AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಗನಕ್ಕೇರಿದ ತರಕಾರಿ ಬೆಲೆ; ವ್ಯಾಪಾರಿಯೊಬ್ಬರಿಗೆ ಸೇರಿದ 60 ಕೆಜಿ ಲಿಂಬು ಕದ್ದೊಯ್ದ ಕಳ್ಳರು

ಲಿಂಬು ಹಣ್ಣಿಗೆ ಮಾರುಕಟ್ಟೆಯಲ್ಲಿ ಸದ್ಯ ಕೆಜಿಗೆ 200 ರೂಪಾಯಿ ಇದೆ. ಇದೀಗ ಒಟ್ಟಾರೆ ಕದ್ದುಕೊಂಡು ಹೋಗಿರುವ ಲಿಂಬು ಬೆಲೆ ಸುಮಾರು 10 ಸಾವಿರ ರೂಪಾಯಿ ಎಂದು ತರಕಾರಿ ವ್ಯಾಪಾರಿ ತಿಳಿಸಿದ್ದಾರೆ.

ಗಗನಕ್ಕೇರಿದ ತರಕಾರಿ ಬೆಲೆ; ವ್ಯಾಪಾರಿಯೊಬ್ಬರಿಗೆ ಸೇರಿದ 60 ಕೆಜಿ ಲಿಂಬು ಕದ್ದೊಯ್ದ ಕಳ್ಳರು
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Apr 12, 2022 | 8:40 PM

ತರಕಾರಿ ಬೆಲೆ ಗಗನಕ್ಕೇರುತ್ತಿರುವ ಬೆನ್ನಲ್ಲೇ ಕಳವಿನ ಪ್ರಕರಣಗಳೂ ಹೆಚ್ಚುತ್ತಿವೆ. ಉತ್ತರ ಪ್ರದೇಶದ ಶಹಜಾನ್​ಪುರದಲ್ಲಿ ತರಕಾರಿ ವ್ಯಾಪಾರಿಯೊಬ್ಬರ ಬಳಿಯಿದ್ದ ಬರೋಬ್ಬರಿ 60 ಕೆಜಿ ಲಿಂಬು ಹಣ್ಣನ್ನು ಕಳ್ಳರು ಕದ್ದೊಯ್ದಿದ್ದಾರೆ.  ಈ ವ್ಯಾಪಾರಿ ಲಿಂಬುಹಣ್ಣನ್ನು ಗೋದಾಮಿನಲ್ಲಿ ಇಟ್ಟಿದ್ದರು. ಆದರೆ ಅದನ್ನು ಕದಿಯಲಾಗಿದೆ. ಬರೀ ಲಿಂಬುವಷ್ಟೇ ಅಲ್ಲ, ಅವರು 40 ಕೆಜಿ ಈರುಳ್ಳಿ, 38 ಕೆಜಿ ಬೆಳ್ಳುಳ್ಳಿಯನ್ನೂ ಕದ್ದುಕೊಂಡು ಹೋಗಿದ್ದಾಗಿ ತರಕಾರಿ ವ್ಯಾಪಾರಿ ತಿಳಿಸಿದ್ದಾರೆ.

ಲಿಂಬು ಹಣ್ಣಿಗೆ ಮಾರುಕಟ್ಟೆಯಲ್ಲಿ ಸದ್ಯ ಕೆಜಿಗೆ 200 ರೂಪಾಯಿ ಇದೆ. ಇದೀಗ ಒಟ್ಟಾರೆ ಕದ್ದುಕೊಂಡು ಹೋಗಿರುವ ಲಿಂಬು ಬೆಲೆ ಸುಮಾರು 10 ಸಾವಿರ ರೂಪಾಯಿ ಎಂದು ತರಕಾರಿ ವ್ಯಾಪಾರಿ ತಿಳಿಸಿದ್ದಾರೆ. ಭಾನುವಾರ ಮಧ್ಯರಾತ್ರಿ ಕಳ್ಳರು ತಮ್ಮ ಗೋದಾಮಿಗೆ ಕನ್ನ ಹಾಕಿದ್ದಾಗಿಯೂ ಅವರು ಹೇಳಿದ್ದಾರೆ. ಅಂದಹಾಗೆ, ಈ ವ್ಯಾಪಾರಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಆದರೆ ಇಷ್ಟು ಪ್ರಮಾಣದ ಲಿಂಬು, ಈರುಳ್ಳಿ ಕಳವಾಗಿದ್ದು ಸ್ಥಳದಲ್ಲಿ ಬಹುದೊಡ್ಡ ಸುದ್ದಿಯಾಗಿದೆ.

ಲಿಂಬು, ಈರುಳ್ಳಿ ಮತ್ತು ಬೆಳ್ಳುಳ್ಳಿ ಕಳವಾಗಿರುವ ಬಗ್ಗೆ ನಮಗೆ ತರಕಾರಿ ವ್ಯಾಪಾರಿ ಮನೋಜ್​ ಕಶ್ಯಪ್​ ಎಂಬುವರು ಕರೆ ಮಾಡಿ ದೂರು ನೀಡಿದ್ದಾರೆ. ತಾವು ಅಂಗಡಿಯ ಸಮಯ ಮುಗಿದ ಬಳಿಕ ತರಕಾರಿಗಳನ್ನೆಲ್ಲ ಬಜರಿಯಾ ಸಬ್ಜಿ ಮಂಡಿಯ ಗೋದಾಮಿನಲ್ಲಿ ಇಟ್ಟಿದ್ದಾಗಿ ಅವರು ತಿಳಿಸಿದ್ದಾರೆ. ಅಲ್ಲಿಂದಲೇ ಅದನ್ನು ಕದಿಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ನಮಗೆ ಮನೋಜ್ ಕಶ್ಯಪ್​ ಫೋನ್​ ಮಾಡಿ ದೂರು ನೀಡಿದ್ದಷ್ಟೇ, ಇದುವರೆಗೂ ಅಧಿಕೃತವಾಗಿ ದೂರು ನೀಡಿಲ್ಲ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಬುಲ್ಡೋಜರ್ ದ್ವೇಷ, ಭಯೋತ್ಪಾದನೆಯನ್ನು ಹೊತ್ತಿದೆ: ರಾಹುಲ್ ಗಾಂಧಿ

ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ರಸ್ತೆ ಮೇಲೆ ಅಂಟಿಸಿದ್ದ ಪಾಕ್ ಬಾವುಟ ತೆಗೆಯಲು ಯತ್ನಿಸಿದ ವಿದ್ಯಾರ್ಥಿನಿ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
ಹಿಂದೂ ಕಾರ್ಯಕರ್ತ ಸುಹಾಸ್​ ಕೊಲೆ ಬಗ್ಗೆ ಎಡಿಜಿಪಿ ಹಿತೇಂದ್ರ ಮಹತ್ವದ ಹೇಳಿಕೆ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
60 ವರ್ಷದ ವ್ಯಕ್ತಿಯಿಂದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
ಇಂದಿನಿಂದ ಚಾರ್​ ಧಾಮ್ ಯಾತ್ರೆ ಆರಂಭ, ಬಾಗಿಲು ತೆರೆದ ಕೇದಾರನಾಥ ದೇವಾಲಯ
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily Devotional: ಅಂಗೈ ಬಣ್ಣ ಬೇರೆ ಬೇರೆಯಾಗಿದ್ದರೆ ಏನೇನು ಅರ್ಥ?
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
Daily horoscope: ಈ ರಾಶಿಯವರಿಗೆ ಇಂದು ಸಂತೋಷದ ದಿನವಾಗಿರುತ್ತದೆ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ: ಸ್ಫೋಟಕ ಅಂಶ ಬಹಿರಂಗ
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಬಜರಂಗದಳದ ಸುಹಾಸ್ ಶೆಟ್ಟಿ ಕೊಲೆ: ಹಂತಕರ ಸ್ಕೆಚ್​ ಬಿಚ್ಚಿಟ್ಟ ಕಮಿಷನರ್
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್