AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಚ್ಚಾ ಬಾದಾಮ್ ಹಾಡಿದವರು ಇವರೇ ನೋಡಿ; ಭುವನ್ ಬದ್ಯಕರ್

ಕಚ್ಚಾ ಬದಾಮ್ ಹಾಡಿನ ಮೂಲಕ ಗುರುತಿಸಿಕೊಂಡಿರುವ ಭುವನ್ ಬದ್ಯಕರ್ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಲಕ್ಷ್ಮೀನಾರಾಯಣಪುರ ಪಂಚಾಯತ್‌ನ ಕುರಲ್ಜುರಿ ಗ್ರಾಮದ ದುಬ್ರಾಜ್‌ಪುರ ಬ್ಲಾಕ್‌ನ ನಿವಾಸಿ.

ಕಚ್ಚಾ ಬಾದಾಮ್ ಹಾಡಿದವರು ಇವರೇ ನೋಡಿ; ಭುವನ್ ಬದ್ಯಕರ್
ಭುವನ್ ಬದ್ಯಕರ್
TV9 Web
| Edited By: |

Updated on: Jan 30, 2022 | 11:37 AM

Share

ಕೆಲವು ದಿನಗಳಿಂದ ಸಾಮಾಜಿಕ ಮಾಧ್ಯಮಗಳಲ್ಲಿ ಒಂದು ಹಾಡು ಸಖತ್ ಫೇಮಸ್​ ಆಗಿದೆ. ಪತ್ರಿಯೊಬ್ಬರು ಆ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಫೇಮಸ್ ಆಗಿರುವ ಹಾಡೇ ಕಚ್ಚಾ ಬಾದಾಮ್ (kacha badam). ಸದ್ಯ ಈ ಹಾಡು ಟ್ರೆಂಡ್​ಗಳ ಪಟ್ಟಿಗೆ ಸೇರಿಕೊಂಡಿದೆ.  ಮತ್ತು ಇನ್‌ಸ್ಟಾಗ್ರಾಮ್ ರೀಲ್ಸ್​ನಲ್ಲಯೂ  ಸ್ಥಾನವನ್ನು ಗಳಿಸಿದೆ. ಆದರೆ ನಾವು ಇವತ್ತು ಆ ಹಾಡಿನ ಹಿಂದಿರುವ ಧ್ವನಿಯ ಕುರಿತಾಗಿ ಹೇಳುತ್ತಿದ್ದೇವೆ.  ಹೌದು ವೈರಲ್ ಆಗಿರುವ ಕಚ್ಚಾ ಬಾದಾಮ್ ಹಾಡಿನ ಹಿಂದಿನ ವ್ಯಕ್ತಿ ಭುವನ್ ಬದ್ಯಕರ್.

ಭುವನ್ ಬದ್ಯಕರ್ ಅವರ ಪರಿಚಯ

ಭುವನ್ ಬದ್ಯಕರ್ ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಲಕ್ಷ್ಮೀನಾರಾಯಣಪುರ ಪಂಚಾಯತ್‌ನ ಕುರಲ್ಜುರಿ ಗ್ರಾಮದ ದುಬ್ರಾಜ್‌ಪುರ ಬ್ಲಾಕ್‌ನ ನಿವಾಸಿ. ಕಡಲೆಕಾಯಿ ಮಾರಾಟ ಮಾಡುವ ಈ ವ್ಯಕ್ತಿ ಪತ್ನಿ, ಇಬ್ಬರು ಪುತ್ರರು ಮತ್ತು ಒಬ್ಬಳು ಪುತ್ರಿಯನ್ನು ಹೊಂದಿರುವ ಕುಟುಂಬ ಇವರದು. ಪ್ರತಿನಿತ್ಯ ಕಡಲೆಕಾಯಿ ಮಾರಲು ದೂರದ ಹಳ್ಳಿಗಳಿಗೆ ಸೈಕಲ್ ತೆಗೆದುಕೊಂಡು ಹೋಗುತ್ತಾರೆ. ಪ್ರತಿ ದಿನ 3- 4 ಕೆಜಿ ಕಡಲೆಕಾಯಿ ಮಾರಾಟ ಮಾಡಿ 200-250 ರೂ. ಸಂಪಾದಿಸುತ್ತಾರೆ. ಆದರೆ, ಕಚ್ಚಾ ಬಾದಾಮ್​ ಹಾಡಿನಿಂದ ಖ್ಯಾತಿ ಪಡೆದ ನಂತರ, ಅವರು ಸಾಮಾನ್ಯಕ್ಕಿಂತ ಹೆಚ್ಚು ಕಡಲೆಕಾಯಿಯನ್ನು ಮಾರಾಟ ಮಾಡುತ್ತಿದ್ದಾರಂತೆ.

ಇನ್ನೂ ಭುವನ್ ಬದ್ಯಕರ್ ಅವರ ಆರ್ಥಿಕ ಪರಿಸ್ಥಿತಿ ಅಷ್ಟೋಂದು ಅನುಕೂಲಕರವಾಗಿಲ್ಲ. ಆಜ್‌ತಕ್‌ ಚಾನೆಲ್​ಗೆ ನೀಡಿದ ಸಂದರ್ಶನದ ಪ್ರಕಾರ, ಭುವನ್ ತಾನು ವಾಸಿಸುವ ಪ್ರದೇಶವನ್ನು ತೋರಿಸಿದ್ದಾರೆ. “ನನ್ನ ಹಾಡಿನ ಬಗ್ಗೆ ಜನರು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ ಮತ್ತು ನನ್ನ ಕುಟುಂಬಕ್ಕೆ ಕೆಲವು ಶಾಶ್ವತ ಜೀವನ ವ್ಯವಸ್ಥೆಗಳನ್ನು ಮಾಡಲು ಸರ್ಕಾರವು ಸ್ವಲ್ಪ ಹಣವನ್ನು ಸಹಾಯ ಮಾಡಬೇಕೆಂದು ನಾನು ಬಯಸುತ್ತೇನೆ. ನನ್ನ ಕುಟುಂಬಕ್ಕೆ ನಾನು ಉತ್ತಮ ಆಹಾರ ಮತ್ತು ಧರಿಸಲು ಉತ್ತಮ ಬಟ್ಟೆಗಳನ್ನು ನೀಡಲು ಬಯಸುತ್ತೇನೆ ಎಂದು ಭುವನ್ ಆಜ್‌ತಕ್‌ಗೆ ಹೇಳಿಕೊಂಡಿದ್ದಾರೆ.

ಸುಮಾರು 10 ವರ್ಷಗಳಿಂದ ಕಡಲೆಕಾಯಿಯನ್ನು ಮಾರಾಟ ಮಾಡುತ್ತಿರುವ ಭುವನ್, ಹಾಡುಗಳನ್ನು ಹಾಡುವುದು ಮತ್ತು ಬರೆಯುವುದು ಅವರ ಹವ್ಯಾಸಗಳಲ್ಲಿ ಒಂದು ಎಂದ್ದಿದ್ದಾರೆ. ಜನಪ್ರಿಯ ಬೌಲ್ ಜಾನಪದ ರಾಗವನ್ನು ಆಧರಿಸಿ ಕಚ್ಚಾ ಬಾದಾಮ್ ಹಾಡನ್ನು ರಚಿಸಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ನನ್ನ ಹಾಡು ಹೇಗೆ ವೈರಲ್ ಆಯಿತು ಎಂದು ನನಗೆ ಗೊತ್ತಿಲ್ಲ. ಬಹುಶಃ ನಾನು ಬಿದಿಯಲ್ಲಿ ಹಾಡುವಾಗ ಅದನ್ನು ಯಾರೋ ರೆಕಾರ್ಡ್​ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹಾಕಿರಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ;

ಮ್ಯಾಗಿ ಪರೋಟಾ ನೋಡಿ ಹೀಗೂ ಮಾಡಬಹುದಾ ಎಂದ ನೆಟ್ಟಿಗರು; ವಿಡಿಯೋ ವೈರಲ್​​

ಈ ಊರಿನ ತುಂಬ ಪ್ರತಿದಿನ ಬೆಳಗ್ಗೆ ಮೊಳಗುತ್ತೆ ರಾಷ್ಟ್ರಗೀತೆ; ಜನರೆಲ್ಲ ನಿಂತು ಸಲ್ಯೂಟ್ ಮಾಡೋದು ನೋಡೋದೇ ಚೆಂದ!

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್