ನಡು ರಸ್ತೆಯಲ್ಲಿ ಗನ್​​ ಹಿಡಿದು ರೀಲ್ಸ್​​​ ಮಾಡಿದ ಯುವತಿ, ಪೊಲೀಸರ ಅತಿಥಿಯಾಗುವುದು ಖಂಡಿತ

ಯುವತಿಯೊಬ್ಬಳು ನಡು ರಸ್ತೆಯಲ್ಲಿ ಗನ್​​​ ಹಿಡಿದು ರೀಲ್ಸ್​​​ ಮಾಡಿರುವ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಇದೀಗ ಈ ವಿಡಿಯೋಗೆ ಸಾರ್ವಜನಿಕ ವಲಯದಿಂದ ಭಾರೀ ಅಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರ ತೆಗೆದುಕೊಂಡ ಕ್ರಮಗಳೇನು ಎಂದು ಪ್ರಶ್ನೆ ಮಾಡಿದ್ದಾರೆ. ಈ ವಿಡಿಯೋವನ್ನು ಪೊಲೀಸರಿಗೂ ಕೂಡ ಟ್ಯಾಗ್​​ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ಕೂಡ ಪ್ರತಿಕ್ರಿಯೆ ನೀಡಿದ್ದು, ಪೊಲೀಸರು ನೀಡಿದ ಉತ್ತರ ಏನು? ಇಲ್ಲಿದೆ ಓದಿ.

ನಡು ರಸ್ತೆಯಲ್ಲಿ ಗನ್​​ ಹಿಡಿದು ರೀಲ್ಸ್​​​ ಮಾಡಿದ ಯುವತಿ, ಪೊಲೀಸರ ಅತಿಥಿಯಾಗುವುದು ಖಂಡಿತ
Follow us
|

Updated on: May 11, 2024 | 4:39 PM

ಈ ರೀಲ್ಸ್​​​ ಹುಚ್ಚು ಯಾವೆಲ್ಲ ಅನಾಹುತವನ್ನು ಉಂಟು ಮಾಡುತ್ತದೆ ಎಂದರೆ, ಅದು ಜೀವಕ್ಕೂ ಅಪಾಯ ಹಾಗೂ ಸಮಾಜಕ್ಕೂ ಅಪಾಯ. ಯುವಕ – ಯುವತಿಯರು ಮಾಡುವ ಹುಚ್ಚಾಟಕ್ಕೆ ಸಾರ್ವಜನಿಕರು ಬೆಲೆ ತೆರಬೇಕು. ಉತ್ತರಪ್ರದೇಶದ ಲಕ್ನೋದಲ್ಲಿ ಯುವತಿಯೊಬ್ಬಳು ಕೈಯಲ್ಲಿ ಗನ್ ಹಿಡಿದು ನಡುರಸ್ತೆಯಲ್ಲಿ ರೀಲ್ ಮಾಡಿದ್ದಾಳೆ, ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ವಕೀಲ ಕಲ್ಯಾಣಜಿ ಚೌಧರಿ ಅವರು ಈ ವಿಡಿಯೋವನ್ನು ತಮ್ಮ ಎಕ್ಸ್​​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈಕೆಯನ್ನು ಇನ್‌ಸ್ಟಾಗ್ರಾಮ್ ಸ್ಟಾರ್​​ ಸಿಮ್ರಾನ್ ಯಾದವ್ ಎಂದು ಗುರುತಿಸಲಾಗಿದೆ.

ಈ ವಿಡಿಯೋದಲ್ಲಿ ​​ ಸಿಮ್ರಾನ್ ಯಾದವ್ ಹೆದ್ದಾರಿಯಲ್ಲಿ ಗನ್​​​ ಹಿಡಿದುಕೊಂಡು ರೀಲ್ಸ್​​​ ಮಾಡಿದ್ದಾರೆ. ಇದೀಗ ಯುವತಿಯ ಈ ವರ್ತನೆಯೂ ಕಾನೂನು ಮತ್ತು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿದೆ. ಜತೆಗೆ ಸಾರ್ವಜನಿಕ ಪ್ರದೇಶದಲ್ಲಿ ಇಂತಹ ವಿಡಿಯೋ ಮಾಡಿರುವುದು ಸಮಾಜಘಾತಕ ವರ್ತನೆ ಎಂದು ಹೇಳಲಾಗಿದೆ. ಇನ್ನು ಈ ವಿಡಿಯೋದ ಬಗ್ಗೆ ಪೊಲೀಸರು ಕೂಡ ಮೌನ ವಹಿಸಿರುವುದು ಸಾರ್ವಜನಿಕರ ಅಕ್ರೋಶಕ್ಕೆ ಕಾರಣವಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಒಂದು ವಾರಗಳ ಹಿಂದೆ ಈ ವಿಡಿಯೋಗೆ 1,300 ಕ್ಕೂ ಹೆಚ್ಚು ವೀಕ್ಷಣೆ ಹಾಗೂ ಅನೇಕ ಕಮೆಂಟ್​​​ ಕೂಡ ಬಂದಿದೆ. ಇನ್ನು ಎಕ್ಸ್​​ ಬಳಕೆದಾರರೂ ಈ ವಿಡಿಯೋಗೆ ವಿರೋಧ ವ್ಯಕ್ತಪಡಿಸಿದ್ದು, ಇದಕ್ಕೆ ಕಮೆಂಟ್​​ ಮಾಡುವಾಗ ಉತ್ತರಪ್ರದೇಶದ ಪೊಲೀಸರಿಗೂ ಟ್ಯಾಗ್​​​ ಮಾಡಿದ್ದಾರೆ. ” ಉತ್ತರಪ್ರದೇಶದ ಪೊಲೀಸರೇ ಈ ವಿಡಿಯೋವನ್ನು ಒಮ್ಮೆ ನೋಡಿ” ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಉತ್ತರಪ್ರದೇಶದ ಪೊಲೀಸರು ಕೂಡ ಪ್ರತಿಕ್ರಿಯೆ ನೀಡಿದ್ದು ಖಂಡಿತ ಇವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಟೋಗೆ ಬಲೂನ್ ಕಟ್ಟಿ ಮಗಳ ಹುಟ್ಟುಹಬ್ಬ ಸಂಭ್ರಮಿಸಿದ ತಂದೆ

ಇನ್ನು ಈ ವಿಡಿಯೋಗೆ ಮತ್ತೊಬ್ಬ ಬಳಕೆದಾರ ಕಮೆಂಟ್​​ ಮಾಡಿದ್ದು, ಪೊಲೀಸರೇ ಈ ಯುವತಿಗೆ ಭಾರೀ ದಂಡವನ್ನು ಹಾಕಿ, ಆ ಹಣದಲ್ಲಿ ಬಡವರಿಗೆ ಅನ್ನ ನೀಡಬಹುದು ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ, ಈ ಖಾತೆಯನ್ನು ಬ್ಲಾಕ್​​ ಮಾಡಿ ಎಂದು ಹೇಳಿದ್ದಾರೆ. ಈ ಹಿಂದೆಯೂ ಕೂಡ ಇಂತಹ ಅನೇಕ ಘಟನೆಗಳು ಉತ್ತರಪ್ರದೇಶದಲ್ಲಿ ನಡೆದಿದೆ ಎಂದು ಅನೇಕ ಕಮೆಂಟ್​​ ಮಾಡಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ರಸ್ತೆಯಲ್ಲಿ ತಳ್ಳುಗಾಡಿ ಇಟ್ಟಿದ್ದಕ್ಕೆ ಗಲಾಟೆ: ವ್ಯಾಪಾರಿ ಮೇಲೆ ಪಿಸಿ ಹಲ್ಲೆ
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ಮೆಟ್ರೋದಲ್ಲಿ ಪರ್ಸ್ ಕದಿಯುವಾಗ ಸಿಕ್ಕಿಬಿದ್ದ ಕಳ್ಳನಿಗೆ ಥಳಿಸಿದ ಪ್ರಯಾಣಿಕರು
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನೀರಲ್ಲಿ ಕಾರು ಕೊಚ್ಚಿಹೋದರೂ ಅದರಲ್ಲಿದ್ದ ನಾಲ್ವರು ಬದುಕುಳಿದಿದ್ದು ಪವಾಡ
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ನಡುರಸ್ತೆಯಲ್ಲೇ ಚೂಪಾದ ಆಯುಧದಿಂದ ಥಳಿಸಿ ಕೊಂದ ಜನರು; ವಿಡಿಯೋ ವೈರಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಪ್ರತಾಪ್ ಕುಡಿತದ ದಾಸನಾಗಿದ್ದ, ಮಕ್ಕಳಿಲ್ಲದ ಕೊರಗು ಕಾಡುತಿತ್ತು: ಪಾಟೀಲ್
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಜು.12ಕ್ಕೆ ದರ್ಶನ್ ನಟನೆಯ ‘ಶಾಸ್ತ್ರಿ’ ಮರು ಬಿಡುಗಡೆ; ಏನಿದು ಪ್ಲ್ಯಾನ್?
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ಉಡುಪಿಯಲ್ಲಿ ಪ್ರವಾಹದ ನೀರಿನಲ್ಲಿ ಸಿಲುಕಿದ್ದ ನಾಯಿಯ ರಕ್ಷಣೆಯ ವಿಡಿಯೋ ವೈರಲ್
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ರಷ್ಯಾಗೆ ಆಗಮಿಸಿದ ಮೋದಿಗೆ ಭಾರತೀಯರಿಂದ ನೃತ್ಯದ ಮೂಲಕ ಅದ್ದೂರಿ ಸ್ವಾಗತ
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ಮಹಾರಾಷ್ಟ್ರ: ಉಕ್ಕಿದ ಹಿರಣ್ಯಕೇಶಿ ನದಿ, ಬೆಳಗಾವಿ ಗಡಿಭಾಗಕ್ಕೆ ಹರಿದ ನೀರು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು
ದರ್ಶನ್​ರನ್ನು ನೋಡಲು ವಕೀಲನ ಜತೆ ಸೆಂಟ್ರಲ್ ಜೈಲಿಗೆ ಬಂದ ನಿರ್ಮಾಪಕ ಕೆ ಮಂಜು