AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ದೇವರೇ ಕಾಪಾಡಪ್ಪ ಎಂದು ದೇವರ ಬೆಳ್ಳಿ ಕಿರೀಟ ಎಗರಿಸಿದ 26ರ ಯುವಕ

350 ಗ್ರಾಂ ತೂಕದ ದೇವರ ಬೆಳ್ಳಿಯ ಕಿರೀಟವನ್ನು ಕದ್ದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕದಿಯುವ ಮೊದಲು ಯುವಕ ದೇವರಿಗೆ ಕೈ ಮುಗಿಯುತ್ತಿರುವುದನ್ನು ಕಾಣಬಹುದು. ದೇವರಿಗೆ ಕೈ ಮುಗಿದು ದೇವರೇ ಕಾಪಾಡಪ್ಪ ಎಂದು ಪ್ರಾರ್ಥಿಸಿ ವಿಗ್ರಹದ ತಲೆಯ ಮೇಲಿದ್ದ ಕಿರೀಟವನ್ನು ತೆಗೆದು, ತನ್ನ ಬ್ಯಾಗಿನಲ್ಲಿ ಇರಿಸಿ, ಅಲ್ಲಿಂದ ಪರಾರಿಯಾಗಿದ್ದಾನೆ.

Video Viral: ದೇವರೇ ಕಾಪಾಡಪ್ಪ ಎಂದು ದೇವರ ಬೆಳ್ಳಿ ಕಿರೀಟ ಎಗರಿಸಿದ 26ರ ಯುವಕ
ದೇವರೇ ಕಾಪಾಡಪ್ಪ ಎಂದು ದೇವರ ಬೆಳ್ಳಿ ಕಿರೀಟ ಎಗರಿಸಿದ 26ರ ಯುವಕ
ಅಕ್ಷತಾ ವರ್ಕಾಡಿ
|

Updated on: Jul 19, 2024 | 12:56 PM

Share

ಮುಂಬೈ: ಬೋರಿವಲಿ ಪೂರ್ವದ ರಸ್ತೆ ಸಂಖ್ಯೆ 5ರಲ್ಲಿರುವ ವಿಠ್ಠಲ್ ದೇವಸ್ಥಾನದಿಂದ ಬೆಳ್ಳಿ ಕಿರೀಟವನ್ನು ಕದ್ದ ಆರೋಪದ ಮೇಲೆ ಘನಶ್ಯಾಮ್​​​​ ವರ್ಮಾ (26) ಎಂಬಾತನನ್ನು ಕಸ್ತೂರ್ಬಾ ಪೊಲೀಸರು ಬಂಧಿಸಿದ್ದಾರೆ. ಆತ ದೇವರ ಬೆಳ್ಳಿ ಕಿರೀಟ ಕದ್ದಿಯುತ್ತಿರುವ ದೃಶ್ಯ ದೇವಾಲಯದ ಗರ್ಭಗುಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. ಕಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮೂಲತಃ ರಾಜಸ್ಥಾನದವರಾದ ವರ್ಮಾ ಉದ್ಯೋಗ ಅರಸಿ ಮುಂಬೈಗೆ ಬಂದಿದ್ದ. ಉದ್ಯೋಗ ಸಿಗದೇ ನಿರುದ್ಯೋಗಿಯಾದ್ದರಿಂದ ಹಣಕ್ಕಾಗಿ ಈ ಕೆಲಸ ಮಾಡಿರುವುದು ತನಿಖೆಯ ವೇಳೆ ತಿಳಿದುಬಂದಿದೆ.

350 ಗ್ರಾಂ ತೂಕದ ಬೆಲೆಬಾಳುವ ಕಿರೀಟವನ್ನು ಕದ್ದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕದಿಯುವ ಮೊದಲು ಯುವಕ ದೇವರಿಗೆ ಕೈ ಮುಗಿಯುತ್ತಿರುವುದನ್ನು ಕಾಣಬಹುದು. ದೇವರಿಗೆ ಕೈ ಮುಗಿದು ದೇವರೇ ಕಾಪಾಡಪ್ಪ ಎಂದು ಪ್ರಾರ್ಥಿಸಿ ವಿಗ್ರಹದ ತಲೆಯ ಮೇಲಿದ್ದ ಕಿರೀಟವನ್ನು ತೆಗೆದು, ತನ್ನ ಬ್ಯಾಗಿನಲ್ಲಿ ಇರಿಸಿ, ಅಲ್ಲಿಂದ ಜಾಗ ಖಾಲಿ ಮಾಡಿದ್ದಾನೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​ ಮಾಡುತ್ತಿರುವ ವೇಳೆ ಎಂಟ್ರಿ ಕೊಟ್ಟ ಗರ್ಭಿಣಿ ಪತ್ನಿ

ಘಟನೆಯ ನಂತರ, ಕಸ್ತೂರ್ಬಾ ಪೊಲೀಸರು ಯುವಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 305 (ವಾಸದ ಮನೆ, ಅಥವಾ ಸಾರಿಗೆ ವಿಧಾನ ಅಥವಾ ಪೂಜಾ ಸ್ಥಳದಲ್ಲಿ ಕಳ್ಳತನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದೇ ದಿನ ವರ್ಮಾ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ವಿಚಾರಣೆಯ ಬಳಿಕ ನ್ಯಾಯಾಲಯವು ಆತನಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​