AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವೈರಲ್​​ ಆಗುತ್ತಿದೆ ಎದೆ ಝಲ್ ಎನಿಸುವ ಕಾರು ಅಪಘಾತ 

ಮಳೆ ಸುರಿಯುವ ಸಂದರ್ಭಗಳಲ್ಲಿ  ರಸ್ತೆಗಳಲ್ಲಿ ವಾಹನ ಚಲಾಯಿಸುವಾಗ ಬಹಳ ಜಾಗರೂಕರಾಗಿರಬೇಕು. ಏಕೆಂದ್ರೆ ರಸ್ತೆ ಮೇಲೆ ಹರಿಯುತ್ತಿರುವ ಮಳೆ ನೀರಿನಿಂದ ವಾಹನಗಳು ಸ್ಕಿಡ್ ಆಗಿ ಅಪಘಾತಗಳು ಸಂಭವಿಸುತ್ತದೆ. ಅದೇ ರೀತಿ ಮೊನ್ನೆ ಸುರಿದ  ದಿಢೀರ್ ಮಳೆಯಿಂದಾಗಿ  ಕೊಡಗಿನ ಬೋಯಿಕೇರಿ ತಿರುವಿನಲ್ಲಿ  ವೇಗವಾಗಿ ಬರುತ್ತಿದ್ದ ಮಾರುತಿ 800 ಕಾರ್ ಸ್ಕಿಡ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಕಾರು  ನೇರವಾಗಿ ಪಕ್ಕದ ಸಣ್ಣ ಕಂದಕ್ಕೆ  ಉರುಳಿಬಿದ್ದಿದೆ. ಈ  ರಸ್ತೆ ಅಪಘಾತ ಕುರಿತ ವಿಡಿಯೋ ಇದೀಗ  ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Viral Video: ವೈರಲ್​​ ಆಗುತ್ತಿದೆ ಎದೆ ಝಲ್ ಎನಿಸುವ ಕಾರು ಅಪಘಾತ 
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 06, 2024 | 1:16 PM

ವಿಶೇಷವಾಗಿ ಮಳೆಯ ಸಂದರ್ಭದಲ್ಲಿ ವಾಹನ ಚಲಾಯಿಸುವಾಗ ಪ್ರತಿಯೊಂದು ಸಣ್ಣ ವಿಷಯಕ್ಕೂ ವಿಶೇಷ ಗಮನ ನೀಡಬೇಕಾಗುತ್ತದೆ. ಏಕೆಂದ್ರೆ  ಮಳೆಯಿಂದಾಗಿ  ರಸ್ತೆ ಗುಂಡಿ, ಗೋಚರದ ಕೊರತೆ, ಜಾರು ಮೇಲ್ಮೈಗಳ  ಕಾರಣದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಗಳು ಸಂಭವಿಸುತ್ತವೆ. ಇದೇ ಕಾರಣಕ್ಕೆ ಮಳೆಯ ಸಂದರ್ಭಗಳಲ್ಲಿ ರಸ್ತೆಗಳಲ್ಲಿ ನಿಧಾನವಾಗಿ ವಾಹನಗಳನ್ನು ಚಲಾಯಿಸಬೇಕು ಹಾಗೂ ವಾಹನ ಚಲಾಯಿಸುವಾಗ ಬಹಳ ಜಾಗರೂಕರಾಗಿರಬೇಕು. ಇದೇ ರೀತಿ ಮೊನ್ನೆ  ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ ದಿಢೀರ್ ಮಳೆಯಿಂದಾಗಿ ಕೊಡಗಿನ ಬೋಯಿಕೇರಿ ತಿರುವಿನಲ್ಲಿ ವೇಗವಾಗಿ ಬರುತ್ತಿದ್ದಂತಹ ಮಾರುತಿ 800 ಕಾರು ಸ್ಕಿಡ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ನೇರವಾಗಿ ಪಕ್ಕದ ಸಣ್ಣ ಕಂದಕಕ್ಕೆ  ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.  ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

@kodaguConnect ಎಂಬ X ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಮೊನ್ನೆ ಸುರಿದ ದಿಢೀರ್ ಮಳೆಯಿಂದಾಗಿ ಕೊಡಗಿನ ಬೋಯಿಕೇರಿ ತಿರುವಿನ ರಸ್ತೆಯಲ್ಲಿ ವಾಹನಗಳು ನಿಧಾನಕ್ಕೆ ಹೋಗುತ್ತಿದ್ದ ವೇಳೆಯಲ್ಲಿ ಮುಂದೆಯಿಂದ ವೇಗವಾಗಿ ಬಂದಂತಹ ಮಾರುತಿ 800 ಕಾರು ಸ್ಕಿಡ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಕ್ಕದ ಸಣ್ಣ ಕಂದಕ್ಕೆ ಹೋಗಿ ಬೀಳುವಂತಹ ಭೀಕರ  ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ನಮ್ಮ ಕೊಡಗು ಪ್ರವಾಸಿ ತಾಣವೇ ಹೊರತು, ಕಸದ ತೊಟ್ಟಿಯಲ್ಲ, ಪ್ರವಾಸಿಗರಿಗೆ ಚಳಿ ಬಿಡಿಸಿದ ಯುವಕ 

ವಿಡಿಯೋ ಇಲ್ಲಿದೆ:

ಜನವರಿ 04 ರಂದು ಹಂಚಿಕೊಳ್ಳಲಾದ ಈ ವಿಡಿಯೋಗೆ ಹಲವಾರು ಕಮೆಂಟ್ಸ್ಗಳು ಹರಿದು ಬಂದಿವೆ. ಒಬ್ಬ ಬಳಕೆದಾರರು ʼವಾಹನವನ್ನು ವೇಗವಾಗಿ ಚಲಾಯಿಸಿದ ಪರಿಣಾಮ ಕಾರು ಸ್ಕಿಡ್ ಆಗಿದೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇಂತಹ ತಿರುವಿನ ಪ್ರದೇಶಗಳಲ್ಲಿ ನಿಧಾನವಾಗಿ ಬಹಳ ಜಾಗರೂಕತೆಯಿಂದ ವಾಹನ ಚಲಾಯಿಸಿʼ ಎಂದು ಸಲಹೆ ನೀಡಿದ್ದಾರೆ.  ಇನ್ನೂ ಅನೇಕರು ಮಳೆಯ ಸಂದರ್ಭದಲ್ಲಿ ಇಷ್ಟು ವೇಗವಾಗಿ ವಾಹನ ಚಲಾಯಿಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ