AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮಾನವೀಯ ಮೌಲ್ಯವನ್ನು ಈ ದಂಪತಿಗಳನ್ನು ನೋಡಿ ನಾವು ಕಲಿಯಬೇಕು ನೋಡಿ

ಇಂದಿನ ಕಾಲದಲ್ಲಿ ತಮ್ಮ ಸ್ವಂತದವರಿಗೆಯೇ ಸಹಾಯ ಮಾಡಲು ಹಿಂದು ಮುಂದು ನೋಡುವವರು, ರಸ್ತೆ ಬದಿಗಳಲ್ಲಿ ಅಸಹಾಯಕವಾಗಿ ಜೀವನ ನಡೆಸುವ ನಿರ್ಗತಿಕರಿಗೆ ಸಹಾಯ ಮಾಡುವುದುಂಟೆ? ಖಂಡಿತವಾಗಿಯೂ ಇಲ್ಲ, ಅಂತಹವರನ್ನು ಕಸಕ್ಕಿಂತ ಕೀಳಾಗಿ ನೋಡುವವರೆ ಹೆಚ್ಚು. ಇಂತಹ ಜನಗಳ ಮಧ್ಯೆ ಇಲ್ಲೊಂದು ದಂಪತಿ  ನಿರ್ಗತಿಕ ವೃದ್ಧೆಯೊಬ್ಬರಿಗೆ ಧನ ಸಹಾಯ ಮಾಡಿದ್ದು ಮಾತ್ರವಲ್ಲದೆ ಆ ವೃದ್ಧೆಯ ಕಾಲಿಗೆ ಬಿದ್ದು ಆಶಿರ್ವಾದ ಪಡೆಯುವ ಮೂಲಕ ನಿಜವಾದ ಮಾನವೀಯತೆ ಇನ್ನೂ ಜೀವಂತವಾಗಿದೆ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. 

Viral Video: ಮಾನವೀಯ ಮೌಲ್ಯವನ್ನು ಈ ದಂಪತಿಗಳನ್ನು ನೋಡಿ ನಾವು ಕಲಿಯಬೇಕು ನೋಡಿ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on:Jan 19, 2024 | 5:17 PM

Share

ನಮ್ಮಲ್ಲಿ ದಯೆ ಮತ್ತು ಕರುಣೆ ತುಂಬಿದ್ದರೆ ಮಾತ್ರ ನಾವು ನಿಜವಾಗಿಯೂ ಮನುಷ್ಯರು ಎಂದೆನಿಸಿಕೊಳ್ಳುತ್ತೇವೆ.  ಆದರೆ ಇಂದು ಜನರಲ್ಲಿ ಮಾನವೀಯ ಮೌಲ್ಯಗಳು ಸತ್ತು ಹೋಗಿದೆ ಅಂತಾನೇ ಹೇಳಬಹುದು. ತಮ್ಮ ಸ್ವಂತದವರಿಗೆಯೇ ಒಂದು ರೂಪಾಯಿ ಕೊಡಲು ಹಿಂದೆ ಮುಂದೆ ನೋಡುವವರು, ಹೆತ್ತ ತಂದೆ ತಾಯಿಯನ್ನೇ ವೃದ್ಧಾಶ್ರಮಕ್ಕೆ ಕಳುಹಿಸುವವರು ಕೇವಲ ತಮ್ಮ ಸ್ವಾರ್ಥಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಫೇಮಸ್ ಆಗಬೇಕು ಎಂಬ ಕಾರಣಕ್ಕೆ ಕ್ಯಾಮೆರಾ ಮುಂದೆ ತೋರ್ಪಡಿಕೆಗಾಗಿ ಕೈಲಾಗದವರಿಗೆ ಸಹಾಯ ಮಾಡುತ್ತಾ, ಆ ವಿಡಿಯೋ ತುಣುಕುಗಳನ್ನು ಸಾಮಾಜಿಕ  ಜಾಲತಾಣದಲ್ಲಿ ಹರಿಬಿಡುತ್ತಾರೆ. ಇಂತಹ ಜನರ ಮಧ್ಯೆ ನಿಜವಾದ ಮಾನವೀಯತೆ ಅಂದ್ರೆ ಏನು ಎಂಬುದನ್ನು ಈ ದಂಪತಿ ಕಲಿಸಿಕೊಟ್ಟಿದ್ದಾರೆ.  ಹೌದು ರಸ್ತೆ ಬದಿಗಳಲ್ಲಿ ಅಸಹಾಯಕವಗಾಗಿ ಜೀವನ ನಡೆಸುವ ನಿರ್ಗತಿಕರನ್ನು ಕಂಡು ಮುಖಸಿಂಡರಿಸಿ, ಅವರು ಅಸಹ್ಯವೇನೋ ಎಂಬಂತೆ ನೋಡುವ ಜನಗಳ ಮಧ್ಯೆ, ಈ ದಂಪತಿ ನಿರ್ಗತಿಕ ವೃದ್ಧೆಯೊಬ್ಬರಿಗೆ ತಮ್ಮ ಕೈಲಾದಷ್ಟು ಧನ ಸಹಾಯ ಮಾಡಿದ್ದು ಮಾತ್ರವಲ್ಲದೆ, ಆ ವೃದ್ಧೆಯ ಕಾಲಿಗೆ ಬಿದ್ದು ಆಶಿರ್ವಾದವನ್ನು ತೆಗೆದುಕೊಂಡಿದ್ದಾರೆ.  ಈ ದಂಪತಿಯನ್ನು ನೋಡಿ ನಾವುಗಳು ಮಾನವೀಯ ಮೌಲ್ಯವನ್ನು ಕಲಿಯುವುದು ತುಂಬಾನೇ ಇದೆ ಅನ್ನುತ್ತಿದ್ದಾರೆ ನೆಟ್ಟಿಗರು.

ಬಾಲಿವುಡ್ ಕೊರಿಯೋಗ್ರಾಫರ್ ಹಾಗೂ ಡೈರೆಕ್ಟರ್ ರೆಮೋ ಡಿಸೋಜಾ ಈ ವಿಡಿಯೋವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಆ ದಂಪತಿ ಯಾರೆಂದು ನನಗೆ ಗೊತ್ತಿಲ್ಲ, ಆದ್ರೆ ಇವರ ಸದ್ಗುಣವನ್ನು ಕಂಡು ಈ ವಿಡಿಯೋವನ್ನು ಪೋಸ್ಟ್ ಮಾಡುತ್ತಿದ್ದೇನೆ; ದಯೆಯ ಒಂದು ಸಣ್ಣ ಕಾರ್ಯವು ಹೆಚ್ಚು ಮೌಲ್ಯಯುತವಾದುದು. ಇದು ಇನ್ನೊಬ್ಬರ ಜೀವನದ ಮೇಲೆ ಮಹತ್ತರವಾದ ಪರಿಣಾಮವನ್ನು ಬೀರುತ್ತದೆ. ಈ ಮಾನವೀಯ ಗುಣ ಈ ದಂಪತಿಯಲ್ಲಿದೆ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

View this post on Instagram

A post shared by Remo Dsouza (@remodsouza)

ಈ ಘಟನೆ ರೆಮೋ ಡಿಸೋಜಾ ಅವರ ಮನೆಯ ಮುಂಭಾಗದ ಬೀದಿಯಲ್ಲಿ ನಡೆದಿದ್ದು, ಒಂದೊಳ್ಳೆ ವಿಚಾರವಿರುವ ಈ ದೃಶ್ಯವನ್ನು ಏಕೆ ವಿಡಿಯೋ ರೆಕಾರ್ಡ್ ಮಾಡಬಾರದೆಂದು ಅಂದುಕೊಂಡು, ರೆಮೋ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ವೈರಲ್ ವಿಡಿಯೋದಲ್ಲಿ  ವೃದ್ಧೆಯೊಬ್ಬರು ರಸ್ತೆ ಬದಿಯಲ್ಲಿ ಕೈಲಾಗದ ಸ್ಥಿತಿಯಲ್ಲಿ ನಿಂತಿರುತ್ತಾರೆ. ಅವರನ್ನು ಕಂಡ ದಂಪತಿಗಳಿಬ್ಬರು ವೃದ್ಧೆಯ ಬಳಿ ಹೋಗಿ, ಅವರ ಕೈಯಲ್ಲಿ ಸ್ವಲ್ಪ ಹಣವನ್ನಿಟ್ಟು ನಿರ್ಗತಿಕರನ್ನು ಅಸಹ್ಯವೇನೋ ಎಂಬಂತೆ ಭಾವಿಸುವ ಜನರ ಮಧ್ಯೆ ಈ ದಂಪತಿ, ಆ ವೃದ್ಧೆಯ ಕಾಲಿಗೆ ಬಿದ್ದು ಆಶಿರ್ವಾದವನ್ನು ಸಹ ಪಡೆಯುತ್ತಾರೆ. ಇಂದಿನ  ಕಾಲದಲ್ಲಿ ಕ್ಯಾಮೆರಾ ಮುಂದೆ  ತೋರ್ಪಡಿಕೆಗಾಗಿ  ಸಹಾಯ ಮಾಡುವವರ ಮಧ್ಯದಲ್ಲಿ ಈ ದಂಪತಿಯ ಮಾನವೀಯ ಗುಣ ಎಲ್ಲರ ಮನ ಗೆದ್ದಿದೆ.

ಇದನ್ನೂ ಓದಿ: ರೈಲಿನಲ್ಲಿ ಯುವಕನಿಗೆ ಮನ ಬಂದಂತೆ ಥಳಿಸಿದ ಟಿಕೆಟ್ ಕಲೆಕ್ಟರ್ 

ಮೂರು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 11.7 ಮಿಲಿಯನ್ ವೀಕ್ಷಣೆಗಳನ್ನು  ಹಾಗೂ ಏಳು ಲಕ್ಷಕ್ಕೂ ಅಧಿಕ ಲೈಕ್ಸ್ಗಳನ್ನು ಪಡೆದುಕೊಂಡಿದೆ.  ಹಾಗೂ ನೆಟ್ಟಿಗರು ಕಮೆಂಟ್ಸ್ ಮೂಲಕ ದಂಪತಿಯ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.  ಒಬ್ಬ ಬಳಕೆದಾರರು ʼಅವರು ಅಂಧೇರಿಯ ಡಿ.ನ್ ನಗರ ಪೋಲಿಸ್ ಠಾಣೆಯ ಪೋಲಿಸ್ ಇನ್ಸ್ಪೆಕ್ಟರ್. ಅವರ ಮಾನವೀಯ ಗುಣಕ್ಕೆ ನನ್ನದೊಂದು ಸಲಾಂʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈ ದಂಪತಿಗಳು ತೋರ್ಪಡಿಕೆಗೆ ಸಹಾಯ ಮಾಡದೆ ಮನಃಪೂರ್ವಕವಾಗಿ ಸಹಾಯ ಮಾಡಿದ್ದಾರೆ. ನಿಜವಾದ ಮಾನವೀಯ ಗುಣ ಇವರಲ್ಲಿದೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಅವರಿಬ್ಬರೂ ವೃದ್ಧೆಯ ಪಾದ ಮುಟ್ಟಿ ನಮಸ್ಕರಿಸುವ ದೃಶ್ಯ ನನ್ನನ್ನು ಭಾವುಕನನ್ನಾಗಿಸಿತುʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:38 pm, Fri, 19 January 24

ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು