವಾಗಿ ಹಿಡಿದುಕೊಂಡು ಬಂದು, ಧೈರ್ಯದಿಂದ ನಾಲ್ವರು ದುಷ್ಕರ್ಮಿಗಳನ್ನು ಅಲ್ಲಿಂದ ಹೆದರಿ ಓಡಿ ಹೋಗುವಂತೆ ಮಾಡಿದ್ದಾಳೆ. ಈ ಫಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಿಸಿಟಿವಿ ದೃಶ್ಯಾವಳಿಗಳು ಸೋಶಿಯಲ್​​​ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ನಿನ್ನೆ(ನವೆಂಬರ್​​ 27) ಬೆಳಗ್ಗೆ 7:30ರ ಸುಮಾರಿಗೆ ಭಿವಾನಿಯ ಡಾಬರ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವಂತೆ, ದಾಳಿಕೋರರು ಹರಿಕಿಶನ್ ಎಂಬಾತನ ಮೇಲೆ ಒಂಬತ್ತು ಭಾರೀ ಗುಂಡು ಹಾರಿಸಿದ್ದು ಕಂಡು ಬಂದಿದೆ. ಸದ್ಯ ಹರಿಕಿಶನ್ಗೆ ಅಲ್ಲಲ್ಲಿ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರವಿ ಈ ಹಿಂದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದು, ಕೆಲವು ದಿನಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ಪೊಲೀಸರಿಂದ ತಿಳಿದುಬಂದಿದೆ.

ಇದನ್ನೂ ಓದಿ: ಭಿಕ್ಷಾಟನೆಯಿಂದಲೇ ತಿಂಗಳಿಗೆ 75 ಸಾವಿರ ರೂ. ಆದಾಯ ಗಳಿಸುವ ಭಾರತದ ಅತ್ಯಂತ ಶ್ರೀಮಂತ ಭಿಕ್ಷುಕ

ವಿಡಿಯೋದಲ್ಲಿ ಹರಿಕಿಶನ್ ತನ್ನ ಮನೆಯ ಬಳಿ ನಿಂತಿರುವುದನ್ನು ಕಾಣಬಹುದು. ಆ ಸಮಯದಲ್ಲೇ ಏಕಾಏಕಿ ಎರಡು ಬೈಕ್‌ಗಳು ಬಂದಿದ್ದು, ಬೈಕಿನಲ್ಲಿ ಬಂದ ನಾಲ್ವರು ಏಕಾಏಕಿ ಹರಿಕಿಶನ್​ ಮೇಲೆ ಗುಂಡು ಹಾರಿಸುತ್ತಿರುವುದನ್ನು ಕಾಣಬಹುದು. ಅಷ್ಟೊತ್ತಿಗಾಗಲೇ ಮಹಿಳೆಯೊಬ್ಬಳು ಪೊರಕೆ ಹಿಡಿದು ನಾಲ್ವರು ದುಷ್ಕರ್ಮಿಗಳನ್ನು ಅಲ್ಲಿಂದ ಹೆದರಿ ಓಡಿ ಹೋಗುವಂತೆ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮಹಿಳೆಯ ಧೈರ್ಯ ಕಂಡು ಗಾಬರಿಗೊಂಡ ಶೂಟರ್‌ಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಅವರಲ್ಲಿ ಒಬ್ಬರು ಮಹಿಳೆಯ ಮೇಲೆ ಗುಂಡು ಹಾರಿಸಲು ಪ್ರಯತ್ನಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ