AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಅಪ್ಪ ಅಮ್ಮನಿಲ್ಲದ ಮಕ್ಕಳಿಗೆ ಕೇಕ್​ ಉಚಿತ

Cake : ಉತ್ತರ ಪ್ರದೇಶದ ಸಿಹಿತಿನಿಸುಗಳ ಅಂಗಡಿಯೊಂದರಲ್ಲಿ ಅನಾಥ ಮಕ್ಕಳಿಗೆ ಉಚಿತವಾಗಿ ಕೇಕ್ ನೀಡಲಾಗುತ್ತದೆ ಎಂದು ವ್ಯಾಪಾರಿಯೊಬ್ಬರು ಕೇಕ್​ ಕೌಂಟರಿನ ಮೇಲೆ ಹೀಗೆ ಬರೆದು ಅಂಟಿಸಿದ್ದಾರೆ.

Viral Post: ಅಪ್ಪ ಅಮ್ಮನಿಲ್ಲದ ಮಕ್ಕಳಿಗೆ ಕೇಕ್​ ಉಚಿತ
ಫ್ರೀ ಫ್ರೀ ಫ್ರೀ
TV9 Web
| Edited By: ಶ್ರೀದೇವಿ ಕಳಸದ|

Updated on:Aug 12, 2022 | 4:56 PM

Share

Uttara Pradesh : ಉತ್ತರ ಪ್ರದೇಶದ ಸಿಹಿತಿಂಡಿಗಳ ಅಂಗಡಿಯಲ್ಲಿ 14 ವರ್ಷದೊಳಗಿನ ಅನಾಥ ಮಕ್ಕಳಿಗೆ ಉಚಿತ ಕೇಕ್ ನೀಡುತ್ತಿದೆ. ಅಂಗಡಿ ಮಾಲಿಕರ ಈ ಸಹಾನುಭೂತಿ ಮತ್ತು ಸಾಮಾಜಿಕ ಕಳಕಳಿಯನ್ನು ನೆಟ್ಟಿಗರು ಪ್ರಶಂಸಿಸಿದ್ದಾರೆ. ಕೇಕ್ ಕೌಂಟರಿಗೆ ಅಂಟಿಸಿದ ಫಲಕದ ಚಿತ್ರವು ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗಿದೆ. ಈ ಚಿತ್ರವನ್ನು ಐಎಎಸ್ ಅಧಿಕಾರಿ ಅವನೀಶ್ ಶರಣ್ ಹಂಚಿಕೊಂಡಿದ್ದಾರೆ. ಸುಮಾರು 13,000 ಲೈಕ್ಸ್​ ಮತ್ತು ಸಾಕಷ್ಟು ರೀಟ್ವೀಟ್​ ಗೆ ಒಳಪಟ್ಟಿದೆ. ಫಲಕದಲ್ಲಿ ಹೀಗಿದೆ, ‘ಉಚಿತ ಉಚಿತ ಉಚಿತ! ತಂದೆ ತಾಯಿ ಇಲ್ಲದ 14 ವರ್ಷದೊಳಗಿನ ಮಕ್ಕಳಿಗೆ ಈ ಕೇಕ್ ಉಚಿತ’. ಉತ್ತರ ಪ್ರದೇಶದ ದೇವರಿಯಾದಲ್ಲಿರುವ ಕನಕ್ ಸ್ವೀಟ್ಸ್​ ಅಂಗಡಿಯ ಚಿತ್ರ ಇದಾಗಿದೆ ಎಂದು ಅವನೀಶ್​ ನಂತರದ ಟ್ವೀಟ್​ನಲ್ಲಿ ಹೇಳಿದ್ದಾರೆ.

ವ್ಯಾಪಾರದೊಂದಿಗೆ ಅನುಕಂಪ, ಕಳಕಳಿ, ಪ್ರೀತಿಯನ್ನೂ ಅನೇಕ ವ್ಯಾಪಾರಿಗಳು ಬೆಳೆಸಿಕೊಂಡಿರುತ್ತಾರೆ ಎನ್ನುವುದನ್ನು ಇದು ಸೂಚಿಸುತ್ತದೆ. ಆದರೆ ಎಷ್ಟು ವರ್ಷಗಳ ತನಕ ಈ ಉಚಿತ ಕೇಕ್ ಹಂಚಿಕೆ ಸಾಗುತ್ತದೆಯೋ? ಈ ಅಂಗಡಿ ಮಾಲಿಕರು ಮತ್ತು ಅನಾಥ ಮಕ್ಕಳ ನಡುವೆ ಬಾಂಧವ್ಯ ಬೆಳೆದು ಏನಾದರೂ ಮಹತ್ತರ ಕಾರಣಕ್ಕೆ ಅದು ಕಾರಣವಾಗುತ್ತದೆಯೋ? ಹಾಗಾದರೆ ಒಳ್ಳೆಯದೇ.

ಇಂಥ ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 4:52 pm, Fri, 12 August 22

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!