Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬರೋಬ್ಬರಿ 4ಕೋಟಿ ರೂ.ಗೆ ಹರಾಜಾದ ಈ ನಾಣ್ಯ; ಇದರ ವಿಶೇಷತೆ ಏನು?

ಅಮೆರಿಕದ ಗ್ರೇಟ್ ಕಲೆಕ್ಷನ್ ಹೆಸರಿನ ಸಂಸ್ಥೆಯೊಂದು ನಡೆಸಿದ ಹರಾಜಿನಲ್ಲಿ ಅಪರೂಪದ ನಾಣ್ಯವೊಂದನ್ನು ಸುಮಾರು 4.25 ಕೋಟಿ ರೂ.ಗೆ ಹರಾಜು ಮಾಡಲಾಗಿದೆ. ಈ ನಾಣ್ಯ 4 ಕೋಟಿಗೆ ಹರಾಜಾಗಲು ಕಾರಣವೇನು? ಏನಿದರ ವಿಶೇಷತೆ? ಸಂಪೂರ್ಣ ಮಾಹಿತಿ ಇಲ್ಲಿದೆ.

ಬರೋಬ್ಬರಿ 4ಕೋಟಿ ರೂ.ಗೆ ಹರಾಜಾದ ಈ ನಾಣ್ಯ; ಇದರ ವಿಶೇಷತೆ ಏನು?
Coin auctioned for Rs 4 crore
Follow us
ಅಕ್ಷತಾ ವರ್ಕಾಡಿ
|

Updated on:Nov 06, 2024 | 4:20 PM

ಅಮೆರಿಕದ ಗ್ರೇಟ್ ಕಲೆಕ್ಷನ್ ಹೆಸರಿನ ಸಂಸ್ಥೆಯೊಂದು ನಡೆಸಿದ ಹರಾಜಿನಲ್ಲಿ ಅಪರೂಪದ ನಾಣ್ಯವೊಂದು ಸುಮಾರು 4.25 ಕೋಟಿ ರೂ.ಗೆ ಹರಾಜಾಗಿದೆ. ಈ ಬಗ್ಗೆ ಕ್ಯಾಲಿಫೋರ್ನಿಯಾ ಗ್ರೇಟ್ ಕಲೆಕ್ಷನ್ಸ್ ನ ಅಧ್ಯಕ್ಷ ಇಯಾನ್ ರಸೆಲ್ ಮಾಹಿತಿ ನೀಡಿದ್ದು, ಸದ್ಯ ಒಂದು ನಾಣ್ಯ ಬರೋಬ್ಬರಿ 4ಕೋಟಿಗೆ ಹರಾಜಾಗಿರುವುದು ಎಲ್ಲೆಡೆ ಸದ್ದು ಮಾಡುತ್ತಿದೆ.

ಈ ನಾಣ್ಯವನ್ನು 1975 ರಲ್ಲಿ ತಯಾರಿಸಲಾಗಿದ್ದು, ಇದು 20ನೇ ಶತಮಾನದ ಅಪರೂಪದ ನಾಣ್ಯಗಳಲ್ಲೊಂದು. ಈ ನಾಣ್ಯ ಅಮೆರಿಕದ ಕಾಸಿನದು ಎಂದು ಹರಾಜು ಏಜೆನ್ಸಿ ಹೇಳಿದೆ. ಈ ನಾಣ್ಯದ ಮೇಲೆ ಅಮೆರಿಕದ ಅಧ್ಯಕ್ಷ ಫ್ರಾಂಕ್ಲಿನ್ ರೂಸ್ವೆಲ್ಟ್ ಅವರ ಚಿತ್ರವಿರುವುದನ್ನು ಕಾಣಬಹುದು. ಇದರ ಹೊರತಾಗಿ ಪ್ರತಿ ನಾಣ್ಯದ ಮೇಲೆ ಮಾಡಲಾಗುವ ‘ಎಸ್’ ಚಿಹ್ನೆಯನ್ನು ಈ ನಾಣ್ಯದಲ್ಲಿ ಮಾಡಲಾಗಿಲ್ಲ. ಇಡೀ ಪ್ರಪಂಚದಲ್ಲಿ ಈ ರೀತಿಯ ಎರಡು ನಾಣ್ಯಗಳು ಮಾತ್ರ ಇವೆ, ಅದಕ್ಕಾಗಿಯೇ ಈ ನಾಣ್ಯವು ತುಂಬಾ ಅಪರೂಪವಾಗಿದೆ.

ಇದನ್ನೂ ಓದಿ: ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಪ್ಲಾಟ್‌ಫಾರ್ಮ್‌ನಿಂದ ಹಳಿ ಮೇಲೆ ಬಿದ್ದ ಯುವತಿ!

ಗ್ರೇಟ್ ಕಲೆಕ್ಷನ್ ಹೆಸರಿನ ಹರಾಜು ಸಂಸ್ಥೆಯು ಈ ಅಪರೂಪದ ನಾಣ್ಯದ ಹರಾಜನ್ನು ಆನ್‌ಲೈನ್‌ನಲ್ಲಿ ನಡೆಸಿತು. ಹರಾಜಿನ ಮೊದಲು, ಈ ನಾಣ್ಯವು ಓಹಿಯೋದ ಮೂವರು ಸಹೋದರಿಯರ ಬಳಿ ಇತ್ತು. ಆದರೆ, ಅವರ ಗುರುತನ್ನು ಗೌಪ್ಯವಾಗಿ ಇರಿಸಲಾಗಿದೆ. 1978ರಲ್ಲಿ ಈ ನಾಣ್ಯಗಳಲ್ಲಿ ಒಂದನ್ನು 15 ಲಕ್ಷ ರೂ.ಗೆ ಮಾರಾಟ ಮಾಡಿತ್ತು.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:19 pm, Wed, 6 November 24

ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಭೂಮಾಪನ ಇಲಾಖೆಯಲ್ಲಾದ ಬದಲಾವಣೆಗಳ ಕ್ರೆಡಿಟ್ ಮುಖ್ಯಮಂತ್ರಿಗೆ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ಚುನಾವಣೆ ಹತ್ತಿರದಲ್ಲಿಲ್ಲ, ದಗಿಮಿಕ್ ಮಾಡ್ತಿಲ್ಲ; ಉಡುಪಿಯಲ್ಲಿ ವಿಜಯೇಂದ್ರ
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ನಗರಸಭೆ ಮತ್ತು ಜಿಲ್ಲಾಡಳಿತ ವಿರುದ್ಧ ಬೆಂಕಿಯುಗುಳಿದ ಯಾದಗಿರಿ ನಿವಾಸಿಗಳು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಲೈವ್​ನಲ್ಲೇ ಅಂಬಾಟಿ ರಾಯುಡು ಚಳಿ ಬಿಡಿಸಿದ ನವಜೋತ್ ಸಿಂಗ್ ಸಿಧು
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಸಿಕ್ಕ‌ಸಿಕ್ಕ ಮನೆಗಳಿಗೆ ನುಗ್ಗಿದ ಆಸಾಮಿ: ಮೊಬೈಲ್, ವಾಚ್ ಕಳ್ಳತನ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಧನ್ವೀರ್ ಜೊತೆ ಸಿನಿಮಾ ಮಾಡ್ತಾರೆ ದರ್ಶನ್; ಸೂಚನೆ ಕೊಟ್ಟ ದಾಸ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ
ಬಸನಗೌಡ ಯತ್ನಾಳ್ ಬಗ್ಗೆ ಮಾತಾಡಲು ಇಚ್ಛಿಸದ ವಿಜಯೇಂದ್ರ