AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಡು ರಸ್ತೆಯಲ್ಲಿ ಗನ್​​ ಹಿಡಿದು ರೀಲ್ಸ್​​​ ಮಾಡಿದ ಯುವತಿ, ಪೊಲೀಸರ ಅತಿಥಿಯಾಗುವುದು ಖಂಡಿತ

ಯುವತಿಯೊಬ್ಬಳು ನಡು ರಸ್ತೆಯಲ್ಲಿ ಗನ್​​​ ಹಿಡಿದು ರೀಲ್ಸ್​​​ ಮಾಡಿರುವ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ಇದೀಗ ಈ ವಿಡಿಯೋಗೆ ಸಾರ್ವಜನಿಕ ವಲಯದಿಂದ ಭಾರೀ ಅಕ್ರೋಶ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರ ತೆಗೆದುಕೊಂಡ ಕ್ರಮಗಳೇನು ಎಂದು ಪ್ರಶ್ನೆ ಮಾಡಿದ್ದಾರೆ. ಈ ವಿಡಿಯೋವನ್ನು ಪೊಲೀಸರಿಗೂ ಕೂಡ ಟ್ಯಾಗ್​​ ಮಾಡಿದ್ದಾರೆ. ಈ ಬಗ್ಗೆ ಪೊಲೀಸರು ಕೂಡ ಪ್ರತಿಕ್ರಿಯೆ ನೀಡಿದ್ದು, ಪೊಲೀಸರು ನೀಡಿದ ಉತ್ತರ ಏನು? ಇಲ್ಲಿದೆ ಓದಿ.

ನಡು ರಸ್ತೆಯಲ್ಲಿ ಗನ್​​ ಹಿಡಿದು ರೀಲ್ಸ್​​​ ಮಾಡಿದ ಯುವತಿ, ಪೊಲೀಸರ ಅತಿಥಿಯಾಗುವುದು ಖಂಡಿತ
ಅಕ್ಷಯ್​ ಪಲ್ಲಮಜಲು​​
|

Updated on: May 11, 2024 | 4:39 PM

Share

ಈ ರೀಲ್ಸ್​​​ ಹುಚ್ಚು ಯಾವೆಲ್ಲ ಅನಾಹುತವನ್ನು ಉಂಟು ಮಾಡುತ್ತದೆ ಎಂದರೆ, ಅದು ಜೀವಕ್ಕೂ ಅಪಾಯ ಹಾಗೂ ಸಮಾಜಕ್ಕೂ ಅಪಾಯ. ಯುವಕ – ಯುವತಿಯರು ಮಾಡುವ ಹುಚ್ಚಾಟಕ್ಕೆ ಸಾರ್ವಜನಿಕರು ಬೆಲೆ ತೆರಬೇಕು. ಉತ್ತರಪ್ರದೇಶದ ಲಕ್ನೋದಲ್ಲಿ ಯುವತಿಯೊಬ್ಬಳು ಕೈಯಲ್ಲಿ ಗನ್ ಹಿಡಿದು ನಡುರಸ್ತೆಯಲ್ಲಿ ರೀಲ್ ಮಾಡಿದ್ದಾಳೆ, ಇದೀಗ ಈ ವಿಡಿಯೋ ಎಲ್ಲ ಕಡೆ ವೈರಲ್​​ ಆಗಿದೆ. ವಕೀಲ ಕಲ್ಯಾಣಜಿ ಚೌಧರಿ ಅವರು ಈ ವಿಡಿಯೋವನ್ನು ತಮ್ಮ ಎಕ್ಸ್​​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈಕೆಯನ್ನು ಇನ್‌ಸ್ಟಾಗ್ರಾಮ್ ಸ್ಟಾರ್​​ ಸಿಮ್ರಾನ್ ಯಾದವ್ ಎಂದು ಗುರುತಿಸಲಾಗಿದೆ.

ಈ ವಿಡಿಯೋದಲ್ಲಿ ​​ ಸಿಮ್ರಾನ್ ಯಾದವ್ ಹೆದ್ದಾರಿಯಲ್ಲಿ ಗನ್​​​ ಹಿಡಿದುಕೊಂಡು ರೀಲ್ಸ್​​​ ಮಾಡಿದ್ದಾರೆ. ಇದೀಗ ಯುವತಿಯ ಈ ವರ್ತನೆಯೂ ಕಾನೂನು ಮತ್ತು ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿದೆ. ಜತೆಗೆ ಸಾರ್ವಜನಿಕ ಪ್ರದೇಶದಲ್ಲಿ ಇಂತಹ ವಿಡಿಯೋ ಮಾಡಿರುವುದು ಸಮಾಜಘಾತಕ ವರ್ತನೆ ಎಂದು ಹೇಳಲಾಗಿದೆ. ಇನ್ನು ಈ ವಿಡಿಯೋದ ಬಗ್ಗೆ ಪೊಲೀಸರು ಕೂಡ ಮೌನ ವಹಿಸಿರುವುದು ಸಾರ್ವಜನಿಕರ ಅಕ್ರೋಶಕ್ಕೆ ಕಾರಣವಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಒಂದು ವಾರಗಳ ಹಿಂದೆ ಈ ವಿಡಿಯೋಗೆ 1,300 ಕ್ಕೂ ಹೆಚ್ಚು ವೀಕ್ಷಣೆ ಹಾಗೂ ಅನೇಕ ಕಮೆಂಟ್​​​ ಕೂಡ ಬಂದಿದೆ. ಇನ್ನು ಎಕ್ಸ್​​ ಬಳಕೆದಾರರೂ ಈ ವಿಡಿಯೋಗೆ ವಿರೋಧ ವ್ಯಕ್ತಪಡಿಸಿದ್ದು, ಇದಕ್ಕೆ ಕಮೆಂಟ್​​ ಮಾಡುವಾಗ ಉತ್ತರಪ್ರದೇಶದ ಪೊಲೀಸರಿಗೂ ಟ್ಯಾಗ್​​​ ಮಾಡಿದ್ದಾರೆ. ” ಉತ್ತರಪ್ರದೇಶದ ಪೊಲೀಸರೇ ಈ ವಿಡಿಯೋವನ್ನು ಒಮ್ಮೆ ನೋಡಿ” ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಉತ್ತರಪ್ರದೇಶದ ಪೊಲೀಸರು ಕೂಡ ಪ್ರತಿಕ್ರಿಯೆ ನೀಡಿದ್ದು ಖಂಡಿತ ಇವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಟೋಗೆ ಬಲೂನ್ ಕಟ್ಟಿ ಮಗಳ ಹುಟ್ಟುಹಬ್ಬ ಸಂಭ್ರಮಿಸಿದ ತಂದೆ

ಇನ್ನು ಈ ವಿಡಿಯೋಗೆ ಮತ್ತೊಬ್ಬ ಬಳಕೆದಾರ ಕಮೆಂಟ್​​ ಮಾಡಿದ್ದು, ಪೊಲೀಸರೇ ಈ ಯುವತಿಗೆ ಭಾರೀ ದಂಡವನ್ನು ಹಾಕಿ, ಆ ಹಣದಲ್ಲಿ ಬಡವರಿಗೆ ಅನ್ನ ನೀಡಬಹುದು ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ, ಈ ಖಾತೆಯನ್ನು ಬ್ಲಾಕ್​​ ಮಾಡಿ ಎಂದು ಹೇಳಿದ್ದಾರೆ. ಈ ಹಿಂದೆಯೂ ಕೂಡ ಇಂತಹ ಅನೇಕ ಘಟನೆಗಳು ಉತ್ತರಪ್ರದೇಶದಲ್ಲಿ ನಡೆದಿದೆ ಎಂದು ಅನೇಕ ಕಮೆಂಟ್​​ ಮಾಡಿದ್ದಾರೆ.

ಮತ್ತಷ್ಟು  ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ನ್ಯಾಯಬೆಲೆ ಅಂಗಡಿಯಲ್ಲಾಗುವ ಮೋಸ ತಡೆಯಲು ಬರಲಿದೆ ಹೊಸ ಯೋಜನೆ: ಏನದು?
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ಪೂಜೆ ನೆಪದಲ್ಲಿ 43 ಗ್ರಾಂ ಚಿನ್ನ, ನಗದು ಕದ್ದು ಸ್ವಾಮೀಜಿ ಎಸ್ಕೇಪ್​​!
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ರೇಷನ್ ಕಾರ್ಡ್ ಕರೆಕ್ಟ್ ಮಾಡಿಕೊಳ್ಳಲು 15 ದಿನ ಟೈಮ್ ಕೊಟ್ಟ ಮುನಿಯಪ್ಪ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕರ್ನಾಟಕದಲ್ಲಿ ಬರ ಪರಿಸ್ಥಿತಿ: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಕೋರ್ಟ್ ಆರ್ಡರ್ ತಂದು ಸಿನಿಮಾ ರಿಲೀಸ್ ಮಾಡಬೇಕಾಗುತ್ತೆ: ಡಾಲಿ ಧನಂಜಯ್
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಚಿವ ಸಂಪುಟ ವಿಸ್ತರಣೆ ವಿಳಂಬ: ಬಿಗ್ ಅಪ್ಡೇಟ್ ಕೊಟ್ಟ KPCC ಅಧ್ಯಕ್ಷ
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಂಪುಟ ವಿಸ್ತರಣೆ: ದೆಹಲಿಯಲ್ಲಿ ಮಹತ್ವದ ಸಭೆ, ಯಾರಿಗೆಲ್ಲಾ ಮಂತ್ರಿ ಸ್ಥಾನ?
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಸಿಎಂ ಬದಲಾದರೂ ಬದಲಾಗದ ಮಾಹಿತಿ ಬೋರ್ಡ್
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಕರಾವಳಿ ಕಂಬಳಕ್ಕೆ 25 ಲಕ್ಷ ರೂ ಕೊಡಿ: ಸುನೀಲ್​ ಕುಮಾರ್ ಆಗ್ರಹ​
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ
ಅಕ್ರಮವಾಗಿ ಸಾಗಿಸುತ್ತಿದ್ದ 32 ಟನ್ ಅನ್ನಭಾಗ್ಯ ಅಕ್ಕಿ ಜಪ್ತಿ