AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral : ಜೆಮ್​ಶೆಡ್​ಪುರದಲ್ಲಿ ಹೀಗೊಬ್ಬ ‘ಆಧಾರ ಕಾರ್ಡ್​ ಗಣಪ್ಪ’

Aadhar Card Ganesh : ಶ್ರೀ ಗಣೇಶ, S/o ಮಹದೇವ, ಕೈಲಾಸ ಪರ್ವತ, ಮೇಲ್​ಮಹಡಿ ಹತ್ತಿರ, ಮಾನಸ ಸರೋವರ, ಕೈಲಾಸ ಪಿನ್‌ಕೋಡ್- 000001. ಮತ್ತು ಹುಟ್ಟಿದ ವರ್ಷ 01/01/600CE.

Viral : ಜೆಮ್​ಶೆಡ್​ಪುರದಲ್ಲಿ ಹೀಗೊಬ್ಬ ‘ಆಧಾರ ಕಾರ್ಡ್​ ಗಣಪ್ಪ’
ಆಧಾರ ಕಾರ್ಡ್​ ಗಣಪ್ಪ
TV9 Web
| Edited By: |

Updated on:Sep 02, 2022 | 11:34 AM

Share

Viral : ಬಗೆಬಗೆಯ ಥೀಮ್​ನಡಿ ಸಾರ್ವಜನಿಕವಾಗಿ ಗಣೇಶನನ್ನು ಕೂರಿಸಿ ಪೂಜಿಸುವ ಪರಿ ತಲೆತಲಾಂತರದಿಂದ ನಡೆದುಕೊಂಡು ಬಂದಿರುವಂಥದ್ದು ಗೊತ್ತೇ ಇದೆ. ಜೆಮ್​ಶೆಡ್​ಪುರದಲ್ಲಿರುವ ಈ ಗಣೇಶ ಜನರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದ್ದಾನೆ. ಕಾರಣ, ಆಧಾರ ಕಾರ್ಡ್​ ಮಾದರಿಯಲ್ಲಿ ಮಂಟಪದ ವಿನ್ಯಾಸದಲ್ಲಿ ಇವನನ್ನು ಕೂರಿಸಿದ್ದಾರೆ. 6ನೇ ಶತಮಾನದಲ್ಲಿ ಕೈಲಾಸದಲ್ಲಿರುವ ಗಣೇಶನ ವಿಳಾಸ ಮತ್ತು ಅವನ ಜನ್ಮದಿನಾಂಕವನ್ನು ಆಧಾರ್ ಕಾರ್ಡಿನ ಮಾದರಿಯಲ್ಲಿ ನಮೂದಿಸಿದ್ದಾರೆ. ಫೋಟೋ ಸ್ಥಳದಲ್ಲಿ ಗಣೇಶನ ವಿಗ್ರಹ ಇರಿಸಿದ್ದಾರೆ. ಪಕ್ಕದಲ್ಲಿರುವ ಬಾರ್ ಕೋಡ್​ ಸ್ಕ್ಯಾನ್ ಮಾಡಿದಾಗ ಗಣೇಶನ ಚಿತ್ರಗಳಿರುವ ಗೂಗಲ್​ ಲಿಂಕ್​ ಪರದೆ ತೆರೆದುಕೊಳ್ಳುತ್ತದೆ. ಅದರ ಮೇಲೆ ನಮೂದಿಸಲಾದ ವಿಳಾಸ ಹೀಗಿದೆ. ಶ್ರೀ ಗಣೇಶ, S/o ಮಹದೇವ, ಕೈಲಾಸ ಪರ್ವತ, ಮೇಲ್​ಮಹಡಿ ಹತ್ತಿರ, ಮಾನಸ ಸರೋವರ, ಕೈಲಾಸ ಪಿನ್‌ಕೋಡ್- 000001. ಮತ್ತು ಹುಟ್ಟಿದ ವರ್ಷ 01/01/600CE.

ಈ ವಿನ್ಯಾಸದ ಆಯೋಜಕ ಸರವ್ ಕುಮಾರ್, ‘ಕೊಲ್ಕೊತ್ತಾದಲ್ಲಿ ಫೇಸ್‌ಬುಕ್ ಥೀಮ್​ನಲ್ಲಿ ಗಣೇಶನನ್ನು ಕೂರಿಸಿದ್ದರು. ಅಲ್ಲಿಗೆ ಭೇಟಿ ನೀಡಿದ ನಂತರ ಆಧಾರ ಕಾರ್ಡ್​ ಥೀಮ್​ನಲ್ಲಿ ಯಾಕೆ ಮಾಡಬಾರದು? ಎಂಬ ಆಲೋಚನೆ ಬಂದಿತು. ದೇವರೂ ಆಧಾರ್ ಕಾರ್ಡ್ ಹೊಂದಲು ಸಾಧ್ಯವಾಗಿದೆಯೆಂದರೆ ನಮಗೂ ಸಾಧ್ಯವಾಗುತ್ತದೆ ಎಂದು ಜನಕ್ಕೆ ಮನವರಿಕೆ ಆಗಬೇಕು. ಈ ಮೂಲಕ ಎಲ್ಲರೂ ಬೇಗ ಆಧಾರ ಕಾರ್ಡ್​ ಪಡೆದುಕೊಳ್ಳಬೇಕು ಎನ್ನುವ ಸಂದೇಶವನ್ನು ಸಾರಲು ಪ್ರಯತ್ನಿಸುತ್ತಿದ್ದೇನೆ’ ಎನ್ನುತ್ತಾರೆ.

ಮತ್ತಷ್ಟು ಇಂಥ ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:26 am, Fri, 2 September 22

ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ