AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ದೇವರೇ ಕಾಪಾಡಪ್ಪ ಎಂದು ದೇವರ ಬೆಳ್ಳಿ ಕಿರೀಟ ಎಗರಿಸಿದ 26ರ ಯುವಕ

350 ಗ್ರಾಂ ತೂಕದ ದೇವರ ಬೆಳ್ಳಿಯ ಕಿರೀಟವನ್ನು ಕದ್ದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕದಿಯುವ ಮೊದಲು ಯುವಕ ದೇವರಿಗೆ ಕೈ ಮುಗಿಯುತ್ತಿರುವುದನ್ನು ಕಾಣಬಹುದು. ದೇವರಿಗೆ ಕೈ ಮುಗಿದು ದೇವರೇ ಕಾಪಾಡಪ್ಪ ಎಂದು ಪ್ರಾರ್ಥಿಸಿ ವಿಗ್ರಹದ ತಲೆಯ ಮೇಲಿದ್ದ ಕಿರೀಟವನ್ನು ತೆಗೆದು, ತನ್ನ ಬ್ಯಾಗಿನಲ್ಲಿ ಇರಿಸಿ, ಅಲ್ಲಿಂದ ಪರಾರಿಯಾಗಿದ್ದಾನೆ.

Video Viral: ದೇವರೇ ಕಾಪಾಡಪ್ಪ ಎಂದು ದೇವರ ಬೆಳ್ಳಿ ಕಿರೀಟ ಎಗರಿಸಿದ 26ರ ಯುವಕ
ದೇವರೇ ಕಾಪಾಡಪ್ಪ ಎಂದು ದೇವರ ಬೆಳ್ಳಿ ಕಿರೀಟ ಎಗರಿಸಿದ 26ರ ಯುವಕ
ಅಕ್ಷತಾ ವರ್ಕಾಡಿ
|

Updated on: Jul 19, 2024 | 12:56 PM

Share

ಮುಂಬೈ: ಬೋರಿವಲಿ ಪೂರ್ವದ ರಸ್ತೆ ಸಂಖ್ಯೆ 5ರಲ್ಲಿರುವ ವಿಠ್ಠಲ್ ದೇವಸ್ಥಾನದಿಂದ ಬೆಳ್ಳಿ ಕಿರೀಟವನ್ನು ಕದ್ದ ಆರೋಪದ ಮೇಲೆ ಘನಶ್ಯಾಮ್​​​​ ವರ್ಮಾ (26) ಎಂಬಾತನನ್ನು ಕಸ್ತೂರ್ಬಾ ಪೊಲೀಸರು ಬಂಧಿಸಿದ್ದಾರೆ. ಆತ ದೇವರ ಬೆಳ್ಳಿ ಕಿರೀಟ ಕದ್ದಿಯುತ್ತಿರುವ ದೃಶ್ಯ ದೇವಾಲಯದ ಗರ್ಭಗುಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. ಕಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮೂಲತಃ ರಾಜಸ್ಥಾನದವರಾದ ವರ್ಮಾ ಉದ್ಯೋಗ ಅರಸಿ ಮುಂಬೈಗೆ ಬಂದಿದ್ದ. ಉದ್ಯೋಗ ಸಿಗದೇ ನಿರುದ್ಯೋಗಿಯಾದ್ದರಿಂದ ಹಣಕ್ಕಾಗಿ ಈ ಕೆಲಸ ಮಾಡಿರುವುದು ತನಿಖೆಯ ವೇಳೆ ತಿಳಿದುಬಂದಿದೆ.

350 ಗ್ರಾಂ ತೂಕದ ಬೆಲೆಬಾಳುವ ಕಿರೀಟವನ್ನು ಕದ್ದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕದಿಯುವ ಮೊದಲು ಯುವಕ ದೇವರಿಗೆ ಕೈ ಮುಗಿಯುತ್ತಿರುವುದನ್ನು ಕಾಣಬಹುದು. ದೇವರಿಗೆ ಕೈ ಮುಗಿದು ದೇವರೇ ಕಾಪಾಡಪ್ಪ ಎಂದು ಪ್ರಾರ್ಥಿಸಿ ವಿಗ್ರಹದ ತಲೆಯ ಮೇಲಿದ್ದ ಕಿರೀಟವನ್ನು ತೆಗೆದು, ತನ್ನ ಬ್ಯಾಗಿನಲ್ಲಿ ಇರಿಸಿ, ಅಲ್ಲಿಂದ ಜಾಗ ಖಾಲಿ ಮಾಡಿದ್ದಾನೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​ ಮಾಡುತ್ತಿರುವ ವೇಳೆ ಎಂಟ್ರಿ ಕೊಟ್ಟ ಗರ್ಭಿಣಿ ಪತ್ನಿ

ಘಟನೆಯ ನಂತರ, ಕಸ್ತೂರ್ಬಾ ಪೊಲೀಸರು ಯುವಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 305 (ವಾಸದ ಮನೆ, ಅಥವಾ ಸಾರಿಗೆ ವಿಧಾನ ಅಥವಾ ಪೂಜಾ ಸ್ಥಳದಲ್ಲಿ ಕಳ್ಳತನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದೇ ದಿನ ವರ್ಮಾ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ವಿಚಾರಣೆಯ ಬಳಿಕ ನ್ಯಾಯಾಲಯವು ಆತನಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ