AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಹೇಗಿದೆ ನೋಡಿ 100 ಅಡಿ ಉದ್ದದ ಅದ್ಧೂರಿ ಮದುವೆ ಚಪ್ಪರ…

ಮದುವೆ, ನಿಶ್ಚಿತಾರ್ಥ, ಗೃಹಪ್ರವೇಶ ಹೀಗೆ ಯಾವುದೇ ಶುಭ ಸಮಾರಂಭ ಇದ್ದರೂ ಮನೆಯ ಮುಂದೆ ಹಸಿರು ತೆಂಗಿನ ಗರಿಯ ಚಪ್ಪರ ಹಾಕಿದರೆ ಸಾಕು ಸಮಾರಂಭಕ್ಕೊಂದು ಕಳೆ ಬರುತ್ತದೆ. ಸಾಮಾನ್ಯವಾಗಿ ಹೆಚ್ಚಿನರು ಮದುವೆ ಸಮಾರಂಭಗಳಲ್ಲಿ ಅಷ್ಟೇನೂ ಆಡಂಬರವಿಲ್ಲದೆ ಸರಳವಾಗಿರುವಂತಹ ಹಸಿರು ತೆಂಗಿನ ಗರಿಗಳ ಚಪ್ಪರವನ್ನು ತಮ್ಮ ಮನೆ ಮುಂದೆ ಹಾಕ್ತಾರೆ. ಆದ್ರೆ ನಮ್ಮ ಬೆಂಗಳೂರಿನಲ್ಲೊಂದು ಮದುವೆ ಮನೆ ಮುಂದೆ ಬರೋಬ್ಬರಿ ನೂರು ಅಡಿ ಉದ್ದದ ಕಲಾತ್ಮಕವಾಗಿರುವಂತಹ ಮದುವೆ ಚಪ್ಪರವನ್ನು ಹಾಕಲಾಗಿದ್ದು, ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದೆ.

Viral Video: ಹೇಗಿದೆ ನೋಡಿ 100 ಅಡಿ ಉದ್ದದ ಅದ್ಧೂರಿ ಮದುವೆ ಚಪ್ಪರ…
ಮಾಲಾಶ್ರೀ ಅಂಚನ್​
| Edited By: |

Updated on: Mar 17, 2024 | 7:04 PM

Share

ಮದುವೆ, ಗೃಹ ಪ್ರವೇಶ ಹೀಗೆ ಯಾವುದೇ ಸಮಾರಂಭವಿರಲಿ, ಮನೆಯ ಮುಂದೆ ಹಸಿರು ತೆಂಗಿನ ಗರಿಯ ಚಪ್ಪರ ಹಾಕಿದ್ರೆ ಸಾಕು ಆ ಸಮಾರಂಭಕ್ಕೊಂದು ಕಳೆ ಬರುತ್ತದೆ. ಅದರಲ್ಲೂ ಮದುವೆ ಮನೆಗಳಲ್ಲಿ ಚಪ್ಪರವು ಪ್ರಮುಖ ಪಾತ್ರ ವಹಿಸುತ್ತದೆ. ಸಂಪ್ರದಾಯದ ಭಾಗವಾಗಿ ಮನೆಯ ಮುಂಭಾಗದಲ್ಲಿ ಚಪ್ಪರವನ್ನು ಹಾಕಲಾಗುತ್ತದೆ. ಈ ಚಪ್ಪರವನ್ನು ಹಸಿರು ತೆಂಗಿನ ಗರಿಗಳಿಂದ ನಿರ್ಮಿಸಲಾಗುತ್ತದೆ. ಮತ್ತು ಈ ಚಪ್ಪರವನ್ನು ಕೂಡಾ ಮದುವೆ ಭಾಗವಾಗಿ ಪೂಜಿಸಲಾಗುತ್ತದೆ. ಚಪ್ಪರಕ್ಕೆ ಅರಶಿನ, ಕುಂಕುಮವನ್ನು ಹಚ್ಚಿ ಹೂವನ್ನು ಹಾಕಿ ಧೂಪ, ದೀಪವನ್ನು ಬೆಳಗುವ ಮೂಲಕ ಚಪ್ಪರ ಪೂಜೆಯನ್ನು ಸಹ ಮಾಡಲಾಗುತ್ತದೆ. ಹೀಗೆ ಮದುವೆ ಮನೆಯಲ್ಲಿ ಮಾಡುವ ಚಪ್ಪರ ಪೂಜೆಯು ಶುಭ ಸಮಾರಂಭದ ಆರಂಭವನ್ನು ಸೂಚಿಸುತ್ತದೆ. ಕೆಲವರು ಸರಳವಾಗಿ ಚಪ್ಪರ ಹಾಕಿದರೆ, ಇನ್ನೂ ಕೆಲವರು ತಮ್ಮ ಅನುಕೂಲಕ್ಕೆ ಅನುಗುಣವಾಗಿ ಅದ್ಧೂರಿ ಚಪ್ಪರ ಹಾಕಿಸ್ತಾರೆ. ಅದೇ ರೀತಿ ಇಲ್ಲೊಂದು ಮನೆಯಲ್ಲಿ ಬರೋಬ್ಬರಿ ನೂರು ಅಡಿ ಉದ್ದದ ಮದುವೆ ಚಪ್ಪರವನ್ನು ಹಾಕಲಾಗಿದೆ. ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ನಮ್ಮ ಬೆಂಗಳೂರಿನಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ಮದುವೆ ಮನೆಯ ಮುಂದೆ ಈ ನೂರು ಅಡಿ ಉದ್ದದ ಚಪ್ಪರವನ್ನು ಹಾಕಲಾಗಿದೆ. ಈ ವಿಡಿಯೋವನ್ನು ಕಲಾತ್ಮಕವಾಗಿರುವಂತಹ ಚಪ್ಪರ ಹಾಕುವುದರಲ್ಲಿ ನೈಪುಣ್ಯತೆಯನ್ನು ಹೊಂದಿರುವಂತಹ SLV ಈವೆಂಟ್ (@slv_events_plnners) ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, “ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ 100 ಅಡಿ ಉದ್ದವಿರುವ ಮದುವೆ ಚಪ್ಪರ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್ ವಿಡಿಯೋದಲ್ಲಿ ಎಸ್.ಎಲ್.ವಿ ಈವೆಂಟ್ ಅವರು ಬೆಂಗಳೂರಿನ ಮದುವೆ ಮನೆಯೊಂದರಲ್ಲಿ ಬಹಳ ಸೃಜನಾತ್ಮಕವಾಗಿ ಹಸಿರು ತೆಂಗಿನ ಗರಿಗಳಿಂದ 100 ಅಡಿ ಉದ್ದದ ಮದುವೆ ಚಪ್ಪರವನ್ನು ನಿರ್ಮಿಸಿರುವಂತಹ ಅದ್ಭುತ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ನಾಲ್ಕು ಇಂಚಿನ ಬಾಲದೊಂದಿಗೆ ಜನಿಸಿದ ಮಗು; ಬೆರಗಾದ ವೈದ್ಯ ಲೋಕ 

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ಒಂದುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಹಿಂದಿನ ಕಾಲದಲ್ಲಿ ಹಳ್ಳಿ ಕಡೆಗಳಲ್ಲಿ 300 ಅಡಿ, 500 ಅಡಿ ಉದ್ದದ ಚಪ್ಪರವನ್ನು ಹಾಕಿದ್ದೂ ಇದೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಿಮ್ಮ ಈ ವರ್ಕ್ ನಿಜವಾಗಿಯೂ ಅದ್ಭುತವಾಗಿದೆʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೂ ಅನೇಕರು ಬಹಳ ಸುಂದರವಾಗಿದೆ ಎಂದು ಹೊಗಳಿಕೆಯ ಮಾತುಗಳನ್ನಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ