AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿನ್ಸನ್ಸ್​ಗೆ ಒಳಗಾದ ವಯೋವೃದ್ಧರಿಗೆ ದಿನಪತ್ರಿಕೆ ಓದಲು ಸಹಾಯ ಮಾಡಿದ ಅಪರಿಚಿತ ಮಹಿಳೆಯ ವಿಡಿಯೋ ವೈರಲ್

Viral Video : ಸಹಾಯ ಎಷ್ಟೇ ಚಿಕ್ಕದಾಗಿದ್ದರೂ ಆ ಕ್ಷಣಕ್ಕೆ ಅದು ದೊಡ್ಡದೇ. ಲಂಡನ್​ನ ರೈಲಿನಲ್ಲಿ ಈ ವೃದ್ಧರು ಪ್ರಯಾಣಿಸುತ್ತಿದ್ಧಾಗ ಈ ಅಪರಿಚಿತ ಮಹಿಳೆ ಅವರಿಗೆ ಸಹಾಯ ಮಾಡಿದ್ದು ಹೀಗೆ.

ಪಾರ್ಕಿನ್ಸನ್ಸ್​ಗೆ ಒಳಗಾದ ವಯೋವೃದ್ಧರಿಗೆ ದಿನಪತ್ರಿಕೆ ಓದಲು ಸಹಾಯ ಮಾಡಿದ ಅಪರಿಚಿತ ಮಹಿಳೆಯ ವಿಡಿಯೋ ವೈರಲ್
ಪಾರ್ಕಿನ್ಸನ್ಸ್​ನಿಂದ ಬಳಲುತ್ತಿರುವ ವೃದ್ಧರಿಗೆ ಪತ್ರಿಕೆ ಓದಲು ಸಹಾಯ ಮಾಡಿದ ಮಹಿಳೆ
TV9 Web
| Edited By: ಶ್ರೀದೇವಿ ಕಳಸದ|

Updated on:Jan 06, 2023 | 10:24 AM

Share

Viral Vide0: ಬಸ್ಸು, ರೈಲಿನಲ್ಲಿ ಪ್ರಯಾಣಿಸುವಾಗ ನಮಗೆ ಸೀಟ್​ ಸಿಕ್ಕರೆ ಸಾಕು ಎಂದು ಸಿಕ್ಕಲ್ಲಿ ಕುಳಿತುಕೊಳ್ಳುವವರೇ ಅಲ್ಲ. ಆದರೆ ಕೆಲವರು ಮಾತ್ರ ಅಕ್ಕಪಕ್ಕದವರನ್ನು ದಯೆ, ಕರುಣೆಯಿಂದ ಗಮನಿಸುತ್ತಾರೆ. ಇದೀಗ ವೈರಲ್ ಆಗಿರುವ ಈ ವಿಡಿಯೋ ನೋಡಿ. ಅಪರಿಚಿತ ಮಹಿಳೆಯೊಬ್ಬರು ಪಾರ್ಕಿನ್​ಸನ್​ನಿಂದ ಬಳಲುತ್ತಿರುವ ವಯೋವೃದ್ಧರಿಗೆ ದಿನಪತ್ರಿಕೆ ಓದಲು ಸಹಾಯ ಮಾಡಿದ್ದಾರೆ.

ಪಾರ್ಕಿನ್​ಸನ್​ಗೆ ಒಳಗಾದವರಿಗೆ ಕೈ ಕಾಲುಗಳು ಸ್ವಾಧೀನದಲ್ಲಿರುವುದಿಲ್ಲ. ನಿರಂತರವಾಗಿ ಅಲ್ಲಾಡುತ್ತಲೇ ಇರುತ್ತವೆ. ಹೀಗಿರುವಾಗ ನಿತ್ಯ ಕೆಲಸಗಳನ್ನು ಮಾಡಿಕೊಳ್ಳಲೂ ಅವರಿಗೆ ತೊಂದರೆಯಾಗುತ್ತಿರುತ್ತದೆ. ಆಗ ಯಾರಾದರೂ ಅವರಿಗೆ ಸಹಾಯ ಮಾಡಬೇಕಾಗುತ್ತದೆ. ಮನೆಯಲ್ಲಾದರೆ ಒಬ್ಬರಿಲ್ಲಾ ಒಬ್ಬರು ಇರುತ್ತಾರೆ. ಆದರೆ ಪ್ರಯಾಣದಲ್ಲಿ?

ಇದೀಗ ವೈರಲ್ ಆಗಿರುವ ಈ ವಿಡಿಯೋದಲ್ಲಿ ಈ ವೃದ್ಧರು ದಿನಪತ್ರಿಕೆ ಓದಲು ಕಷ್ಟಪಡುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ಮಹಿಳೆಯೊಬ್ಬರು ಪತ್ರಿಕೆಯನ್ನು ಹಿಡಿದು, ವೃದ್ಧರಿಗೆ ಓದಲು ಸಹಾಯ ಮಾಡಿದ್ದಾರೆ. ಈ ವಿಡಿಯೋ ಅನ್ನು ಲಂಡನ್​ನಲ್ಲಿ ಚಿತ್ರೀಕರಿಸಲಾಗಿದೆ.

ಇದನ್ನೂ ನೋಡಿ : ದಂತಶಕ್ತಿ; 15,730 ಕಿ.ಗ್ರಾಂ ಟ್ರಕ್​ ಅನ್ನು ಹಲ್ಲುಗಳಿಂದ ಎಳೆದು ಗಿನ್ನೀಸ್​ ವಿಶ್ವ ದಾಖಲೆ ಮಾಡಿದ ಈಜಿಪ್ತಿನ ಸಾಹಸಿಯ ವಿಡಿಯೋ ವೈರಲ್

ಇದನ್ನು ನೋಡಿದ ನೆಟ್ಟಿಗರು ಭಾವುಕರಾಗಿದ್ದಾರೆ. ದಯೆಯಿಂದ ಮಾಡಿದ ಯಾವ ಕೆಲಸ, ಸಹಾಯವೂ ಎಂದಿಗೂ ವ್ಯರ್ಥವಾಗುವುದಿಲ್ಲ ಎನ್ನುತ್ತಿದ್ದಾರೆ. ಈತನಕ 75,000 ಜನರು ಈ ವಿಡಿಯೋ ನೋಡಿದ್ದಾರೆ. ನಾನು ಇಂಥ ಪೋಸ್ಟ್​ಗಳನ್ನು ದಿನವೂ ನೋಡಲು ಇಷ್ಟಪಡುತ್ತೇನೆ ಎಂದಿದ್ದಾರೆ ಒಬ್ಬರು. ನನ್ನ ತಂದೆಗೂ ಪಾರ್ಕಿನ್​ಸನ್​ ಕಾಯಿಲೆ ಇತ್ತು. ಇದು ನನ್ನನ್ನು ಆಳವಾಗಿ ತಟ್ಟುತ್ತಿದೆ ಎಂದಿದ್ದಾರೆ ಮತ್ತೊಬ್ಬರು. ಸಹಾಯಕ್ಕೆ ಸಣ್ಣದು ದೊಡ್ಡದು ಎನ್ನುವುದಿಲ್ಲ. ಪ್ರತಿ ಸಹಾಯವೂ ದೊಡ್ಡದೇ ಎಂದಿದ್ದಾರೆ ಮಗದೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

Published On - 10:21 am, Fri, 6 January 23

Follow Us
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ