Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಾಲ್ಡೀವ್ಸ್ ಮಾತ್ರವಲ್ಲ ನಮ್ಮ ಭಾರತದಲ್ಲಿಯೂ ಅತ್ಯದ್ಭುತ ಸ್ಥಳಗಳಿವೆ

ಕೆಲ ದಿನಗಳ ಹಿಂದೆ ಮಾಲ್ಡೀವ್ಸ್ ವಿರುದ್ಧ ಬಾಯ್ಕಾಟ್  ಅಭಿಯಾನ ಆರಂಭವಾಗಿದ್ದು, ಸಾಮಾನ್ಯ ಜನರಿಂದ ಹಿಡಿದು ಸ್ಟಾರ್​ಗಳವರೆಗೂ ಈ ಒಂದು ಅಭಿಯಾನಕ್ಕೆ ಎಲ್ಲರೂ ಸಾಥ್ ನೀಡಿದ್ದಾರೆ. ಅಲ್ಲದೆ ಪ್ರವಾಸೋದ್ಯಮದಲ್ಲೂ ಭಾರತ ಆತ್ಮ ನಿರ್ಭರತೆ ಸಾಧಿಸಬೇಕು ಅನ್ನೋ ಕೂಗು ಕೇಳಿ ಬರುತ್ತಿದೆ.  ಈ ನಡುವೆ  ಮಹಿಳೆಯೊಬ್ಬರು ಮಾಡಿದಂತಹ ಪೋಸ್ಟ್ ಕೂಡಾ ವೈರಲ್ ಆಗಿದೆ. ಹೌದು ಅವರು ಮುಂಬೈನಿಂದ ನಾಸಿಕ್​​​​ಗೆ ಹೆಲಿಕಾಪ್ಟರ್​​ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತೆಗೆದಂತಹ  ವಿಡಿಯೊವನ್ನು ಹಂಚಿಕೊಂಡು ಭಾರತದಲ್ಲಿಯೂ ಅತ್ಯದ್ಭುತ ಸ್ಥಳಗಳಿವೆ, ನಾವು ಅವುಗಳನ್ನು ಇನ್ನಷ್ಟು ಅನ್ವೇಷಿಸಬೇಕಾಗಿದೆ ಎಂದು ಹೇಳಿದ್ದಾರೆ. 

Viral Video: ಮಾಲ್ಡೀವ್ಸ್ ಮಾತ್ರವಲ್ಲ ನಮ್ಮ ಭಾರತದಲ್ಲಿಯೂ ಅತ್ಯದ್ಭುತ ಸ್ಥಳಗಳಿವೆ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 17, 2024 | 6:32 PM

ಪ್ರಧಾನಿ ನರೇಂದ್ರ ಮೋದಿಯವರು ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದಂತಹ ಕೆಲವು ಫೋಟೋ ಮತ್ತು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಈ ಪೋಟೋಗಳು ವೈರಲ್ ಆಗುತ್ತಿದ್ದಂತೆಯೇ ಮಾಲ್ಡೀವ್ಸ್ ಸಚಿವರು ಪ್ರಧಾನಿ ಮೋದಿ ಹಾಗೂ ಬಾರತದ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದರು. ಇವರ ಸೊಕ್ಕಡಗಿಸಲು ಭಾರತದಲ್ಲಿ #ಬಾಯ್ಕಟ್ ಮಾಲ್ಡೀವ್ಸ್ #ಎಕ್ಸ್ಪ್ಲೋರ್ ಇಂಡಿಯನ್ ಐಸ್ಲ್ಯಾಂಡ್ ಎಂಬೆಲ್ಲಾ ಅಭಿಯಾನಗಳು ಶುರುವಾದವು.  ಸಿನೆಮಾ, ಕ್ರೀಡಾರಂಗ ಮತ್ತು ಇತರೆ ಕ್ಷೇತ್ರಗಳ ಸ್ಟಾರ್ ಗಳೂ ಈ ಅಭಿಯಾನಕ್ಕೆ  ಸಾಥ್ ನೀಡಿದ್ದರು. ಹನಿಮೂನ್, ವಿವಾಹ ವಾರ್ಷಿಕೋತ್ಸವ, ಹುಟ್ಟುಹಬ್ಬ  ಇತ್ಯಾದಿ ಸ್ಪೆಷಲ್ ಈವೆಂಟ್ ಗಳನ್ನು ಸೆಲೆಬ್ರೇಟ್ ಮಾಡಲು ಮಾಲ್ಡೀವ್ಸ್ ಗೆ ಹೋಗುತ್ತಿದ್ದ ಮಂದಿಯೆಲ್ಲಾ ಇದೀಗ ಲಕ್ಷದ್ವೀಪ ಸೇರಿದಂತೆ ಭಾರತದಲ್ಲಿನ ಅತ್ಯುತ್ತಮ ಸ್ಥಳಗಳಿಗೆ ಭೇಟಿ ನೀಡಲು ಪ್ರಾರಂಭಿಸಿದ್ದಾರೆ.

ಅದೇ ರೀತಿ ಸಾಮಾಜಿಕ ಜಾಲತಾಣದಲ್ಲಿಯೂ ಕೇವಲ ಮಾಲ್ಡೀವ್ಸ್ ಮಾತ್ರವಲ್ಲ ನಮ್ಮ  ಭಾರತದಲ್ಲಿಯೂ ಅತ್ಯದ್ಭುತ ಸ್ಥಳಗಳಿವೆ.  ಅಂತಹ ಸುಂದರ ಸ್ಥಳಗಳನ್ನು ಅನ್ವೇಷಿಸುವ ಮೂಲಕ ಸ್ಥಳೀಯ ಪ್ರವಾಸೋದ್ಯಮವನ್ನು ಉತ್ತೇಜಿಸೋಣ ಎಂಬ  ಪೋಸ್ಟ್, ವಿಡಿಯೋಗಳು ಹರಿದಾಡುತ್ತಿವೆ. ಈಗ ಅದೇ ರೀತಿ ಮಹಿಳೆಯೊಬ್ಬರು  ಮುಂಬೈನಿಂದ ನಾಸಿಕ್ ಗೆ ಹೋಗುವ ಮಧ್ಯದಲ್ಲಿ ಸಿಗುವ ಸುಂದರ ಸ್ಥಳವೊಂದರ ವಿಡಿಯೋವನ್ನು  ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು, ಭಾರತದಲ್ಲಿಯೂ ಅತ್ಯದ್ಭುತ ಸ್ಥಳಗಳಿವೆ, ನಾವು ಅವುಗಳನ್ನು ಇನ್ನಷ್ಟು ಅನ್ವೇಷಿಸಬೇಕಾಗಿದೆ ಎಂದು ಹೇಳಿದ್ದಾರೆ.

Ghazal Alagh ಎಂಬವರು  ಈ ವಿಡಿಯೋವನ್ನು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದು, ನಾನು ಇದೀಗ ಮಾಲ್ಡೀವ್ಸ್ ನಲ್ಲಿದ್ದೇನೆ ಎಂದು ನೀವು ಭಾವಿಸಬಹುದು. ಆದರೆ ಇದು ನಾನು ಮುಂಬೈನಿಂದ ನಾಸಿಕ್ ಗೆ ಹೆಲಿಕಾಪ್ಟರ್ ನಲ್ಲಿ ಹೋಗುವ ಸಂದರ್ಭದಲ್ಲಿ ತೆಗೆದಂತಹ ವಿಡಿಯೋ; ಭಾರತದಲ್ಲಿಯೂ ಅತ್ಯದ್ಭುತ ಸ್ಥಳಗಳಿವೆ, ನಾವು ಅವುಗಳನ್ನು ಇನ್ನಷ್ಟು ಅನ್ವೇಷಿಸಬೇಕಾಗಿದೆ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ದ್ವೀಪದಂತೆಯೇ  ಕಾಣುತ್ತಿರುವ ಸುಂದರವಾದ ಸ್ಥಳದ ದೃಶ್ಯಾವಳಿಯನ್ನು ಕಾಣಬಹುದು.

ಇದನ್ನೂ ಓದಿ: ಅಯೋಧ್ಯೆ ತಲುಪಿದ ರಾಮ, ಸೀತೆ ಮತ್ತು ಲಕ್ಷ್ಮಣ

ಜನವರಿ 16 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಐದು ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ಗಳೂ ಹರಿದು ಬಂದಿವೆ. ಕೆಲವರು ಇದು ನಿಜವಾಗಿಯೂ ಮಾಲ್ಡೀವ್ಸ್ ನಂತೆ ಕಾಣುತ್ತಿಲ್ಲ ಮೇಡಂ, ಆದ್ರೆ ಈ ಸ್ಥಳ ಸುಂದರವಾಗಿದೆ  ಎಂದು ಕಮೆಂಟ್ ಮಾಡಿದ್ದಾರೆ.  ಇನ್ನೂ ಕೆಲವರು ಬಹಳ ಅದ್ಭುತವಾದ ಸ್ಥಳ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ