AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವೈರಲ್​​ ಆಗುತ್ತಿದೆ ಎದೆ ಝಲ್ ಎನಿಸುವ ಕಾರು ಅಪಘಾತ 

ಮಳೆ ಸುರಿಯುವ ಸಂದರ್ಭಗಳಲ್ಲಿ  ರಸ್ತೆಗಳಲ್ಲಿ ವಾಹನ ಚಲಾಯಿಸುವಾಗ ಬಹಳ ಜಾಗರೂಕರಾಗಿರಬೇಕು. ಏಕೆಂದ್ರೆ ರಸ್ತೆ ಮೇಲೆ ಹರಿಯುತ್ತಿರುವ ಮಳೆ ನೀರಿನಿಂದ ವಾಹನಗಳು ಸ್ಕಿಡ್ ಆಗಿ ಅಪಘಾತಗಳು ಸಂಭವಿಸುತ್ತದೆ. ಅದೇ ರೀತಿ ಮೊನ್ನೆ ಸುರಿದ  ದಿಢೀರ್ ಮಳೆಯಿಂದಾಗಿ  ಕೊಡಗಿನ ಬೋಯಿಕೇರಿ ತಿರುವಿನಲ್ಲಿ  ವೇಗವಾಗಿ ಬರುತ್ತಿದ್ದ ಮಾರುತಿ 800 ಕಾರ್ ಸ್ಕಿಡ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಕಾರು  ನೇರವಾಗಿ ಪಕ್ಕದ ಸಣ್ಣ ಕಂದಕ್ಕೆ  ಉರುಳಿಬಿದ್ದಿದೆ. ಈ  ರಸ್ತೆ ಅಪಘಾತ ಕುರಿತ ವಿಡಿಯೋ ಇದೀಗ  ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Viral Video: ವೈರಲ್​​ ಆಗುತ್ತಿದೆ ಎದೆ ಝಲ್ ಎನಿಸುವ ಕಾರು ಅಪಘಾತ 
ಮಾಲಾಶ್ರೀ ಅಂಚನ್​
| Edited By: |

Updated on: Jan 06, 2024 | 1:16 PM

Share

ವಿಶೇಷವಾಗಿ ಮಳೆಯ ಸಂದರ್ಭದಲ್ಲಿ ವಾಹನ ಚಲಾಯಿಸುವಾಗ ಪ್ರತಿಯೊಂದು ಸಣ್ಣ ವಿಷಯಕ್ಕೂ ವಿಶೇಷ ಗಮನ ನೀಡಬೇಕಾಗುತ್ತದೆ. ಏಕೆಂದ್ರೆ  ಮಳೆಯಿಂದಾಗಿ  ರಸ್ತೆ ಗುಂಡಿ, ಗೋಚರದ ಕೊರತೆ, ಜಾರು ಮೇಲ್ಮೈಗಳ  ಕಾರಣದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಗಳು ಸಂಭವಿಸುತ್ತವೆ. ಇದೇ ಕಾರಣಕ್ಕೆ ಮಳೆಯ ಸಂದರ್ಭಗಳಲ್ಲಿ ರಸ್ತೆಗಳಲ್ಲಿ ನಿಧಾನವಾಗಿ ವಾಹನಗಳನ್ನು ಚಲಾಯಿಸಬೇಕು ಹಾಗೂ ವಾಹನ ಚಲಾಯಿಸುವಾಗ ಬಹಳ ಜಾಗರೂಕರಾಗಿರಬೇಕು. ಇದೇ ರೀತಿ ಮೊನ್ನೆ  ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ ದಿಢೀರ್ ಮಳೆಯಿಂದಾಗಿ ಕೊಡಗಿನ ಬೋಯಿಕೇರಿ ತಿರುವಿನಲ್ಲಿ ವೇಗವಾಗಿ ಬರುತ್ತಿದ್ದಂತಹ ಮಾರುತಿ 800 ಕಾರು ಸ್ಕಿಡ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ನೇರವಾಗಿ ಪಕ್ಕದ ಸಣ್ಣ ಕಂದಕಕ್ಕೆ  ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.  ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

@kodaguConnect ಎಂಬ X ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಮೊನ್ನೆ ಸುರಿದ ದಿಢೀರ್ ಮಳೆಯಿಂದಾಗಿ ಕೊಡಗಿನ ಬೋಯಿಕೇರಿ ತಿರುವಿನ ರಸ್ತೆಯಲ್ಲಿ ವಾಹನಗಳು ನಿಧಾನಕ್ಕೆ ಹೋಗುತ್ತಿದ್ದ ವೇಳೆಯಲ್ಲಿ ಮುಂದೆಯಿಂದ ವೇಗವಾಗಿ ಬಂದಂತಹ ಮಾರುತಿ 800 ಕಾರು ಸ್ಕಿಡ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಕ್ಕದ ಸಣ್ಣ ಕಂದಕ್ಕೆ ಹೋಗಿ ಬೀಳುವಂತಹ ಭೀಕರ  ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ನಮ್ಮ ಕೊಡಗು ಪ್ರವಾಸಿ ತಾಣವೇ ಹೊರತು, ಕಸದ ತೊಟ್ಟಿಯಲ್ಲ, ಪ್ರವಾಸಿಗರಿಗೆ ಚಳಿ ಬಿಡಿಸಿದ ಯುವಕ 

ವಿಡಿಯೋ ಇಲ್ಲಿದೆ:

ಜನವರಿ 04 ರಂದು ಹಂಚಿಕೊಳ್ಳಲಾದ ಈ ವಿಡಿಯೋಗೆ ಹಲವಾರು ಕಮೆಂಟ್ಸ್ಗಳು ಹರಿದು ಬಂದಿವೆ. ಒಬ್ಬ ಬಳಕೆದಾರರು ʼವಾಹನವನ್ನು ವೇಗವಾಗಿ ಚಲಾಯಿಸಿದ ಪರಿಣಾಮ ಕಾರು ಸ್ಕಿಡ್ ಆಗಿದೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇಂತಹ ತಿರುವಿನ ಪ್ರದೇಶಗಳಲ್ಲಿ ನಿಧಾನವಾಗಿ ಬಹಳ ಜಾಗರೂಕತೆಯಿಂದ ವಾಹನ ಚಲಾಯಿಸಿʼ ಎಂದು ಸಲಹೆ ನೀಡಿದ್ದಾರೆ.  ಇನ್ನೂ ಅನೇಕರು ಮಳೆಯ ಸಂದರ್ಭದಲ್ಲಿ ಇಷ್ಟು ವೇಗವಾಗಿ ವಾಹನ ಚಲಾಯಿಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ