AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಳ್ಳತನಕ್ಕೆ ಹೋದಾಗ ಹಸಿವೆಯಾಗಿ ಕಿಚಡಿ ಮಾಡಿದ ಕಳ್ಳ: ಈಗ ಪೊಲೀಸರ ಅತಿಥಿ

ಕಳ್ಳ ಗುಹಾವಟಿಯ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ಮಾಡಲು ತೆರಳಿದ್ದನು. ಈ ವೇಳೆ ಆತನಿಗೆ ಹಸಿವೆಯಾಗಿದ್ದು, ಅದೇ ಮನೆಯಲ್ಲಿ ಕಚಡಿ ಮಾಡಲು ತಯಾರಿ ನಡೆಸಿದ್ದಾನೆ. ಈ ವೇಳೆ ಯಾರೂ ಇಲ್ಲದ ಮನೆಯ ಒಳಗೆ ಶಬ್ದವನ್ನು ಕೇಳಿ ಅಕ್ಕಪಕ್ಕದವರು ಪೊಲೀಸರಿಗೆ ಕರೆ ಮಾಹಿತಿ ನೀಡಿದ್ದಾರೆ.

ಕಳ್ಳತನಕ್ಕೆ ಹೋದಾಗ ಹಸಿವೆಯಾಗಿ ಕಿಚಡಿ ಮಾಡಿದ ಕಳ್ಳ: ಈಗ ಪೊಲೀಸರ ಅತಿಥಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jan 12, 2022 | 3:14 PM

Share

ಕೆಲವೊಮ್ಮೆ ಮಾಡಬೇಕೆಂದುಕೊಂಡ ಕೆಲಸ ಮಾಡದೆ ಬೇರೆಯಾವುದೋ ಕೆಲಸ ಮಾಡಿದರೆ ಆಗಬಾರದ್ದು ಆಗುತ್ತದೆ ಎನ್ನುತ್ತಾರೆ. ಅದಕ್ಕೆ ಯಾವ ಕೆಲಸ  ಮಾಡಬೇಕಾದರೂ ಅದರ ಮೇಲೆಯೇ ಗಮನವಿಡಬೇಕು ಎನ್ನುವುದು. ಇದೇನಪ್ಪಾ ಹೀಗೆಲ್ಲಾ ಹೇಳ್ತಾರಾ ಅಂದುಕೊಂಡವರು ಇಲ್ಲೊಬ್ಬ ಕಳ್ಳನ ಕತೆ ಕೇಳಿದರೆ ತಿಳಿಯುತ್ತದೆ ಯಾಕೆ ಮಾಡಬೇಕಾದ ಕೆಲಸದ ಕಡೆಗೆ ಗಮನ ಕೊಡಬೇಕು ಎನ್ನುವುದು. ಕಳ್ಳನೊಬ್ಬ ಮನೆಯೊಂದನ್ನು ಕಳ್ಳತನ ಮಾಡಲು ಹೋದಾಗ ಹಸಿವೆಯಾಗಿದೆ ಎಂದು ಕಿಚಡಿ ಮಾಡಲು ಹೋಗಿ ಪೊಲೀಸರ ಅತಿಥಿಯಾಗಿದ್ದಾನೆ. ಈ ಘಟನೆ ನಡೆದಿದರುವುದು ಅಸ್ಸಾಂ ನ ಗುಹಾವಟಿಯಲ್ಲಿ. ಘಟನೆಯ ಕುರಿತು ಅಸ್ಸಾಂ ಪೊಲೀಸರು  ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದು ಸಖತ್​ ವೈರಲ್​ ಆಗಿದೆ.

ಪೊಲೀಸರ ಪ್ರಕಾರ, ಕಳ್ಳ ಗುಹಾವಟಿಯ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಕಳ್ಳತನ ಮಾಡಲು ತೆರಳಿದ್ದನು. ಈ ವೇಳೆ ಆತನಿಗೆ ಹಸಿವೆಯಾಗಿದ್ದು, ಅದೇ ಮನೆಯಲ್ಲಿ ಕಿಚಡಿ ಮಾಡಲು ತಯಾರಿ ನಡೆಸಿದ್ದಾನೆ. ಈ ವೇಳೆ ಯಾರೂ ಇಲ್ಲದ ಮನೆಯ ಒಳಗೆ ಶಬ್ದವನ್ನು ಕೇಳಿ ಅಕ್ಕಪಕ್ಕದವರು ಪೊಲೀಸರಿಗೆ ಕರೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಸಿದ ಪೊಲೀಸರು ಕಳ್ಳನನ್ನು  ಬಂಧಿಸಿದ್ದಾರೆ. ಈ ಬಗ್ಗೆ ಅಸ್ಸಾಂ ಪೊಲೀಸರು  ಟ್ವಿಟರ್​ನಲ್ಲಿ ಹಂಚಿಕೊಂಡಿದ್ದು, ಕಳ್ಳತನದ ವೇಳೆ ಕಿಚಡಿ ಮಾಡುವುದು ನಿಮ್ಮ ಯೋಗಕ್ಷೇಮಕ್ಕೆ ಒಳ್ಳೆಯದಲ್ಲ ಎಂದು ತಮಾಷೆಯ ಕ್ಯಾಪ್ಷನ್​ ನೀಡಿದ್ದಾರೆ.

ಟ್ವಿಟರ್​ನಲ್ಲಿ ಪೋಸ್ಟ್​ ವೈರಲ್​ ಆಗಿದ್ದು, ಕಳ್ಳ ಬಹುಷಃ ಬೆಳಗ್ಗೆಯಿಂದ ಪ್ಲಾನ್​ ಮಾಡಿ ಊಟವನ್ನೇ ಮರೆತಿದ್ದ ಎಂದು ಬಳಕೆದಾರರೊಬ್ಬರು ಕಾಮೆಂಟ್ ಮಾಡಿದ್ದಾರೆ.  ಅಸ್ಸಾಂ ಪೊಲೀಸರ ಹಲವು ಟ್ವೀಟ್​ಗಳು, ವೈರಲ್​ ಪೋಸ್ಟ್​ಗಳು ಈ ಹಿಂದೆ ಸಾಕಷ್ಟು ಬಾರಿ ವೈರಲ್​ ಆಗಿತ್ತು.

ಇದನ್ನೂ ಓದಿ:

Viral Video: ಮಿನ್ನಲ್​ ಮುರಳಿ ಚಿತ್ರದ ಸೀನ್​ನಂತೆ ವಿಡಿಯೋ ಮಾಡಿ ಮದುವೆಗೆ ಆಮಂತ್ರಣ ನೀಡಿದ ಜೋಡಿ

Published On - 3:11 pm, Wed, 12 January 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ