AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ವೈರಲ್​​ ಆಗುತ್ತಿದೆ ಎದೆ ಝಲ್ ಎನಿಸುವ ಕಾರು ಅಪಘಾತ 

ಮಳೆ ಸುರಿಯುವ ಸಂದರ್ಭಗಳಲ್ಲಿ  ರಸ್ತೆಗಳಲ್ಲಿ ವಾಹನ ಚಲಾಯಿಸುವಾಗ ಬಹಳ ಜಾಗರೂಕರಾಗಿರಬೇಕು. ಏಕೆಂದ್ರೆ ರಸ್ತೆ ಮೇಲೆ ಹರಿಯುತ್ತಿರುವ ಮಳೆ ನೀರಿನಿಂದ ವಾಹನಗಳು ಸ್ಕಿಡ್ ಆಗಿ ಅಪಘಾತಗಳು ಸಂಭವಿಸುತ್ತದೆ. ಅದೇ ರೀತಿ ಮೊನ್ನೆ ಸುರಿದ  ದಿಢೀರ್ ಮಳೆಯಿಂದಾಗಿ  ಕೊಡಗಿನ ಬೋಯಿಕೇರಿ ತಿರುವಿನಲ್ಲಿ  ವೇಗವಾಗಿ ಬರುತ್ತಿದ್ದ ಮಾರುತಿ 800 ಕಾರ್ ಸ್ಕಿಡ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಕಾರು  ನೇರವಾಗಿ ಪಕ್ಕದ ಸಣ್ಣ ಕಂದಕ್ಕೆ  ಉರುಳಿಬಿದ್ದಿದೆ. ಈ  ರಸ್ತೆ ಅಪಘಾತ ಕುರಿತ ವಿಡಿಯೋ ಇದೀಗ  ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Viral Video: ವೈರಲ್​​ ಆಗುತ್ತಿದೆ ಎದೆ ಝಲ್ ಎನಿಸುವ ಕಾರು ಅಪಘಾತ 
ಮಾಲಾಶ್ರೀ ಅಂಚನ್​
| Edited By: |

Updated on: Jan 06, 2024 | 1:16 PM

Share

ವಿಶೇಷವಾಗಿ ಮಳೆಯ ಸಂದರ್ಭದಲ್ಲಿ ವಾಹನ ಚಲಾಯಿಸುವಾಗ ಪ್ರತಿಯೊಂದು ಸಣ್ಣ ವಿಷಯಕ್ಕೂ ವಿಶೇಷ ಗಮನ ನೀಡಬೇಕಾಗುತ್ತದೆ. ಏಕೆಂದ್ರೆ  ಮಳೆಯಿಂದಾಗಿ  ರಸ್ತೆ ಗುಂಡಿ, ಗೋಚರದ ಕೊರತೆ, ಜಾರು ಮೇಲ್ಮೈಗಳ  ಕಾರಣದಿಂದಾಗಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಗಳು ಸಂಭವಿಸುತ್ತವೆ. ಇದೇ ಕಾರಣಕ್ಕೆ ಮಳೆಯ ಸಂದರ್ಭಗಳಲ್ಲಿ ರಸ್ತೆಗಳಲ್ಲಿ ನಿಧಾನವಾಗಿ ವಾಹನಗಳನ್ನು ಚಲಾಯಿಸಬೇಕು ಹಾಗೂ ವಾಹನ ಚಲಾಯಿಸುವಾಗ ಬಹಳ ಜಾಗರೂಕರಾಗಿರಬೇಕು. ಇದೇ ರೀತಿ ಮೊನ್ನೆ  ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಉಂಟಾದ ದಿಢೀರ್ ಮಳೆಯಿಂದಾಗಿ ಕೊಡಗಿನ ಬೋಯಿಕೇರಿ ತಿರುವಿನಲ್ಲಿ ವೇಗವಾಗಿ ಬರುತ್ತಿದ್ದಂತಹ ಮಾರುತಿ 800 ಕಾರು ಸ್ಕಿಡ್ ಆಗಿ ಚಾಲಕನ ನಿಯಂತ್ರಣ ತಪ್ಪಿ ಕಾರು ನೇರವಾಗಿ ಪಕ್ಕದ ಸಣ್ಣ ಕಂದಕಕ್ಕೆ  ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.  ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

@kodaguConnect ಎಂಬ X ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ವಿಡಿಯೋದಲ್ಲಿ ಮೊನ್ನೆ ಸುರಿದ ದಿಢೀರ್ ಮಳೆಯಿಂದಾಗಿ ಕೊಡಗಿನ ಬೋಯಿಕೇರಿ ತಿರುವಿನ ರಸ್ತೆಯಲ್ಲಿ ವಾಹನಗಳು ನಿಧಾನಕ್ಕೆ ಹೋಗುತ್ತಿದ್ದ ವೇಳೆಯಲ್ಲಿ ಮುಂದೆಯಿಂದ ವೇಗವಾಗಿ ಬಂದಂತಹ ಮಾರುತಿ 800 ಕಾರು ಸ್ಕಿಡ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಕ್ಕದ ಸಣ್ಣ ಕಂದಕ್ಕೆ ಹೋಗಿ ಬೀಳುವಂತಹ ಭೀಕರ  ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ನಮ್ಮ ಕೊಡಗು ಪ್ರವಾಸಿ ತಾಣವೇ ಹೊರತು, ಕಸದ ತೊಟ್ಟಿಯಲ್ಲ, ಪ್ರವಾಸಿಗರಿಗೆ ಚಳಿ ಬಿಡಿಸಿದ ಯುವಕ 

ವಿಡಿಯೋ ಇಲ್ಲಿದೆ:

ಜನವರಿ 04 ರಂದು ಹಂಚಿಕೊಳ್ಳಲಾದ ಈ ವಿಡಿಯೋಗೆ ಹಲವಾರು ಕಮೆಂಟ್ಸ್ಗಳು ಹರಿದು ಬಂದಿವೆ. ಒಬ್ಬ ಬಳಕೆದಾರರು ʼವಾಹನವನ್ನು ವೇಗವಾಗಿ ಚಲಾಯಿಸಿದ ಪರಿಣಾಮ ಕಾರು ಸ್ಕಿಡ್ ಆಗಿದೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇಂತಹ ತಿರುವಿನ ಪ್ರದೇಶಗಳಲ್ಲಿ ನಿಧಾನವಾಗಿ ಬಹಳ ಜಾಗರೂಕತೆಯಿಂದ ವಾಹನ ಚಲಾಯಿಸಿʼ ಎಂದು ಸಲಹೆ ನೀಡಿದ್ದಾರೆ.  ಇನ್ನೂ ಅನೇಕರು ಮಳೆಯ ಸಂದರ್ಭದಲ್ಲಿ ಇಷ್ಟು ವೇಗವಾಗಿ ವಾಹನ ಚಲಾಯಿಸುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್