AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡು ರಸ್ತೆಯಲ್ಲಿ ಗನ್​​ ಹಿಡಿದು ರೀಲ್ಸ್​​​ ಮಾಡಿದ ಯುವತಿ, ಪೊಲೀಸರ ಅತಿಥಿಯಾಗುವುದು ಖಂಡಿತ

ಯುವತಿಯೊಬ್ಬಳು ನಡು ರಸ್ತೆಯಲ್ಲಿ ಗನ್​​​ ಹಿಡಿದು ರೀಲ್ಸ್​​​ ಮಾಡಿರುವ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಇದೀಗ ಈ ವಿಡಿಯೋಗೆ ಸಾರ್ವಜನಿಕ ವಲಯದಿಂದ ಭಾರೀ ಅಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರ ತೆಗೆದುಕೊಂಡ ಕ್ರಮಗಳೇನು ಎಂದು ಪ್ರಶ್ನೆ ಮಾಡಿದ್ದಾರೆ. ಈ ವಿಡಿಯೋವನ್ನು ಪೊಲೀಸರಿಗೂ ಕೂಡ ಟ್ಯಾಗ್​​ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ಕೂಡ ಪ್ರತಿಕ್ರಿಯೆ ನೀಡಿದ್ದು, ಪೊಲೀಸರು ನೀಡಿದ ಉತ್ತರ ಏನು? ಇಲ್ಲಿದೆ ಓದಿ.

ನಡು ರಸ್ತೆಯಲ್ಲಿ ಗನ್​​ ಹಿಡಿದು ರೀಲ್ಸ್​​​ ಮಾಡಿದ ಯುವತಿ, ಪೊಲೀಸರ ಅತಿಥಿಯಾಗುವುದು ಖಂಡಿತ
ಅಕ್ಷಯ್​ ಪಲ್ಲಮಜಲು​​
|

Updated on: May 11, 2024 | 4:39 PM

Share

ಈ ರೀಲ್ಸ್​​​ ಹುಚ್ಚು ಯಾವೆಲ್ಲ ಅನಾಹುತವನ್ನು ಉಂಟು ಮಾಡುತ್ತದೆ ಎಂದರೆ, ಅದು ಜೀವಕ್ಕೂ ಅಪಾಯ ಹಾಗೂ ಸಮಾಜಕ್ಕೂ ಅಪಾಯ. ಯುವಕ – ಯುವತಿಯರು ಮಾಡುವ ಹುಚ್ಚಾಟಕ್ಕೆ ಸಾರ್ವಜನಿಕರು ಬೆಲೆ ತೆರಬೇಕು. ಉತ್ತರಪ್ರದೇಶದ ಲಕ್ನೋದಲ್ಲಿ ಯುವತಿಯೊಬ್ಬಳು ಕೈಯಲ್ಲಿ ಗನ್ ಹಿಡಿದು ನಡುರಸ್ತೆಯಲ್ಲಿ ರೀಲ್ ಮಾಡಿದ್ದಾಳೆ, ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ವಕೀಲ ಕಲ್ಯಾಣಜಿ ಚೌಧರಿ ಅವರು ಈ ವಿಡಿಯೋವನ್ನು ತಮ್ಮ ಎಕ್ಸ್​​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈಕೆಯನ್ನು ಇನ್‌ಸ್ಟಾಗ್ರಾಮ್ ಸ್ಟಾರ್​​ ಸಿಮ್ರಾನ್ ಯಾದವ್ ಎಂದು ಗುರುತಿಸಲಾಗಿದೆ.

ಈ ವಿಡಿಯೋದಲ್ಲಿ ​​ ಸಿಮ್ರಾನ್ ಯಾದವ್ ಹೆದ್ದಾರಿಯಲ್ಲಿ ಗನ್​​​ ಹಿಡಿದುಕೊಂಡು ರೀಲ್ಸ್​​​ ಮಾಡಿದ್ದಾರೆ. ಇದೀಗ ಯುವತಿಯ ಈ ವರ್ತನೆಯೂ ಕಾನೂನು ಮತ್ತು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿದೆ. ಜತೆಗೆ ಸಾರ್ವಜನಿಕ ಪ್ರದೇಶದಲ್ಲಿ ಇಂತಹ ವಿಡಿಯೋ ಮಾಡಿರುವುದು ಸಮಾಜಘಾತಕ ವರ್ತನೆ ಎಂದು ಹೇಳಲಾಗಿದೆ. ಇನ್ನು ಈ ವಿಡಿಯೋದ ಬಗ್ಗೆ ಪೊಲೀಸರು ಕೂಡ ಮೌನ ವಹಿಸಿರುವುದು ಸಾರ್ವಜನಿಕರ ಅಕ್ರೋಶಕ್ಕೆ ಕಾರಣವಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಒಂದು ವಾರಗಳ ಹಿಂದೆ ಈ ವಿಡಿಯೋಗೆ 1,300 ಕ್ಕೂ ಹೆಚ್ಚು ವೀಕ್ಷಣೆ ಹಾಗೂ ಅನೇಕ ಕಮೆಂಟ್​​​ ಕೂಡ ಬಂದಿದೆ. ಇನ್ನು ಎಕ್ಸ್​​ ಬಳಕೆದಾರರೂ ಈ ವಿಡಿಯೋಗೆ ವಿರೋಧ ವ್ಯಕ್ತಪಡಿಸಿದ್ದು, ಇದಕ್ಕೆ ಕಮೆಂಟ್​​ ಮಾಡುವಾಗ ಉತ್ತರಪ್ರದೇಶದ ಪೊಲೀಸರಿಗೂ ಟ್ಯಾಗ್​​​ ಮಾಡಿದ್ದಾರೆ. ” ಉತ್ತರಪ್ರದೇಶದ ಪೊಲೀಸರೇ ಈ ವಿಡಿಯೋವನ್ನು ಒಮ್ಮೆ ನೋಡಿ” ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಉತ್ತರಪ್ರದೇಶದ ಪೊಲೀಸರು ಕೂಡ ಪ್ರತಿಕ್ರಿಯೆ ನೀಡಿದ್ದು ಖಂಡಿತ ಇವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಟೋಗೆ ಬಲೂನ್ ಕಟ್ಟಿ ಮಗಳ ಹುಟ್ಟುಹಬ್ಬ ಸಂಭ್ರಮಿಸಿದ ತಂದೆ

ಇನ್ನು ಈ ವಿಡಿಯೋಗೆ ಮತ್ತೊಬ್ಬ ಬಳಕೆದಾರ ಕಮೆಂಟ್​​ ಮಾಡಿದ್ದು, ಪೊಲೀಸರೇ ಈ ಯುವತಿಗೆ ಭಾರೀ ದಂಡವನ್ನು ಹಾಕಿ, ಆ ಹಣದಲ್ಲಿ ಬಡವರಿಗೆ ಅನ್ನ ನೀಡಬಹುದು ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ, ಈ ಖಾತೆಯನ್ನು ಬ್ಲಾಕ್​​ ಮಾಡಿ ಎಂದು ಹೇಳಿದ್ದಾರೆ. ಈ ಹಿಂದೆಯೂ ಕೂಡ ಇಂತಹ ಅನೇಕ ಘಟನೆಗಳು ಉತ್ತರಪ್ರದೇಶದಲ್ಲಿ ನಡೆದಿದೆ ಎಂದು ಅನೇಕ ಕಮೆಂಟ್​​ ಮಾಡಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?