AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Zero Wasting Wedding: ಕಬ್ಬಿನ ಜಲ್ಲೆಯ ಮಂಟಪ, ತೆಂಗಿನ ಗರಿಯ ಚಪ್ಪರ; ಹೀಗೊಂದು ಪರಿಸರ ಸ್ನೇಹಿ ಮದುವೆ

ಇತ್ತೀಚಿನ ದಿನಗಳಲ್ಲಂತೂ ಮದುವೆಗಳನ್ನು ಆಡಂಬರದಿಂದ ಮಾಡಿದ್ರೇನೇ ವಿಶೇಷ ಎಂದುಕೊಂಡವರಿದ್ದಾರೆ. ಇಂತಹ ದುಂದುವೆಚ್ಚದ ಮದುವೆಗಳ ನಡುವೆ ಇಲ್ಲೊಂದು ಮದುವೆ ಸರಳವಾಗಿ ನಡೆದು ವಿಶೇಷ ಎನಿಸಿಕೊಂಡಿದೆ. ಪರಿಸರ ಸ್ನೇಹಿ ವಸ್ತುಗಳನ್ನೇ ಬಳಸಿ ಕಡಿಮೆ ಖರ್ಚಿನಲ್ಲಿ ನಡೆದ ಈ ಮದುವೆಗೆ ನೆಟ್ಟಿಗರು ಭಾರಿ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

Zero Wasting Wedding: ಕಬ್ಬಿನ ಜಲ್ಲೆಯ ಮಂಟಪ, ತೆಂಗಿನ ಗರಿಯ ಚಪ್ಪರ; ಹೀಗೊಂದು ಪರಿಸರ ಸ್ನೇಹಿ ಮದುವೆ
ಮಾಲಾಶ್ರೀ ಅಂಚನ್​
| Edited By: |

Updated on: Jun 09, 2024 | 3:22 PM

Share

ಈಗಿನ ಕಾಲದಲ್ಲಂತೂ ಜನರು ಮದುವೆಗೆ ಹಣವನ್ನು ನೀರಿನಂತೆ ಖರ್ಚು ಮಾಡುತ್ತಾರೆ. ಕೆಲವರು ಡೆಸ್ಟಿನೇಷನ್‌ ವೆಡ್ಡಿಂಗ್‌ ಅಂತ ಲಕ್ಷಾಂತರ ರೂಪಾಯಿ ಖರ್ಚು ಮಾಡಿದರೆ, ಇನ್ನೂ ಕೆಲವರು ಅದ್ಧೂರಿ ಮದುವೆಯ ನೆಪದಲ್ಲಿ ಹಣವನ್ನೆಲ್ಲಾ ಪೋಲು ಮಾಡುತ್ತಾರೆ. ಇಂತಹವರ ಮಧ್ಯೆ ಇಲ್ಲೊಂದು ಜೋಡಿ ಸರಳವಾಗಿ ವಿವಾಹವಾಗುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್‌ ಆಗಿದೆ.

ಈ ಮದುವೆ ಕಾರ್ಯಕ್ರಮದಲ್ಲಿ ಅಲಂಕಾರದಿಂದ ಹಿಡಿದು ಆಹಾರ ಪಾನೀಯಗಳವರೆಗೆ ನೈಸರ್ಗಿಕ ವಸ್ತುಗಳನ್ನೇ ಬಳಸಲಾಗಿದೆ. ಇಲ್ಲಿ ಕಬ್ಬಿನ ಜಲ್ಲೆ ಮತ್ತು ಎಲೆಗಳನ್ನು ಬಳಸಿ ಮದುವೆ ಮಂಟಪವನ್ನು ನಿರ್ಮಿಸಿದ್ದಾರೆ. ನಂತರ ಈ ಕಬ್ಬನ್ನು ದನಗಳಿಗೆ ಮೇವು ಹಾಕಲಾಗಿದೆ. ಅದೇ ರೀತಿ ಚಪ್ಪರವನ್ನು ತೆಂಗಿನ ಗರಿಗಳನ್ನು ಬಳಸಿ ನಿರ್ಮಿಸಲಾಗಿದೆ. ಊಟಕ್ಕೆ ಬಾಳೆ ಎಲೆಗಳನ್ನು ಬಳಸಿದ್ದಾರೆ. ಹಾಗೂ ಅತಿಥಿಗಳಿಗೆ ರಿಟರ್ನ್‌ ಗಿಫ್ಟ್‌ ಆಗಿ ಸೆಣಬಿನ ಚೀಲವನ್ನು ನೀಡಿದ್ದಾರೆ. ಆಡಂಬರದ ಮದುವೆಗಳ ನಡುವೆ ಈ ಝೀರೋ ವೇಸ್ಟಿಂಗ್‌ ವೆಡ್ಡಿಂಗ್‌ ನೆಟ್ಟಿಗರ ಹೃದಯ ಗೆದ್ದಿದೆ.

ಈ ವಿಡಿಯೋವನ್ನು ಡಾ. ಪೂರ್ವಿ ಭಟ್‌ ಎಂಬವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ತಜ್ಞರು ಇದನ್ನು ಝೀರೋ ವೇಸ್ಟಿಂಗ್‌ ಮದುವೆ ಎಂದು ಪರಿಗಣಿಸುತ್ತಾರೆಯೇ ಅಥವಾ ಇಲ್ಲವೇ ಎಂದು ನನಗೆ ತಿಳಿದಿಲ್ಲ, ಆದರೆ ಈ ಕಾರ್ಯಕ್ರಮದಲ್ಲಿ ನಾವು ಯಾವುದೇ ಪ್ಲಾಸ್ಟಿಕ್‌ ಉತ್ಪನ್ನವನ್ನು ಬಳಸಿಲ್ಲ ಜೊತೆಗೆ ಪರಿಸರ ಹಾನಿಯನ್ನು ಕಡಿಮೆ ಮಾಡುವ ಎಲ್ಲಾ ಪ್ರಯತ್ನವನ್ನು ಮಾಡಿದ್ದೇವೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಸಿಗ್ನಲ್ ಜಂಪ್​; 4 ಪಲ್ಟಿ ಹೊಡೆದ ಕಾರು, ಭೀಕರ ಅಪಘಾತದ ವಿಡಿಯೋ ವೈರಲ್

ಒಂದು ವಾರಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 8.4 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದ್ದು, ಆಡಂಬರದ ಮದುವೆಗಳ ನಡುವೆ ಈ ಝೀರೋ ವೇಸ್ಟಿಂಗ್‌ ವೆಡ್ಡಿಂಗ್‌ ನೆಟ್ಟಿಗರ ಹೃದಯ ಗೆದ್ದಿದೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?