AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವಿಭಿನ್ನವಾಗಿ ಫೋಟೊ ತೆಗೆಸಿಕೊಳ್ಳಲು ಯುವತಿಯ ಸಾಹಸ, ಕೈ ಬಿಟ್ಟ ಪ್ರಿಯಕರ ಆಕೆಯ ಸ್ಥಿತಿ ಏನಾಯ್ತು ನೋಡಿ

ರಸ್ತೆಗಳ ಮಧ್ಯೆ ರೀಲ್ಸ್​ ಮಾಡುವುದು, ಅಪಾಯಕರ ಜಾಗದಲ್ಲಿ ಫೋಟೊ ತೆಗೆಸಿಕೊಳ್ಳುವುದು ಹೆಚ್ಚಾಗಿಬಿಟ್ಟಿದೆ. ಎಲ್ಲರಿಗಿಂತ ತಾವೇನೋ ಡಿಫರೆಂಟ್ ಎಂದು ತೋರಿಸಲು ಹೋಗಿ ಅಪಾಯಕ್ಕೆ ಸಿಲುಕಿಬಿಡುತ್ತಾರೆ.

Viral Video: ವಿಭಿನ್ನವಾಗಿ ಫೋಟೊ ತೆಗೆಸಿಕೊಳ್ಳಲು ಯುವತಿಯ ಸಾಹಸ, ಕೈ ಬಿಟ್ಟ ಪ್ರಿಯಕರ ಆಕೆಯ ಸ್ಥಿತಿ ಏನಾಯ್ತು  ನೋಡಿ
ವೈರಲ್ ಫೋಟೊImage Credit source: ABP Live
ನಯನಾ ರಾಜೀವ್
|

Updated on: Jul 09, 2023 | 2:27 PM

Share

ರಸ್ತೆಗಳ ಮಧ್ಯೆ ರೀಲ್ಸ್​ ಮಾಡುವುದು, ಅಪಾಯಕರ ಜಾಗದಲ್ಲಿ ಫೋಟೊ ತೆಗೆಸಿಕೊಳ್ಳುವುದು ಹೆಚ್ಚಾಗಿಬಿಟ್ಟಿದೆ. ಎಲ್ಲರಿಗಿಂತ ತಾವೇನೋ ಡಿಫರೆಂಟ್ ಎಂದು ತೋರಿಸಲು ಹೋಗಿ ಅಪಾಯಕ್ಕೆ ಸಿಲುಕಿಬಿಡುತ್ತಾರೆ. ವಿಡಿಯೋ ಮಾಡುವ ತವಕದಲ್ಲಿ ತಮಗಾಗುವ ಅಪಾಯದ ಬಗ್ಗೆ ಯೋಚನೆಯನ್ನೇ ಮಾಡುವುದಿಲ್ಲ. ಇನ್‌ಸ್ಟಾಗ್ರಾಮ್, ಫೇಸ್‌ಬುಕ್, ಟ್ವಿಟರ್ ಮುಂತಾದ ಸಾಮಾಜಿಕ ವೇದಿಕೆಗಳಲ್ಲಿ ಅಪಾಯಗಳ ಜೊತೆ ಆಟವಾಡಲು ಇಷ್ಟಪಡುವ ಇಂತಹ ಅನೇಕ ಸಾಹಸಗಳನ್ನು ನೀವು ನೋಡಿರಬೇಕು. ಅಪಾಯಕಾರಿ ಸಾಹಸಗಳನ್ನು ಪ್ರದರ್ಶಿಸುವ ಕ್ರಿಯೆಯಲ್ಲಿ ಅವರು ಸಾಯಬಹುದು ಎನ್ನುವ ಭಯವೂ ಅವರಿಗಿರುವುದಿಲ್ಲ, ಹುಚ್ಚತನ ಮಾಡಲು ಹೋಗಿ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಾರೆ.

ಇದೀಗ ಮತ್ತೊಮ್ಮೆ ಇಂತಹದೊಂದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಮಹಡಿಯ ಕೆಳಗೆ ನೆಟ್​ ಒಂದನ್ನು ಹಾಕಿರುತ್ತಾರೆ, ಆ ನೆಟ್​ ಮೇಲೆ ಮಲಗಿ ಪೋಸ್​ ಕೊಡಲು ಹೋಗಿ 20 ಅಡಿ ಆಳಕ್ಕೆ ಬಿದ್ದಿದ್ದಾಳೆ.

ಆ ಜಾಲರಿಯು ಆ ಯುವತಿಯ ತೂಕವನ್ನು ತಡೆದುಕೊಳ್ಳಲು ಸಾಧ್ಯವೇ ಎಂಬುದನ್ನು ಒಂದು ಬಾರಿಯೂ ಯೋಚನೆ ಮಾಡಿಲ್ಲ. ಆ ಜಾಲರಿ ಅಷ್ಟು ಗಟ್ಟಿಮುಟ್ಟಾಗಿರದ ಕಾರಣ ಆಕೆ ಬೀಳುತ್ತಿದ್ದಂತೆ ಅದು ಹರಿದುಹೋಗಿದೆ. ನಂತರ ಆಕೆ ಕೆಳಗೆ ಬಿದ್ದಿದ್ದಾಳೆ. ಆ ಯುವತಿಗೆ ಮುಂದೇನಾಯಿತು ಎಂಬುದರ ಬಗ್ಗೆ ಮಾಹಿತಿ ಇಲ್ಲ.

ಮತ್ತಷ್ಟು ಓದಿ: Viral Video: ದೆಹಲಿ ಮೆಟ್ರೋದಲ್ಲಿ ಮತ್ತೆ ರೀಲಿಗರ ಹಾವಳಿ; ನಗಬೇಕೋ ಅಳಬೇಕೋ

ಬಿದ್ದ ರೀತಿ ನೋಡಿದರೆ ಸಣ್ಣಪುಟ್ಟ ಗಾಯಗಳಾಗಿರಬಹುದು ಎಂದು ಊಹಿಸಬಹುದು. ಈ ವೀಡಿಯೊವನ್ನು @MoreCrazyClips ಹೆಸರಿನ ಟ್ವಿಟರ್ ಬಳಕೆದಾರರು ಹಂಚಿಕೊಂಡಿದ್ದಾರೆ.

ಆ ವಿಡಿಯೋ ನೋಡಿ ಹಲವು ಮಂದಿ ಹಲವು ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ, ಇಂತಹ ವಿಡಿಯೋ ನೋಡಿಯಾದರೂ ಜನರು ಬುದ್ಧಿ ಕಲಿಯಬೇಕು ಎಂದು ಒಬ್ಬರು ಹೇಳಿದ್ದರೆ, ಅಬ್ಬಾ ಅಂತೂ ಆಕೆ ಬದುಕುಳಿದಳಲ್ಲ ಎಂದು ನಿಟ್ಟುಸಿರುವ ಬಿಟ್ಟಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ