AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಚಿನ್ನದ ಸರ ಕದ್ದು ಓಡಿದ ಕಳ್ಳ, ಪರಾರಿಯಾಗುವಷ್ಟರಲ್ಲಿ ಬಾಗಿಲು ಲಾಕ್! ಕಳ್ಳನ ಪೀಕಲಾಟ ನೋಡಿ ನಕ್ಕ ನೆಟ್ಟಿಗರು

ಘಟನೆ ಥೈಲೆಂಟ್​ನಲ್ಲಿ ನಡೆದಿದೆ. ಚಿನ್ನದ ಸರವನ್ನು ಕದಿಯಲು ಪ್ರಯತ್ನಿಸಿದ ವ್ಯಕ್ತಿ ವಿಫಲರಾಗಿದ್ದಾರೆ. ಬಾಗಿಲು ಲಾಕ್ ಆಗಿದ್ದನ್ನು ನೋಡಿದ ವ್ಯಕ್ತಿ ಹಿಂತಿರುಗಿ ಬಂದು ಸರವನ್ನು ಮೊದಲಿದ್ದ ಜಾಗದಲ್ಲಿ ಇಡುತ್ತಾನೆ. ಆತನ ಮುಖ ಸಪ್ಪೆಮೋರೆಯಾಗಿದೆ.

Viral Video: ಚಿನ್ನದ ಸರ ಕದ್ದು ಓಡಿದ ಕಳ್ಳ, ಪರಾರಿಯಾಗುವಷ್ಟರಲ್ಲಿ ಬಾಗಿಲು ಲಾಕ್! ಕಳ್ಳನ ಪೀಕಲಾಟ ನೋಡಿ ನಕ್ಕ ನೆಟ್ಟಿಗರು
ಕಳ್ಳನ ಪೀಕಲಾಟ ನೋಡಿ ನಕ್ಕ ನೆಟ್ಟಿಗರು
TV9 Web
| Edited By: |

Updated on: Jul 08, 2021 | 1:21 PM

Share

ಚಿನ್ನಾಭರಣದ ಅಂಗಡಿಗಳು ಕಳ್ಳರಿಗೆ ಪ್ರಮುಖ ತಾಣವಾಗಿದೆ. ಸಭ್ಯರಂತೆ ಬಂದು ಚಿನ್ನವನ್ನು ನೋಡುತ್ತಿರುವಂತೆ ಆ್ಯಕ್ಟಿಂಗ್ ಮಾಡುತ್ತಾ ಸುಮ್ಮನೆ ಸರವನ್ನು ಕದ್ದು ಪರಾರಿಯಾಗಿ ಬಿಡುತ್ತಾರೆ. ಆದರೆ ಇಲ್ಲೊಬ್ಬ ಕಳ್ಳ ಚಿನ್ನದ ಸರ ಕದಿಯಲು ಹೋಗಿ ಪೇಚಿಗೆ ಸಿಲುಕಿಕೊಂಡಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕಳ್ಳನ ಎಕ್ಸ್​ಪ್ರೆಶನ್​ ನೋಡಿ ನೆಟ್ಟಿಗರು ಹಾಸ್ಯ ಮಾಡಿ ನಗುತ್ತಿದ್ದಾರೆ.

ಘಟನೆ ಥೈಲೆಂಟ್​ನಲ್ಲಿ ನಡೆದಿದೆ. ಚಿನ್ನದ ಸರವನ್ನು ಕದಿಯಲು ಪ್ರಯತ್ನಿಸಿದ ವ್ಯಕ್ತಿ ವಿಫಲರಾಗಿದ್ದಾರೆ. ಈ ವಿಡಿಯೋ 2018ರಲ್ಲಿ ವೈರಲ್​ ಆಗಿತ್ತು. ಆದರೆ ಪುನಃ ಮತ್ತೆ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. 27 ವರ್ಷದ ವ್ಯಕ್ತಿಯೊಬ್ಬ ಚಿನ್ನದ ಮಳಿಗೆಗೆ ಬಂದು ಚಿನ್ನದ ಸರವನ್ನು ಖದೀಸುವಂತೆ ನಾಟಕವಾಡುತ್ತಾನೆ. ಸರವನ್ನು ಕುತ್ತಿಗೆಗೆ ಹಾಕಿಕೊಂಡು ಸುಂದರವಾಗಿ ಕಾಣಿಸುತ್ತಿದ್ದೀನಾ? ಎಂದು ಕನ್ನಡಿಯಲ್ಲಿ ನೋಡಿಕೊಳ್ಳುತ್ತಾನೆ. ಸ್ವಲ್ಪ ದೂರದಲ್ಲೇ ಇದ್ದ ಬಾಗಿಲು ನೋಡುತ್ತಾ ಓಡಿ ಹೋಗಿ ಗಾಜಿನ ಬಾಗಿಲು ತೆಗೆಯಲು ಪ್ರಯತ್ನಿಸುತ್ತಾನೆ. ಆದರೆ ಬಾಗಿಲು ಲಾಕ್​ ಆಗಿರುತ್ತದೆ. ವ್ಯಕ್ತಿಯ ಪೀಕಲಾಟ ನೋಡಿದ ನೆಟ್ಟಿಗರು ತಮಾಷೆ ಮಾಡುತ್ತಿದ್ದಾರೆ.

ಬಾಗಿಲು ಲಾಕ್ ಆಗಿದ್ದನ್ನು ನೋಡಿದ ವ್ಯಕ್ತಿ ಹಿಂತಿರುಗಿ ಬಂದು ಸರವನ್ನು ಮೊದಲಿದ್ದ ಜಾಗದಲ್ಲಿ ಇಡುತ್ತಾನೆ. ಆತನ ಮುಖ ಸಪ್ಪೆಮೋರೆಯಾಗಿದೆ. ವಿಶೇಷವೆಂದರೆ, ಅನುಮಾನಾಸ್ಪದವಾದ ಆತನ ವರ್ತನೆಯಿಂದ ಅಂಗಡಿ ಮಾಲೀಕರು ಮೊದಲೇ ಬಾಗಿಲನ್ನು ಲಾಕ್​ ಮಾಡಿದ್ದಾರೆ. ನಂತರ ಪೋಲಿಸರಿಗೆ ವಿಷಯ ತಿಳಿಸಲಾಗಿದೆ.

ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ನಾನು ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದೆ. ನನ್ನನ್ನು ಕೆಲಸದಿಂದ ತೆಗೆದು ಹಾಕಿದ್ದಾರೆ. ಹಾಗಾಗಿ ಹಣವಿಲ್ಲದೇ ಕಳ್ಳತನ ಮಾಡಲು ಪ್ರಾರಂಭಿಸಿದೆ ಎಂದು ವ್ಯಕ್ತಿ ತಪ್ಪೊಪ್ಪಿಕೊಂಡಿದ್ದಾನೆ.

ಇದನ್ನೂ ಓದಿ:

ಪೊಲೀಸ್ ಮನೆಯಲ್ಲೇ ಕಳ್ಳತನ ಮಾಡಿ ಕ್ಷಮೆ ಪತ್ರ ಬರೆದಿಟ್ಟ ಖದೀಮ; ಮತ್ತೊಂದೆಡೆ ಕಳ್ಳನಿಗೆ ಮನೆ ಮಾಲೀಕನ ಜಾಣ ಪತ್ರ!

ದಾಬಸ್‌ಪೇಟೆಯ 3 ಅಂಗಡಿಗಳಲ್ಲಿ ಸರಣಿ ಕಳ್ಳತನ; ಅಂಗಡಿಗಳ ಶೆಟರ್ ಮುರಿದು ನಗದು ದೋಚಿರುವ ಕಳ್ಳರು

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ