AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದು ಕಲಿಯುವ ಹಂಬಲ: ಉದ್ಯಮಿ ರವಿಕಾಂತ್ ಪಾಡ್‌ಕ್ಯಾಸ್ಟ್ ನೋಡಿಕೊಂಡು ಆಟೋ ಓಡಿಸಿದ ಚಾಲಕ

ಬೆಂಗಳೂರಿನ ಆಟೋ ಚಾಲಕರು ಒಂದಲ್ಲ ಒಂದು ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಲೇ ಇರುತ್ತಾರೆ. ಇದೀಗ ಆಟೋ ಚಾಲಕರೊಬ್ಬರು ಭಾರೀ ಸುದ್ದಿಯಾಗಿದ್ದಾರೆ. ಭಾರತೀಯ ಮೂಲದ ಉದ್ಯಮಿ ಮತ್ತು ಹೂಡಿಕೆದಾರ ನೇವಲ್ ರವಿಕಾಂತ್ ಅವರ ಪಾಡ್‌ಕ್ಯಾಸ್ಟ್​​​​ನ್ನು ಆಟೋದಲ್ಲಿ ಚಿಕ್ಕ ಪರದೆಯಲ್ಲಿ ನೋಡಿಕೊಂಡು ಚಾಲನೆ ಮಾಡಿರುವುದೇ ಸುದ್ದಿಯಲ್ಲಿರಲು ಮೂಲ ಕಾರಣ. ಇದೀಗ ಈ ಪೋಸ್ಟ್​​​​ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರ ಗಮನ ಸೆಳೆದಿದೆ.

Video: ಇದು ಕಲಿಯುವ ಹಂಬಲ: ಉದ್ಯಮಿ ರವಿಕಾಂತ್ ಪಾಡ್‌ಕ್ಯಾಸ್ಟ್ ನೋಡಿಕೊಂಡು ಆಟೋ ಓಡಿಸಿದ ಚಾಲಕ
ವೈರಲ್​​ ಪೋಸ್ಟ್​
ಸಾಯಿನಂದಾ
|

Updated on: Aug 04, 2025 | 6:06 PM

Share

ಬೆಂಗಳೂರು ಆಟೋ ಚಾಲಕರು (auto rickshaw driver) ಒಂದಲ್ಲ ಒಂದು ವಿಚಾರವಾಗಿ ಸುದಿಯಲ್ಲಿರುತ್ತಾರೆ. ಒಟ್ಟಿನಲ್ಲಿ ಬೆಂಗಳೂರಿನ ಆಟೋ ಚಾಲಕರು ವೈರಲ್​ ಆಗುವುದು ಹೊಸದೇನಲ್ಲ. ಇದೀಗ ಬೆಂಗಳೂರಿನ ಆಟೋ ರಿಕ್ಷಾ ಚಾಲಕನೊಬ್ಬರು ಭಾರತೀಯ ಮೂಲದ ಉದ್ಯಮಿ ಮತ್ತು ಹೂಡಿಕೆದಾರ ನೇವಲ್ ರವಿಕಾಂತ್ (Naval Ravikant) ಅವರ ಪಾಡ್‌ಕ್ಯಾಸ್ಟ್‌ನ್ನು ಸಂಚಾರದ ವೇಳೆ ವೀಕ್ಷಿಸುತ್ತಿರುವ ಪೋಸ್ಟ್​​ ವೈರಲ್​​ ಆಗಿದೆ. ಈ ಪೋಸ್ಟ್​​ ನೋಡಿ ಅನೇಕರು ಸಾಮಾಜಿಕ ಜಾಲತಾಣ ಬಳಕೆದಾರರೂ ಇದು ಬೆಂಗಳೂರು ಎಂದು ಹೇಳಿದ್ದಾರೆ. ಈ ಪೋಸ್ಟ್​​ನ್ನು ಎಕ್ಸ್​​​​ ಖಾತೆಯಲ್ಲಿ ಪ್ರಿಯಾಂಶು ತನ್ವರ್ ಎಂಬುವವರು ಹಂಚಿಕೊಂಡಿದ್ದಾರೆ. ನಾನು ಸಂಜೆ ಆಫೀಸ್​​​ನಿಂದ ಮನೆಗೆ ಬರುವಾಗ ತುಂಬಾ ತಡವಾಗಿತ್ತು. ಈ ವೇಳೆ ಒಂದು ಆಟೋ ಬುಕ್​​ ಮಾಡಿದೆ. ಈ ಆಟೋದಲ್ಲಿ ರವಿಕಾಂತ್ ಅವರ ಪಾಡ್‌ಕ್ಯಾಸ್ಟ್​​ನ್ನು ತಮ್ಮ ಆಟೋದಲ್ಲಿದ್ದ ಚಿಕ್ಕ ಪರದೆಯಲ್ಲಿ ಪ್ಲೇ ಮಾಡಿದ್ದರು ಎಂದು ಹೇಳಿಕೊಂಡಿದ್ದಾರೆ.

ಈ ಪೋಸ್ಟ್​​ ಹಂಚಿಕೊಳ್ಳುವುದರ ಜತೆಗೆ ಹೀಗೆ ಬರೆದುಕೊಂಡಿದ್ದಾರೆ “ಬೆಂಗಳೂರಿನಲ್ಲಿ ಇದಕ್ಕಿಂತ ಹೆಚ್ಚಿನ ಬೆಳವಣಿಗೆ ಏನು ಬೇಕು”. ಈ ಪೋಸ್ಟ್ ಅನೇಕರ ಗಮನ ಸೆಳೆದಿದೆ. ಆಟೋ ಚಾಲಕ ಬ್ಯುಸಿನೆಸ್ ಬಗ್ಗೆ ತಿಳಿದುಕೊಳ್ಳಬೇಕು ಎಂಬ ಆಸಕ್ತಿಯ ಬಗ್ಗೆ ಕಾಮೆಂಟ್​​ ಮಾಡಿದ್ದಾರೆ. ಉದ್ಯಮಶೀಲತೆ ಹಾಗೂ ಆಟೋದಲ್ಲಿ ಒಂದು ಕ್ಷಣವೂ ವ್ಯರ್ಥ ಮಾಡದೇ ಇದನ್ನು ತಾಳ್ಮೆಯಿಂದ ಕೇಳುತ್ತಿರುವುದು ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ನೀವು ಆಟೋ ರಿಕ್ಷಾ ಓಡಿಸುವಾಗ ನನ್ನ GOAT ನೇವಲ್ ಅನ್ನು ಕೇಳುತ್ತೀರಿ ಎಂಬುದು ಸ್ಪಷ್ಟ” ಎಂದು ಒಬ್ಬ ಬಳಕೆದಾರರು ಕಾಮೆಂಟ್ ಮಾಡಿದ್ದಾರೆ. ಬೆಂಗಳೂರು ಟ್ರಾಫಿಕ್‌ನಲ್ಲಿ ನ್ಯಾವಿಗೇಟ್ ಮಾಡುವಾಗ ಪಾಡ್‌ಕಾಸ್ಟ್‌ಗಳನ್ನು ಆಲಿಸುವುದು, ಗರಿಷ್ಠ ಟ್ರಾಫಿಕ್‌ನಲ್ಲಿ ಗರಿಷ್ಠ ಉತ್ಪಾದಕತೆ ಎಂದು ಮತ್ತೊಬ್ಬ ಬಳಕೆದಾರ ಹೇಳಿದ್ದಾರೆ.

ಇದನ್ನೂ ಓದಿ
Image
ಮಾಧುರಿಗಾಗಿ ಮಿಡಿದ ಕರ್ನಾಟಕದ ಜೈನ ಸಮುದಾಯ, ಜಿಯೋಗೆ ಗುಡ್​​ಬೈ ಹೇಳಿದ ಜನ
Image
ದೈಹಿಕ ನ್ಯೂನತೆ ಮರೆತು ಖುಷಿಯಿಂದ ಚೆಂಡಾಟ ಆಡಿದ ಆನೆಗಳು
Image
ಗೇಲಿ ಮಾಡಿದ ಸಂಬಂಧಿಕರಿಗೆ ತಕ್ಕ ಉತ್ತರ ನೀಡಿದ ಯುವಕ, ಏನ್‌ ಮಾಡಿದ ನೋಡಿ
Image
ಬೆಂಗಳೂರು ಟ್ರಿಪ್ ಮುಗಿಸಿ ಹೋಗುವಾಗ ಭಾವುಕಳಾದ ವಿದೇಶಿ ಮಹಿಳೆ

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ: Video: ಹಲ್ಲಿಯನ್ನು ಸಲೀಸಾಗಿ ಬರಿಗೈಯಲ್ಲಿ ಹಿಡಿದ ಪುಟಾಣಿ ತಂದೆ ಹತ್ರ ಏನ್ ಹೇಳಿದ್ಲು ನೋಡಿ

ಬೌದ್ಧಿಕ ಕುತೂಹಲ ಮತ್ತು ದೈನಂದಿನ ಅವ್ಯವಸ್ಥೆ ನಡುವೆ ತಾನು ಕಲಿಯಬೇಕು ಎಂಬ ಉದ್ದೇಶ ಒಳ್ಳೆಯದು ಎಂದು ಮತ್ತೊಬ್ಬ ಬಳಕೆದಾರ ಹೇಳಿದ್ದಾರೆ. ನಾನು ಆಟೋದಲ್ಲಿ ಹೋಗುವಾಗ ಇಂತಹ ವಿಚಾರವನ್ನು ಗಮನಿಸಲೇ ಇಲ್ಲ. ಇದು ಒಳ್ಳೆಯ ಅಭ್ಯಾಸ ಎಂದು ಮತ್ತೊಬ್ಬ ಬಳಕೆದಾರ ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ ಈ ವಿಚಾರದಲ್ಲಿ ಆ ಚಾಲಕನ ಕುಟುಂಬ ತುಂಬಾ ಗೌರವವನ್ನು ಅವರಿಗೆ ನೀಡುತ್ತದೆ ಎಂದು ಕಾಮೆಂಟ್‌ ಮಾಡಿ ತಿಳಿಸಿದ್ದಾರೆ.

ವೈರಲ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!