AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃತ್ತಿಯಿಂದ ಕಳ್ಳನಾದರೂ ಇವನ ಧಾರ್ಮಿಕ ಶ್ರದ್ಧೆ ಪ್ರಶ್ನಾತೀತವಾದದ್ದು!

ದೇಹವನ್ನು ಬಾಗಿಸಿ ದೇವಿಗೆ ನಮಸ್ಕರಿಸಿದ ನಂತರ ಅವನು ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯಲು ಮುಂದಾಗುತ್ತಾನೆ. ಸದರಿ ಘಟನೆಯು ಆಗಸ್ಟ್ 5 ರಂದು ನಡೆದಿದ್ದು ಕಳ್ಳನನ್ನು ಸೆರೆ ಹಿಡಿಯಲು ಪೊಲೀಸರು ಸಿಸಿಟಿವಿ ಫುಟೇಜನ್ನು ಪರಿಶೀಲನೆ ಮಾಡುತ್ತಿದ್ದಾರೆ.

ವೃತ್ತಿಯಿಂದ ಕಳ್ಳನಾದರೂ ಇವನ ಧಾರ್ಮಿಕ ಶ್ರದ್ಧೆ ಪ್ರಶ್ನಾತೀತವಾದದ್ದು!
ದೇವಿಯ ಸನ್ನಿಧಿಯಲ್ಲಿ ಕಳ್ಳ
TV9 Web
| Edited By: |

Updated on: Aug 10, 2022 | 5:15 PM

Share

ಮಧ್ಯಪ್ರದೇಶದ ಜಬಲ್ ಪುರ (Jabalpur) ಜಿಲ್ಲೆಯ ಸುಖಾ ಹೆಸರಿನ ಗ್ರಾಮದಲ್ಲಿ ಕಳ್ಳನೊಬ್ಬ ದೇವಸ್ಥಾನದ ಒಳಭಾಗದಲ್ಲಿರುವ ಗರ್ಭಗುಡಿಯನ್ನು ಪ್ರವೇಶಿಸಿ ಅಲ್ಲಿದ್ದ ಹುಂಡಿ ಪೆಟ್ಟಿಗೆಯನ್ನು (offering box) ಹೊತ್ತೊಯ್ಯುವ ಮುನ್ನ ಅಲ್ಲಿರುವ ದೇವಿಯ (Goddess) ಮೂರ್ತಿಗೆ ಶ್ರದ್ಧೆಯಿಂದ ಕೈಮುಗಿಯುವುದು ಸಿಸಿಟಿವಿ ಕೆಮೆರಾದಲ್ಲಿ ಸೆರೆಯಾಗಿದೆ ಮತ್ತು ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ. ಕಳ್ಳನ ನಡಾವಳಿ ನೆಟ್ಟಿಗರ ಗಮನ ಸೆಳೆಯುತ್ತಿದ್ದು ಸಾಕಷ್ಟು ಚರ್ಚೆಗೂ ಗ್ರಾಸವಾಗಿ ಸಾವಿರಾರು ವ್ಯೂಗಳನ್ನು ಕಲೆಹಾಕಿಕೊಂಡಿದೆ.

ವಿಡಿಯೋದಲ್ಲಿ ಮುಖಕ್ಕೆ ಮುಸುಕು ಹಾಕಿಕೊಂಡಿರುವ ಕಳ್ಳ ಪರದೆಯನ್ನು ಸರಿಸಿ ಗರ್ಭಗುಡಿಯನ್ನು ಪ್ರವೇಶಿಸುತ್ತಾನೆ ಅದರೆ ದೇವಿಯ ದೊಡ್ಡ ವಿಗ್ರಹವನ್ನು ಕಂಡು ಅವನು ಸ್ತಂಭೀಭೂತನಾಗುತ್ತಾನೆ.

ದೇಹವನ್ನು ಬಾಗಿಸಿ ದೇವಿಗೆ ನಮಸ್ಕರಿಸಿದ ನಂತರ ಅವನು ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದಿಯಲು ಮುಂದಾಗುತ್ತಾನೆ. ಸದರಿ ಘಟನೆಯು ಆಗಸ್ಟ್ 5 ರಂದು ನಡೆದಿದ್ದು ಕಳ್ಳನನ್ನು ಸೆರೆ ಹಿಡಿಯಲು ಪೊಲೀಸರು ಸಿಸಿಟಿವಿ ಫುಟೇಜನ್ನು ಪರಿಶೀಲನೆ ಮಾಡುತ್ತಿದ್ದಾರೆ.

ದೇವಸ್ಥಾನದ ಎರಡು ಗಂಟೆಗಳು ಮತ್ತು ಸ್ಥಳೀಯರು ದೇವಿಗೆ ಕಾಣಿಕೆಯಾಗಿ ಅರ್ಪಸಿದ ಬೆಲೆಬಾಳುವ ವಸ್ತುಗಳನ್ನು ಸಹ ಕಳ್ಳ ಕದ್ದಿರುವನೆಂದು ಪೊಲೀಸರು ಹೇಳಿದ್ದಾರೆ. ವಿಡಿಯೋ ಟ್ವಿಟರ್ ನಲ್ಲಿ ಪೋಸ್ಟ್ ಆದಾಗಿನಿಂದ ಅದನ್ನು ನೋಡಿರುವ ಜನ ತಮಾಷೆಯಾಗಿ ಕಾಮೆಂಟ್ ಮಾಡುತ್ತಿದ್ದಾರೆ.

‘ಭಕ್ತನೊಬ್ಬ ದೇವರ ಸನ್ನಿಧಾನದಿಂದ ಏನನ್ನಾದರೂ ಕಳುವು ಮಾಡಿದರೆ ಅದು ಕಳ್ಳತನವೆನಿಸಿಕೊಳ್ಳುವುದಿಲ್ಲ. ತನ್ನ ಕಷ್ಟದ ಸಮಯದಲ್ಲಿ ಒಬ್ಬ ಭಕ್ತ ದೇವರಿಂದ ಸಹಾಯ ಯಾಚಿಸುತ್ತಾನೆ!’ ಅಂತ ಒಬ್ಬರು ಟ್ಟೀಟ್ ಮಾಡಿದ್ದಾರೆ.

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ