AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಭಿನ್ನವಾಗಿ ಫೋಟೊ ತೆಗೆಸಿಕೊಳ್ಳಲು ಯುವತಿಯ ಸಾಹಸ, ಕೈ ಬಿಟ್ಟ ಪ್ರಿಯಕರ ಆಕೆಯ ಸ್ಥಿತಿ ಏನಾಯ್ತು ನೋಡಿ

ರಸ್ತೆಗಳ ಮಧ್ಯೆ ರೀಲ್ಸ್​ ಮಾಡುವುದು, ಅಪಾಯಕರ ಜಾಗದಲ್ಲಿ ಫೋಟೊ ತೆಗೆಸಿಕೊಳ್ಳುವುದು ಹೆಚ್ಚಾಗಿಬಿಟ್ಟಿದೆ. ಎಲ್ಲರಿಗಿಂತ ತಾವೇನೋ ಡಿಫರೆಂಟ್ ಎಂದು ತೋರಿಸಲು ಹೋಗಿ ಅಪಾಯಕ್ಕೆ ಸಿಲುಕಿಬಿಡುತ್ತಾರೆ.

Viral Video: ವಿಭಿನ್ನವಾಗಿ ಫೋಟೊ ತೆಗೆಸಿಕೊಳ್ಳಲು ಯುವತಿಯ ಸಾಹಸ, ಕೈ ಬಿಟ್ಟ ಪ್ರಿಯಕರ ಆಕೆಯ ಸ್ಥಿತಿ ಏನಾಯ್ತು  ನೋಡಿ
ವೈರಲ್ ಫೋಟೊImage Credit source: ABP Live
Follow us
ನಯನಾ ರಾಜೀವ್
|

Updated on: Jul 09, 2023 | 2:27 PM

ರಸ್ತೆಗಳ ಮಧ್ಯೆ ರೀಲ್ಸ್​ ಮಾಡುವುದು, ಅಪಾಯಕರ ಜಾಗದಲ್ಲಿ ಫೋಟೊ ತೆಗೆಸಿಕೊಳ್ಳುವುದು ಹೆಚ್ಚಾಗಿಬಿಟ್ಟಿದೆ. ಎಲ್ಲರಿಗಿಂತ ತಾವೇನೋ ಡಿಫರೆಂಟ್ ಎಂದು ತೋರಿಸಲು ಹೋಗಿ ಅಪಾಯಕ್ಕೆ ಸಿಲುಕಿಬಿಡುತ್ತಾರೆ. ವಿಡಿಯೋ ಮಾಡುವ ತವಕದಲ್ಲಿ ತಮಗಾಗುವ ಅಪಾಯದ ಬಗ್ಗೆ ಯೋಚನೆಯನ್ನೇ ಮಾಡುವುದಿಲ್ಲ. ಇನ್‌ಸ್ಟಾಗ್ರಾಮ್, ಫೇಸ್‌ಬುಕ್, ಟ್ವಿಟರ್ ಮುಂತಾದ ಸಾಮಾಜಿಕ ವೇದಿಕೆಗಳಲ್ಲಿ ಅಪಾಯಗಳ ಜೊತೆ ಆಟವಾಡಲು ಇಷ್ಟಪಡುವ ಇಂತಹ ಅನೇಕ ಸಾಹಸಗಳನ್ನು ನೀವು ನೋಡಿರಬೇಕು. ಅಪಾಯಕಾರಿ ಸಾಹಸಗಳನ್ನು ಪ್ರದರ್ಶಿಸುವ ಕ್ರಿಯೆಯಲ್ಲಿ ಅವರು ಸಾಯಬಹುದು ಎನ್ನುವ ಭಯವೂ ಅವರಿಗಿರುವುದಿಲ್ಲ, ಹುಚ್ಚತನ ಮಾಡಲು ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಾರೆ.

ಇದೀಗ ಮತ್ತೊಮ್ಮೆ ಇಂತಹದೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಹಡಿಯ ಕೆಳಗೆ ನೆಟ್​ ಒಂದನ್ನು ಹಾಕಿರುತ್ತಾರೆ, ಆ ನೆಟ್​ ಮೇಲೆ ಮಲಗಿ ಪೋಸ್​ ಕೊಡಲು ಹೋಗಿ 20 ಅಡಿ ಆಳಕ್ಕೆ ಬಿದ್ದಿದ್ದಾಳೆ.

ಆ ಜಾಲರಿಯು ಆ ಯುವತಿಯ ತೂಕವನ್ನು ತಡೆದುಕೊಳ್ಳಲು ಸಾಧ್ಯವೇ ಎಂಬುದನ್ನು ಒಂದು ಬಾರಿಯೂ ಯೋಚನೆ ಮಾಡಿಲ್ಲ. ಆ ಜಾಲರಿ ಅಷ್ಟು ಗಟ್ಟಿಮುಟ್ಟಾಗಿರದ ಕಾರಣ ಆಕೆ ಬೀಳುತ್ತಿದ್ದಂತೆ ಅದು ಹರಿದುಹೋಗಿದೆ. ನಂತರ ಆಕೆ ಕೆಳಗೆ ಬಿದ್ದಿದ್ದಾಳೆ. ಆ ಯುವತಿಗೆ ಮುಂದೇನಾಯಿತು ಎಂಬುದರ ಬಗ್ಗೆ ಮಾಹಿತಿ ಇಲ್ಲ.

ಮತ್ತಷ್ಟು ಓದಿ: Viral Video: ದೆಹಲಿ ಮೆಟ್ರೋದಲ್ಲಿ ಮತ್ತೆ ರೀಲಿಗರ ಹಾವಳಿ; ನಗಬೇಕೋ ಅಳಬೇಕೋ

ಬಿದ್ದ ರೀತಿ ನೋಡಿದರೆ ಸಣ್ಣಪುಟ್ಟ ಗಾಯಗಳಾಗಿರಬಹುದು ಎಂದು ಊಹಿಸಬಹುದು. ಈ ವೀಡಿಯೊವನ್ನು @MoreCrazyClips ಹೆಸರಿನ ಟ್ವಿಟರ್ ಬಳಕೆದಾರರು ಹಂಚಿಕೊಂಡಿದ್ದಾರೆ.

ಆ ವಿಡಿಯೋ ನೋಡಿ ಹಲವು ಮಂದಿ ಹಲವು ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ, ಇಂತಹ ವಿಡಿಯೋ ನೋಡಿಯಾದರೂ ಜನರು ಬುದ್ಧಿ ಕಲಿಯಬೇಕು ಎಂದು ಒಬ್ಬರು ಹೇಳಿದ್ದರೆ, ಅಬ್ಬಾ ಅಂತೂ ಆಕೆ ಬದುಕುಳಿದಳಲ್ಲ ಎಂದು ನಿಟ್ಟುಸಿರುವ ಬಿಟ್ಟಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಮತದಾರರ ಪರಿಷ್ಕೃತ ಪಟ್ಟಿ ನೀಡಲು ತಡವಾಗಿದ್ದಕ್ಕೆ ಶಾಸಕನಿಗೆ ಅಸಮಾಧಾನ
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಕುಕ್ಕೆ ದೇಗುಲ ಸೇರಿ ಸರ್ಕಾರದ 3 ಸಾವಿರ ರೂಮ್​​​ ಆನ್​​ ಲೈನ್​ ಬುಕ್ಕಿಂಗ್
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಬಿಜೆಪಿ ನಿಯೋಗದ ನಾಯಕತ್ವ ವಹಿಸಿದ್ದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಸರ್ಕಾರವನ್ನು ದೂರಿ ಏನು ಪ್ರಯೋಜನ ಎಂದ ಅಶಯ್ ಅಂಬಲಿ ತಂದೆ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಯಾರು ಹೊಣೆ ಅಂತ ಗೊತ್ತಾಗಲು ಇನ್ನೂ 15 ದಿನ ಕಾಯಬೇಕು: ಜಾರಕಿಹೊಳಿ
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಅವನಿಗೆ 25, ಅವಳಿಗೆ 36..OYO ರೂಂಗೆ ಕರೆದೊಯ್ದು ಹತ್ಯೆ: ಅಸಲಿ ಕಾರಣವೇನು?
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಕಳ್ಳನ ಕರಾಮತ್ತು ಸಿಸಿಟಿವಿ ಕೆಮೆರಾದಲ್ಲಿ ಸೆರೆ, ಪೊಲೀಸರಿಗೆ ಅದೇ ಕ್ಲೂ!
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಡಿಸಿಪಿಗಳ ಜತೆ ಚರ್ಚಿಸಿ ಆರ್​ಸಿಬಿಗೆ ಸತ್ಕಾರ ಕೂಟ ಏರ್ಪಡಿಸಲಾಗಿತ್ತು: ಜೋಶಿ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ
ಜನಸಂದಣಿ ಕಂಡು ಕನ್ನಡಿಗರಿಗಾದಂತೆ ಜನಪ್ರತಿನಿಧಿಗಳಿಗೆ ಗಾಬರಿ ಆಗುತ್ತಿಲ್ಲ