AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆ ಎಂದರೇನು?; ಇಷ್ಟುದ್ದ ಉತ್ತರ ಬರೆದರೂ ಹತ್ತಕ್ಕೆ ಸೊನ್ನೆ ಯಾಕೆ ಕೊಟ್ಟರು?

What is Marriage : ಸಮಾಜ ಅಧ್ಯಯನ ಪರೀಕ್ಷೆಯಲ್ಲಿ ಕೇಳಿದ ಪ್ರಶ್ನೆಗೆ ಈ ವಿದ್ಯಾರ್ಥಿ/ನಿ ಉತ್ತರವನ್ನೇನೋ ಬರೆದನು/ಳು. ಆದರೆ ಶಿಕ್ಷಕರು ಸೊನ್ನೆ ಕೊಟ್ಟರು. ನಿಮಗೂ ನಗು ತರುತ್ತಿದೆಯೇ ಈ ವಿಷಯ? ನೆಟ್ಟಿಗರಂತೂ ಬಿದ್ದುಬಿದ್ದು ನಗುತ್ತಿದ್ದಾರೆ.

ಮದುವೆ ಎಂದರೇನು?; ಇಷ್ಟುದ್ದ ಉತ್ತರ ಬರೆದರೂ ಹತ್ತಕ್ಕೆ ಸೊನ್ನೆ ಯಾಕೆ ಕೊಟ್ಟರು?
ಉತ್ತರ ಪತ್ರಿಕೆ
TV9 Web
| Updated By: ಶ್ರೀದೇವಿ ಕಳಸದ|

Updated on:Oct 12, 2022 | 3:44 PM

Share

Trending : ಅದು ಸಮಾಜ ಅಧ್ಯಯನ ಪರೀಕ್ಷೆ. ಆ ಪ್ರಶ್ನೆಗೆ ಹತ್ತು ಅಂಕಗಳು. ಕೇಳಿರುವ ಪ್ರಶ್ನೆಗೆ ಸಂಕ್ಷಿಪ್ತವಾಗಿ ಉತ್ತರ ಬರೆಯಬೇಕು. ಎಲ್ಲ ವಿದ್ಯಾರ್ಥಿಗಳು ಅವರವರ ತಿಳಿವಳಿಕೆಗೆ ಅನುಸಾರ ಉತ್ತರ ಬರೆದರು. ತಕ್ಕಮಟ್ಟಿಗೆ ಉತ್ತರಗಳಿಗೆ ಅಂಕಗಳನ್ನೂ ಪಡೆದುಕೊಂಡರು. ಆದರೆ ಒಬ್ಬ ವಿದ್ಯಾರ್ಥಿ/ವಿದ್ಯಾರ್ಥಿನಿ ಮಾತ್ರ ಹತ್ತು  ಅಂಕಕ್ಕೆ ಸೊನ್ನೆ ಗಳಿಸಿದನು/ಳು. ಆ ಉತ್ತರ ಪತ್ರಿಕೆ ಇದೀಗ ವೈರಲ್ ಆಗುತ್ತಿದೆ. ಕಾರಣವೇನು? ನೆಟ್ಟಿಗರೆಲ್ಲ ಬಿದ್ದುಬಿದ್ದು ನಗುತ್ತಿದ್ದಾರೆ. ಆದರೆ ಹೀಗೆ ಇದು ನಕ್ಕು ಹಗುರಾಗುವಂಥ ವಿಷಯವೇ?

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ನೀನೀಗ ದೊಡ್ಡ ಹೆಣ್ಣುಮಗಳು, ನಿನ್ನನ್ನು ಪೋಷಿಸಲು ನಮಗೆ ಆಗದು, ಹಾಗಾಗಿ ನೀನೇ ನಿನ್ನ ಹುಡುಗನನ್ನು ಹುಡುಕಿಕೋ ಎಂದು ಹುಡುಗಿಯ ಅಪ್ಪಅಮ್ಮ ಹೇಳುತ್ತಾರೆ. ನೀನೀಗ ದೊಡ್ಡವನಾಗಿದ್ದೀಯಾ ಹೋಗು ಮದುವೆಯಾಗು ಎಂದು ತಮ್ಮ ಮಗನ ಮೇಲೆ ಕೂಗಾಡುತ್ತಿರುವ ತಂದೆತಾಯಿಗಳ ಬಳಿ ಆಕೆ ಹೋಗುತ್ತಾಳೆ. ಹುಡುಗ ಮತ್ತು ಹುಡುಗಿ ಪರಸ್ಪರ ಖುಷಿಯಿಂದ ಒಪ್ಪಿಕೊಂಡು ಒಟ್ಟಿಗೆ ಬಾಳಲು ತೀರ್ಮಾನಿಸುತ್ತಾರೆ. ಇದೇ ಮದುವೆ.

ಇದು ಮದುವೆಯ ಬಗ್ಗೆ ವಿದ್ಯಾರ್ಥಿ/ವಿದ್ಯಾರ್ಥಿನಿ ವ್ಯಾಖ್ಯಾನಿಸಿದುದರ ಸಾರಾಂಶ. ಓದಿದಾಗ ನಗು ಬರುವುದು ಸಹಜ. ಆದರೆ ಮದುವೆಯಂತಹ ಸಂಕೀರ್ಣ ವಿಷಯವನ್ನು ಗ್ರಹಿಸುವುದು, ವಿವರಿಸುವುದು ನಿಜಕ್ಕೂ ಇಂದಿನ ಕಾಲಮಾನದಲ್ಲಿ ಸುಲಭವಲ್ಲ. ಅದರಲ್ಲೂ ವಿದ್ಯಾರ್ಥಿಗಳಿಗೆ!

ಎಲ್ಲರಂತೆ ಪಠ್ಯದಲ್ಲಿಯ ವ್ಯಾಖ್ಯಾನವನ್ನಷ್ಟೇ ಬಾಯಿಪಾಠ ಮಾಡಿ ಬರೆದಿದ್ದರೆ ಆ ವಿದ್ಯಾರ್ಥಿ/ವಿದ್ಯಾರ್ಥಿನಿ ಶಭಾಷ್​ ಎನ್ನಿಸಿಕೊಳ್ಳುತ್ತಿದ್ದನು/ಳು. ಅದು ವೈರಲ್ ಆಗುತ್ತಿರಲಿಲ್ಲ. ವೈರಲ್ ಆಗಿದೆ ಎಂದರೆ ಅದು ಯಾರ ಜವಾಬ್ದಾರಿ?

ಈ ಉತ್ತರದಲ್ಲಿ ಪ್ರಕ್ಷುಬ್ಧತೆ ಇದೆ. ಆಕೆ/ಆತ ಹೀಗೆ ಉತ್ತರ ಬರೆದಿದ್ದೂ ತಪ್ಪಲ್ಲ. ಪಠ್ಯದಲ್ಲಿರುವ/ಸಾಮಾನ್ಯ ಗ್ರಹಿಕೆಯ ಸ್ವಂತ ವ್ಯಾಖ್ಯಾನವನ್ನು ನಿರೀಕ್ಷಿಸಿದ್ದೂ ಶಿಕ್ಷಕರ ತಪ್ಪಲ್ಲ. ಆದರೆ ಓದಿ ನಕ್ಕಿದ್ದು ಮಾತ್ರ ತಪ್ಪು. ಇದು ಗಂಭೀರ ಮತ್ತು ಸೂಕ್ಷ್ಮ ವಿಷಯ ಅಲ್ಲವೇ? ಮಕ್ಕಳಿಗೆ ಯಾವ ವಯಸ್ಸಿನಲ್ಲಿ ಯಾವ ತಿಳಿವಳಿಕೆಗಳನ್ನು ಹೇಗೆ ನೀಡಬೇಕು ಎನ್ನುವುದು ಪೋಷಕರ ಮತ್ತು ಶಿಕ್ಷಕರ ಜವಾಬ್ದಾರಿ. ಇಲ್ಲವಾದಲ್ಲಿ ಕಂಡದ್ದೆ ಸತ್ಯ, ಗ್ರಹಿಸಿದ್ದೇ ತಿಳಿವಳಿಕೆ.

ಯೋಚಿಸಿ.

ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ 

Published On - 2:59 pm, Wed, 12 October 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?