AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚ್ಚಾ ಬಾದಾಮ್ ಹಾಡಿದವರು ಇವರೇ ನೋಡಿ; ಭುವನ್ ಬದ್ಯಕರ್

ಕಚ್ಚಾ ಬದಾಮ್ ಹಾಡಿನ ಮೂಲಕ ಗುರುತಿಸಿಕೊಂಡಿರುವ ಭುವನ್ ಬದ್ಯಕರ್ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಲಕ್ಷ್ಮೀನಾರಾಯಣಪುರ ಪಂಚಾಯತ್‌ನ ಕುರಲ್ಜುರಿ ಗ್ರಾಮದ ದುಬ್ರಾಜ್‌ಪುರ ಬ್ಲಾಕ್‌ನ ನಿವಾಸಿ.

ಕಚ್ಚಾ ಬಾದಾಮ್ ಹಾಡಿದವರು ಇವರೇ ನೋಡಿ; ಭುವನ್ ಬದ್ಯಕರ್
ಭುವನ್ ಬದ್ಯಕರ್
TV9 Web
| Edited By: |

Updated on: Jan 30, 2022 | 11:37 AM

Share

ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಒಂದು ಹಾಡು ಸಖತ್ ಫೇಮಸ್​ ಆಗಿದೆ. ಪತ್ರಿಯೊಬ್ಬರು ಆ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಫೇಮಸ್ ಆಗಿರುವ ಹಾಡೇ ಕಚ್ಚಾ ಬಾದಾಮ್ (kacha badam). ಸದ್ಯ ಈ ಹಾಡು ಟ್ರೆಂಡ್​ಗಳ ಪಟ್ಟಿಗೆ ಸೇರಿಕೊಂಡಿದೆ.  ಮತ್ತು ಇನ್‌ಸ್ಟಾಗ್ರಾಮ್ ರೀಲ್ಸ್​ನಲ್ಲಯೂ  ಸ್ಥಾನವನ್ನು ಗಳಿಸಿದೆ. ಆದರೆ ನಾವು ಇವತ್ತು ಆ ಹಾಡಿನ ಹಿಂದಿರುವ ಧ್ವನಿಯ ಕುರಿತಾಗಿ ಹೇಳುತ್ತಿದ್ದೇವೆ.  ಹೌದು ವೈರಲ್ ಆಗಿರುವ ಕಚ್ಚಾ ಬಾದಾಮ್ ಹಾಡಿನ ಹಿಂದಿನ ವ್ಯಕ್ತಿ ಭುವನ್ ಬದ್ಯಕರ್.

ಭುವನ್ ಬದ್ಯಕರ್ ಅವರ ಪರಿಚಯ

ಭುವನ್ ಬದ್ಯಕರ್ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಲಕ್ಷ್ಮೀನಾರಾಯಣಪುರ ಪಂಚಾಯತ್‌ನ ಕುರಲ್ಜುರಿ ಗ್ರಾಮದ ದುಬ್ರಾಜ್‌ಪುರ ಬ್ಲಾಕ್‌ನ ನಿವಾಸಿ. ಕಡಲೆಕಾಯಿ ಮಾರಾಟ ಮಾಡುವ ಈ ವ್ಯಕ್ತಿ ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬಳು ಪುತ್ರಿಯನ್ನು ಹೊಂದಿರುವ ಕುಟುಂಬ ಇವರದು. ಪ್ರತಿನಿತ್ಯ ಕಡಲೆಕಾಯಿ ಮಾರಲು ದೂರದ ಹಳ್ಳಿಗಳಿಗೆ ಸೈಕಲ್ ತೆಗೆದುಕೊಂಡು ಹೋಗುತ್ತಾರೆ. ಪ್ರತಿ ದಿನ 3- 4 ಕೆಜಿ ಕಡಲೆಕಾಯಿ ಮಾರಾಟ ಮಾಡಿ 200-250 ರೂ. ಸಂಪಾದಿಸುತ್ತಾರೆ. ಆದರೆ, ಕಚ್ಚಾ ಬಾದಾಮ್​ ಹಾಡಿನಿಂದ ಖ್ಯಾತಿ ಪಡೆದ ನಂತರ, ಅವರು ಸಾಮಾನ್ಯಕ್ಕಿಂತ ಹೆಚ್ಚು ಕಡಲೆಕಾಯಿಯನ್ನು ಮಾರಾಟ ಮಾಡುತ್ತಿದ್ದಾರಂತೆ.

ಇನ್ನೂ ಭುವನ್ ಬದ್ಯಕರ್ ಅವರ ಆರ್ಥಿಕ ಪರಿಸ್ಥಿತಿ ಅಷ್ಟೋಂದು ಅನುಕೂಲಕರವಾಗಿಲ್ಲ. ಆಜ್‌ತಕ್‌ ಚಾನೆಲ್​ಗೆ ನೀಡಿದ ಸಂದರ್ಶನದ ಪ್ರಕಾರ, ಭುವನ್ ತಾನು ವಾಸಿಸುವ ಪ್ರದೇಶವನ್ನು ತೋರಿಸಿದ್ದಾರೆ. “ನನ್ನ ಹಾಡಿನ ಬಗ್ಗೆ ಜನರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ ಮತ್ತು ನನ್ನ ಕುಟುಂಬಕ್ಕೆ ಕೆಲವು ಶಾಶ್ವತ ಜೀವನ ವ್ಯವಸ್ಥೆಗಳನ್ನು ಮಾಡಲು ಸರ್ಕಾರವು ಸ್ವಲ್ಪ ಹಣವನ್ನು ಸಹಾಯ ಮಾಡಬೇಕೆಂದು ನಾನು ಬಯಸುತ್ತೇನೆ. ನನ್ನ ಕುಟುಂಬಕ್ಕೆ ನಾನು ಉತ್ತಮ ಆಹಾರ ಮತ್ತು ಧರಿಸಲು ಉತ್ತಮ ಬಟ್ಟೆಗಳನ್ನು ನೀಡಲು ಬಯಸುತ್ತೇನೆ ಎಂದು ಭುವನ್ ಆಜ್‌ತಕ್‌ಗೆ ಹೇಳಿಕೊಂಡಿದ್ದಾರೆ.

ಸುಮಾರು 10 ವರ್ಷಗಳಿಂದ ಕಡಲೆಕಾಯಿಯನ್ನು ಮಾರಾಟ ಮಾಡುತ್ತಿರುವ ಭುವನ್, ಹಾಡುಗಳನ್ನು ಹಾಡುವುದು ಮತ್ತು ಬರೆಯುವುದು ಅವರ ಹವ್ಯಾಸಗಳಲ್ಲಿ ಒಂದು ಎಂದ್ದಿದ್ದಾರೆ. ಜನಪ್ರಿಯ ಬೌಲ್ ಜಾನಪದ ರಾಗವನ್ನು ಆಧರಿಸಿ ಕಚ್ಚಾ ಬಾದಾಮ್ ಹಾಡನ್ನು ರಚಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನನ್ನ ಹಾಡು ಹೇಗೆ ವೈರಲ್ ಆಯಿತು ಎಂದು ನನಗೆ ಗೊತ್ತಿಲ್ಲ. ಬಹುಶಃ ನಾನು ಬಿದಿಯಲ್ಲಿ ಹಾಡುವಾಗ ಅದನ್ನು ಯಾರೋ ರೆಕಾರ್ಡ್​ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿರಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ;

ಮ್ಯಾಗಿ ಪರೋಟಾ ನೋಡಿ ಹೀಗೂ ಮಾಡಬಹುದಾ ಎಂದ ನೆಟ್ಟಿಗರು; ವಿಡಿಯೋ ವೈರಲ್​​

ಈ ಊರಿನ ತುಂಬ ಪ್ರತಿದಿನ ಬೆಳಗ್ಗೆ ಮೊಳಗುತ್ತೆ ರಾಷ್ಟ್ರಗೀತೆ; ಜನರೆಲ್ಲ ನಿಂತು ಸಲ್ಯೂಟ್ ಮಾಡೋದು ನೋಡೋದೇ ಚೆಂದ!

Follow Us
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಜಿಬಿಎ ಚುನಾವಣೆಗೆ ಕಾಲಾವಕಾಶ ವಿಸ್ತರಣೆಗೆ ಮನವಿ: ಸುಪ್ರೀಂ​ಗೆ ಸರ್ಕಾರ ಅರ್ಜಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ