Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ದೇವರೇ ಕಾಪಾಡಪ್ಪ ಎಂದು ದೇವರ ಬೆಳ್ಳಿ ಕಿರೀಟ ಎಗರಿಸಿದ 26ರ ಯುವಕ

350 ಗ್ರಾಂ ತೂಕದ ದೇವರ ಬೆಳ್ಳಿಯ ಕಿರೀಟವನ್ನು ಕದ್ದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕದಿಯುವ ಮೊದಲು ಯುವಕ ದೇವರಿಗೆ ಕೈ ಮುಗಿಯುತ್ತಿರುವುದನ್ನು ಕಾಣಬಹುದು. ದೇವರಿಗೆ ಕೈ ಮುಗಿದು ದೇವರೇ ಕಾಪಾಡಪ್ಪ ಎಂದು ಪ್ರಾರ್ಥಿಸಿ ವಿಗ್ರಹದ ತಲೆಯ ಮೇಲಿದ್ದ ಕಿರೀಟವನ್ನು ತೆಗೆದು, ತನ್ನ ಬ್ಯಾಗಿನಲ್ಲಿ ಇರಿಸಿ, ಅಲ್ಲಿಂದ ಪರಾರಿಯಾಗಿದ್ದಾನೆ.

Video Viral: ದೇವರೇ ಕಾಪಾಡಪ್ಪ ಎಂದು ದೇವರ ಬೆಳ್ಳಿ ಕಿರೀಟ ಎಗರಿಸಿದ 26ರ ಯುವಕ
ದೇವರೇ ಕಾಪಾಡಪ್ಪ ಎಂದು ದೇವರ ಬೆಳ್ಳಿ ಕಿರೀಟ ಎಗರಿಸಿದ 26ರ ಯುವಕ
Follow us
ಅಕ್ಷತಾ ವರ್ಕಾಡಿ
|

Updated on: Jul 19, 2024 | 12:56 PM

ಮುಂಬೈ: ಬೋರಿವಲಿ ಪೂರ್ವದ ರಸ್ತೆ ಸಂಖ್ಯೆ 5ರಲ್ಲಿರುವ ವಿಠ್ಠಲ್ ದೇವಸ್ಥಾನದಿಂದ ಬೆಳ್ಳಿ ಕಿರೀಟವನ್ನು ಕದ್ದ ಆರೋಪದ ಮೇಲೆ ಘನಶ್ಯಾಮ್​​​​ ವರ್ಮಾ (26) ಎಂಬಾತನನ್ನು ಕಸ್ತೂರ್ಬಾ ಪೊಲೀಸರು ಬಂಧಿಸಿದ್ದಾರೆ. ಆತ ದೇವರ ಬೆಳ್ಳಿ ಕಿರೀಟ ಕದ್ದಿಯುತ್ತಿರುವ ದೃಶ್ಯ ದೇವಾಲಯದ ಗರ್ಭಗುಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ. ಕಳ್ಳತನ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಮೂಲತಃ ರಾಜಸ್ಥಾನದವರಾದ ವರ್ಮಾ ಉದ್ಯೋಗ ಅರಸಿ ಮುಂಬೈಗೆ ಬಂದಿದ್ದ. ಉದ್ಯೋಗ ಸಿಗದೇ ನಿರುದ್ಯೋಗಿಯಾದ್ದರಿಂದ ಹಣಕ್ಕಾಗಿ ಈ ಕೆಲಸ ಮಾಡಿರುವುದು ತನಿಖೆಯ ವೇಳೆ ತಿಳಿದುಬಂದಿದೆ.

350 ಗ್ರಾಂ ತೂಕದ ಬೆಲೆಬಾಳುವ ಕಿರೀಟವನ್ನು ಕದ್ದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕದಿಯುವ ಮೊದಲು ಯುವಕ ದೇವರಿಗೆ ಕೈ ಮುಗಿಯುತ್ತಿರುವುದನ್ನು ಕಾಣಬಹುದು. ದೇವರಿಗೆ ಕೈ ಮುಗಿದು ದೇವರೇ ಕಾಪಾಡಪ್ಪ ಎಂದು ಪ್ರಾರ್ಥಿಸಿ ವಿಗ್ರಹದ ತಲೆಯ ಮೇಲಿದ್ದ ಕಿರೀಟವನ್ನು ತೆಗೆದು, ತನ್ನ ಬ್ಯಾಗಿನಲ್ಲಿ ಇರಿಸಿ, ಅಲ್ಲಿಂದ ಜಾಗ ಖಾಲಿ ಮಾಡಿದ್ದಾನೆ.

ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಪ್ರೇಯಸಿಯೊಂದಿಗೆ ಬೀಚ್​​ನಲ್ಲಿ ಎಂಜಾಯ್​ ಮಾಡುತ್ತಿರುವ ವೇಳೆ ಎಂಟ್ರಿ ಕೊಟ್ಟ ಗರ್ಭಿಣಿ ಪತ್ನಿ

ಘಟನೆಯ ನಂತರ, ಕಸ್ತೂರ್ಬಾ ಪೊಲೀಸರು ಯುವಕನ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 305 (ವಾಸದ ಮನೆ, ಅಥವಾ ಸಾರಿಗೆ ವಿಧಾನ ಅಥವಾ ಪೂಜಾ ಸ್ಥಳದಲ್ಲಿ ಕಳ್ಳತನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅದೇ ದಿನ ವರ್ಮಾ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ವಿಚಾರಣೆಯ ಬಳಿಕ ನ್ಯಾಯಾಲಯವು ಆತನಿಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಬಸ್ ಅಪಘಾತದಲ್ಲಿ 14 ಜನರಿಗೆ ಗಾಯ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ದೆಹಲಿಯ ಶಾಹೀನ್ ಬಾಗ್ ಮಾರುಕಟ್ಟೆಯ ಚಪ್ಪಲಿ ಶೋ ರೂಂನಲ್ಲಿ ಬೆಂಕಿ ದುರಂತ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ