AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಅಮ್ಮಾ ನಾನು ಕಳ್ಳನನ್ನು ಹಿಡಿದುಬಿಟ್ಟೆ,  ಮೆಟ್ರೋದಲ್ಲಿ ಜೇಬುಗಳ್ಳನನ್ನು ಹಿಡಿದ ಯೂಟ್ಯೂಬರ್

ರೈಲು, ಮೆಟ್ರೋಗಳಲ್ಲಿ ಈ ಜೇಬುಗಳ್ಳರ ಕಾಟ ಇದ್ದಿದ್ದೆ. ಇದೀಗ ದೆಹಲಿ ಮೆಟ್ರೋದಲ್ಲಿ ಕಳ್ಳನೊಬ್ಬ ಪ್ರಯಾಣಿಕರ ಮೊಬೈಲ್  ಎಗರಿಸಲು ಮುಂದಾದಾಗ ಯೂಟ್ಯೂಬರ್ ಒಬ್ಬರ ಕೈಗೆ ಆತ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು, ಕಳ್ಳ ಸಿಕ್ಕ ಖುಷಿಯಲ್ಲಿ ಯೂಟ್ಯೂಬರ್ ವಿಡಿಯೋ ಮಾಡಿ ಅಮ್ಮಾ ನಾನು ಕಳ್ಳನನ್ನು ಹಿಡಿದುಬಿಟ್ಟೆ ಎನ್ನುತ್ತಾ ಕಳ್ಳನ ಕಪಾಳಕ್ಕೆ ಬಾರಿಸಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗುತ್ತಿದೆ. 

Viral Video: ಅಮ್ಮಾ ನಾನು ಕಳ್ಳನನ್ನು ಹಿಡಿದುಬಿಟ್ಟೆ,  ಮೆಟ್ರೋದಲ್ಲಿ ಜೇಬುಗಳ್ಳನನ್ನು ಹಿಡಿದ ಯೂಟ್ಯೂಬರ್
ಮಾಲಾಶ್ರೀ ಅಂಚನ್​
| Edited By: |

Updated on: May 16, 2024 | 11:14 AM

Share

ಸಾಮಾಜಿಕ ಜಾಲತಾಣದಲ್ಲಿ ದೆಹಲಿ ಮೆಟ್ರೋದಲ್ಲಿ ನಡೆಯುವ ಚಿತ್ರ ವಿಚಿತ್ರ ಘಟನೆಗಳ ಬಗೆಗಿನ ವಿಡಿಯೋಗಳು ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಕೆಲವೊಮ್ಮೆ ಪ್ರಯಾಣಿಕರ ನಡುವಿನ ವಾದ ವಿವಾದಗಳು, ಸೀಟಿಗಾಗಿ ನಡೆಯುವ ಜಡೆ ಜಗಳಗಳು, ಪ್ರೇಮಿಗಳ ರೊಮ್ಯಾನ್ಸ್, ರೀಲ್ಸ್ ಹುಚ್ಚಾಟ ಹೀಗೆ ಇಂತಹ ಒಂದಲ್ಲಾ ಒಂದು ಘಟನೆಗಳಿಗೆ ಸಂಬಧಿಸಿದ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋವೊಂದು ವೈರಲ್ ಆಗಿದ್ದು, ದೆಹಲಿ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ಯೂಟ್ಯೂಬರ್ ಒಬ್ಬರು, ಮೆಟ್ರೋದಲ್ಲಿ ಪ್ರಯಾಣಿಕರ ಪರ್ಸ್, ಮೊಬೈಲ್  ಕಳ್ಳತನ ಮಾಡುತ್ತಿದ್ದಂತಹ ಜೇಬುಗಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು, ವಿಡಿಯೋ ಮಾಡುತ್ತಾ ಕಳ್ಳನ ಕಪಾಳಕ್ಕೆ ಬಾರಿಸಿದ್ದಾರೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಈ ವಿಡಿಯೋವನ್ನು @Gharkekalesh ಎಂಬ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ದೆಹಲಿ ಮೆಟ್ರೋದಲ್ಲಿ ವ್ಲಾಗರ್ ಕೈಗೆ ಮೊಬೈಲ್ ಕಳ್ಳ ಸಿಕ್ಕಿಬಿದ್ದಿದ್ದಾನೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದ ದೆಹಲಿ ಮೆಟ್ರೋದಲ್ಲಿ ಸಿಕ್ಕಿದ್ದೆ ಚಾನ್ಸ್ ಎನ್ನುತ್ತಾ  ಕಳ್ಳನೊಬ್ಬ ಪ್ರಯಾಣಿಕರ ಜೇಬಿನಿಂದ ಪರ್ಸ್, ಮೊಬೈಲ್ ಎಗರಿಸುವ ಕೆಲಸಕ್ಕೆ ಮುಂದಾಗಿದ್ದಾನೆ. ಅಲ್ಲೇ ವಿಡಿಯೋ ಮಾಡುತ್ತಾ ನಿಂತಿದ್ದ ಇದ್ದ ಯೂಟ್ಯೂಬರ್ ಒಬ್ಬರಿಗೆ ಈತನ ಕಳ್ಳಾಟ ಗೊತ್ತಾಗಿ ಆತನ ಕತ್ತಿನ ಪಟ್ಟಿ ಹಿಡಿದು ಏನ್ ಮಾಡ್ತಿದ್ದೀಯಾ ನೀನು ಎಂದು ಕೇಳುತ್ತಾರೆ. ಅದಕ್ಕೆ ಆ ಕಳ್ಳ ನಾನು ನನ್ನ ಮೊಬೈಲ್ ಹುಡುಕುತ್ತಿದ್ದೇನೆ ಎಂದು ಸುಳ್ಳು ಹೇಳ್ತಾನೆ. ಕಳ್ಳನನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಖುಷಿಯಲ್ಲಿ ಆ ಯೂಟ್ಯೂಬರ್ ವಿಡಿಯೋ ಮಾಡುತ್ತಾ   ಅಮ್ಮಾ…. ನಾನು ಕಳ್ಳನನ್ನು ಹಿಡಿದುಬಿಟ್ಟೆ  ಎನ್ನುತ್ತಾ ಕಳ್ಳನ ಕಪಾಳಕ್ಕೆ ಬಾರಿಸಿ ಇನ್ನು ಮುಂದೆ ಕಳ್ಳತನ ಮಾಡದಂತೆ ಬುದ್ಧಿವಾದ ಹೇಳುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಆಸ್ಟ್ರೇಲಿಯಾದ ಬೀದಿಗಳಲ್ಲಿ ಚಪ್ಪಲಿ ಇಲ್ಲದೆ ಬರಿಗಾಲಿನಲ್ಲಿ ನಡೆದಾಡುತ್ತಿರುವ ಜನರು; ಏನಿದು ಹೊಸ ಟ್ರೆಂಡ್

ಮೇ 14 ರಂದು ಹಂಚಿಕೊಳ್ಳಲಾದ ಈ ವಿಡಿಯೋ 4 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಆ ಯೂಟ್ಯೂಬರ್ ಈ ಕ್ಷಣಕ್ಕಾಗಿ ಅದೆಷ್ಟು ದಿನದಿಂದ ಕಾದು ಕುಳಿತಿದ್ದರೋ ಎಂದು ನೆಟ್ಟಿಗರು ತಮಾಷೆ ಮಾಡಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?