Video Viral: ಗುಂಡಿನ ದಾಳಿ ನಡೆಸಿದ ನಾಲ್ವರು ಶೂಟರ್‌ಗಳನ್ನು ಪೊರಕೆ ಹಿಡಿದು ಓಡಿಸಿದ ಮಹಿಳೆ

ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮನೆಯ ಹೊರಗೆ ನಿಂತಿದ್ದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡಿನ ಸದ್ದಿಗೆ ಮನೆಯೊಳಗಿದ್ದ ಮಹಿಳೆ ಪೊರಕೆಯನ್ನೇ ಆಯುಧವಾಗಿ ಹಿಡಿದುಕೊಂಡು ಬಂದಿದ್ದು, ಮಹಿಳೆಯ ಧೈರ್ಯ ಕಂಡು ಗಾಬರಿಗೊಂಡ ನಾಲ್ವರು ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ. ವೈರಲ್​ ವಿಡಿಯೋ ಇಲ್ಲಿದೆ ನೋಡಿ.

Video Viral: ಗುಂಡಿನ ದಾಳಿ ನಡೆಸಿದ ನಾಲ್ವರು ಶೂಟರ್‌ಗಳನ್ನು ಪೊರಕೆ ಹಿಡಿದು ಓಡಿಸಿದ ಮಹಿಳೆ
Edited By:

Updated on: May 24, 2024 | 1:15 PM

ಭಿವಾನಿ: ಎರಡು ಬೈಕ್‌ಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಮನೆಯ ಹೊರಗೆ ನಿಂತಿದ್ದ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಹರಿಯಾಣದ ಭಿವಾನಿಯಲ್ಲಿ ನಡೆದಿದೆ. ಗುಂಡಿನ ದಾಳಿಯ ಸಮಯದಲ್ಲಿ, ಹೊರಗೆ ನಿಂತಿದ್ದ ವ್ಯಕ್ತಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾನೆ. ಮನೆಯ ಹೊರಗಡೆ ಏನೋ ಶಬ್ದವಾಗುತ್ತಿರುವುದನ್ನು ಕಂಡ ಮಹಿಳೆ ಪೊರಕೆಯನ್ನೇ ಆಯುಧವಾಗಿ ಹಿಡಿದುಕೊಂಡು ಬಂದು, ಧೈರ್ಯದಿಂದ ನಾಲ್ವರು ದುಷ್ಕರ್ಮಿಗಳನ್ನು ಅಲ್ಲಿಂದ ಹೆದರಿ ಓಡಿ ಹೋಗುವಂತೆ ಮಾಡಿದ್ದಾಳೆ. ಈ ಫಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ಸಿಸಿಟಿವಿ ದೃಶ್ಯಾವಳಿಗಳು ಸೋಶಿಯಲ್​​​ ಮೀಡಿಯಾಗಳಲ್ಲಿ ಭಾರೀ ವೈರಲ್ ಆಗುತ್ತಿದೆ.

ನಿನ್ನೆ(ನವೆಂಬರ್​​ 27) ಬೆಳಗ್ಗೆ 7:30ರ ಸುಮಾರಿಗೆ ಭಿವಾನಿಯ ಡಾಬರ್ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವಂತೆ, ದಾಳಿಕೋರರು ಹರಿಕಿಶನ್ ಎಂಬಾತನ ಮೇಲೆ ಒಂಬತ್ತು ಭಾರೀ ಗುಂಡು ಹಾರಿಸಿದ್ದು ಕಂಡು ಬಂದಿದೆ. ಸದ್ಯ ಹರಿಕಿಶನ್ಗೆ ಅಲ್ಲಲ್ಲಿ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ರವಿ ಈ ಹಿಂದೆ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದು, ಕೆಲವು ದಿನಗಳ ಹಿಂದೆ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ಪೊಲೀಸರಿಂದ ತಿಳಿದುಬಂದಿದೆ.

ಇದನ್ನೂ ಓದಿ: ಭಿಕ್ಷಾಟನೆಯಿಂದಲೇ ತಿಂಗಳಿಗೆ 75 ಸಾವಿರ ರೂ. ಆದಾಯ ಗಳಿಸುವ ಭಾರತದ ಅತ್ಯಂತ ಶ್ರೀಮಂತ ಭಿಕ್ಷುಕ

ವಿಡಿಯೋದಲ್ಲಿ ಹರಿಕಿಶನ್ ತನ್ನ ಮನೆಯ ಬಳಿ ನಿಂತಿರುವುದನ್ನು ಕಾಣಬಹುದು. ಆ ಸಮಯದಲ್ಲೇ ಏಕಾಏಕಿ ಎರಡು ಬೈಕ್‌ಗಳು ಬಂದಿದ್ದು, ಬೈಕಿನಲ್ಲಿ ಬಂದ ನಾಲ್ವರು ಏಕಾಏಕಿ ಹರಿಕಿಶನ್​ ಮೇಲೆ ಗುಂಡು ಹಾರಿಸುತ್ತಿರುವುದನ್ನು ಕಾಣಬಹುದು. ಅಷ್ಟೊತ್ತಿಗಾಗಲೇ ಮಹಿಳೆಯೊಬ್ಬಳು ಪೊರಕೆ ಹಿಡಿದು ನಾಲ್ವರು ದುಷ್ಕರ್ಮಿಗಳನ್ನು ಅಲ್ಲಿಂದ ಹೆದರಿ ಓಡಿ ಹೋಗುವಂತೆ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಮಹಿಳೆಯ ಧೈರ್ಯ ಕಂಡು ಗಾಬರಿಗೊಂಡ ಶೂಟರ್‌ಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಅವರಲ್ಲಿ ಒಬ್ಬರು ಮಹಿಳೆಯ ಮೇಲೆ ಗುಂಡು ಹಾರಿಸಲು ಪ್ರಯತ್ನಿಸಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us